AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಸಾವಿನ ನೋವಲ್ಲೂ SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ; ಪರೀಕ್ಷೆ ನಂತರ ತಂದೆಯ ಅಂತ್ಯಕ್ರಿಯೆ

ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್​ನಲ್ಲಿ ಗಣಿತ ಪರೀಕ್ಷೆ ಬರೆದ ನಂತರ ತಂದೆಯ ಅಂತ್ಯ ಸಂಸ್ಕಾರದಲ್ಲಿ ವಿದ್ಯಾರ್ಥಿನಿ ಬಿ. ವೈಷ್ಣವಿ ಭಾಗಿ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಇಂದು (ಏಪ್ರಿಲ್ 4) ಗಣಿತ ಪರೀಕ್ಷೆ ನಡೆಯುತ್ತಿದ್ದು ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದಾರೆ.

ತಂದೆ ಸಾವಿನ ನೋವಲ್ಲೂ SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ; ಪರೀಕ್ಷೆ ನಂತರ ತಂದೆಯ ಅಂತ್ಯಕ್ರಿಯೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Apr 04, 2022 | 10:16 AM

ಬೆಂಗಳೂರು: ತಂದೆ ಸಾವಿನ ನೋವಿನಲ್ಲೂ SSLC ಪರೀಕ್ಷೆಗೆ ವಿದ್ಯಾರ್ಥಿನಿ ಬಿ. ವೈಷ್ಣವಿ ಎಂಬವರು ಹಾಜರಾಗಿದ್ದಾರೆ. ತಂದೆ ಮೃತಪಟ್ಟಿದ್ದರೂ ಪರೀಕ್ಷೆ ತಪ್ಪಿಸದೆ ಹಾಜರಾಗಿದ್ದಾರೆ. ನಗರದ ಹತ್ತನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೂ ಪರೀಕ್ಷೆಗೆ ಹಾಜರಾಗಿದ್ದಾರೆ. ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್​ನಲ್ಲಿ ಗಣಿತ ಪರೀಕ್ಷೆ ಬರೆದ ನಂತರ ತಂದೆಯ ಅಂತ್ಯ ಸಂಸ್ಕಾರದಲ್ಲಿ ವಿದ್ಯಾರ್ಥಿನಿ ಬಿ. ವೈಷ್ಣವಿ ಭಾಗಿ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಇಂದು (ಏಪ್ರಿಲ್ 4) ಗಣಿತ ಪರೀಕ್ಷೆ ನಡೆಯುತ್ತಿದ್ದು ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದಾರೆ.

ತಂದೆ ಸಾವಿನಲ್ಲೂ SSLC ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿನಿ, ಪರೀಕ್ಷೆ ಬಳಿಕ ತಂದೆ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ನೋವಿನಲ್ಲೂ ಇಂದು ನಡೆಯುತ್ತಿರುವ ಗಣಿತ ಪರೀಕ್ಷೆ ತಪ್ಪಿಸಿಕೊಂಡಿಲ್ಲ. ಬಸವನಗುಡಿಯ KPS ಶಾಲೆಯ ಕೇಂದ್ರದಲ್ಲಿ ಇಂದು ಪರೀಕ್ಷೆ ನಡೆಯುತ್ತಿದೆ. ಬಸವನಗುಡಿಯ ನ್ಯಾಷನ್ ಹೈಸ್ಕೂಲ್ ವಿದ್ಯಾರ್ಥಿನಿ ವೈಷ್ಣವಿ. ಬಿ ತಂದೆ ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮಧ್ಯೆ ಮನೆಯಲ್ಲಿ ಸೂತಕದ ಛಾಯೆ ಇದ್ದರೂ ವಿದ್ಯಾರ್ಥಿನಿ ಪರೀಕ್ಷೆಗೆ ಗೈರಾಗಿಲ್ಲ. ವರ್ಷವಿಡೀ ಓದಿದ ಪರೀಕ್ಷೆಗೆ ತೊಂದರೆ ಆಗಬಾರದು ಎಂದು ಪರೀಕ್ಷೆಗೆ ಹಾಜರಾಗಿದ್ದಾರೆ.

ಪರೀಕ್ಷೆ ಬರೆಯುವಂತೆ ಕುಟುಂಬಸ್ಥರು ಸಲಹೆ ನೀಡಿದ್ದಾರೆ. ಇಂದು ಬೆಳಗ್ಗೆ 10:30ಕ್ಕೆ ಆರಂಭವಾಗಲಿರುವ ಪರೀಕ್ಷೆಯನ್ನು ವಿದ್ಯಾರ್ಥಿನಿ ಎದುರಿಸಲಿದ್ದಾರೆ. ಮಧ್ಯಾಹ್ನ 1:45ಕ್ಕೆ ಗಣಿತ ಪರೀಕ್ಷೆ ಮುಗಿಯಲಿದೆ. ಇಂದಿನ ಪರೀಕ್ಷೆ ನಂತರ ವಿದ್ಯಾರ್ಥಿನಿ ತಂದೆ ಕಾರ್ಯ ಆರಂಭ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿ ಕುಟುಂಬಸ್ಥರು, ವಿದ್ಯಾರ್ಥಿನಿ ಸ್ಥೈರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಇಂದು (ಸೋಮವಾರ) ಎಸ್‌ಎಸ್‌ಎಲ್‌ಸಿ ಗಣಿತ, ಸಮಾಜಶಾಸ್ತ್ರ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರೆಗೆ ಪರೀಕ್ಷೆ ನಡೆಯಲಿದೆ. ಏಪ್ರಿಲ್ 11ರ ವರೆಗೆ SSLC ಪರೀಕ್ಷೆ ನಡೆಯಲಿದೆ. 8 ಲಕ್ಷದ 60 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. 3,444 ಪರೀಕ್ಷಾ ಕೇಂದ್ರ, 45 ಸಾವಿರಕ್ಕೂ ಅಧಿಕ ಕೊಠಡಿಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಯ ಪ್ರವೇಶ ತೋರಿಸಿದ್ರೆ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಸೆಕ್ಷನ್ 144 ಜಾರಿ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಖಾಕಿ ಕಣ್ಗಾವಲು ಇರಲಿದೆ.

ಇದನ್ನೂ ಓದಿ: KSRTC ಬಸ್ ಪಾಸ್ ಅವಧಿ ಮುಕ್ತಾಯವಾಗಿದ್ದ ಹಿನ್ನೆಲೆ; ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ನಡುದಾರಿಯಲ್ಲಿ ಬಿಟ್ಟ ಸಿಬ್ಬಂದಿ

ಇದನ್ನೂ ಓದಿ: ಎಸ್ಎಸ್ಎಲ್​ಸಿ ಪರೀಕ್ಷೆ: ಮೊದಲ ದಿನ 20 ಸಾವಿರ, 2ನೇ ದಿನ 22 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಾರಣ ಏನು?

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ