AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿ ಶಾಮಕ ದಳದ ಸಿಬ್ಬಂದಿ ಜೀವಕ್ಕೆ ಬೆಲೆಯೇ ಇಲ್ವಾ? ಚಿಕಿತ್ಸೆಗೆ ಬಂದ ಸಿಬ್ಬಂದಿಯ ಸರ್ಕಾರದ ವಿಮೆ ತಿರಸ್ಕರಿಸಿದ ಸೇಂಟ್‌ ಜಾನ್ಸ್ ಆಸ್ಪತ್ರೆ

ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ಅಗ್ನಿಶಾಮಕ ದಳ ಅಧಿಕಾರಿ ಸೇಂಟ್‌ ಜಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಸರ್ಕಾರದ ಆರೋಗ್ಯ ವಿಮೆ ಅಡಿ ಚಿಕಿತ್ಸೆ ನೀಡಲು ಅಧಿಕಾರಿಗಳು ಆಸ್ಪತ್ರೆ ಆಡಳಿತಕ್ಕೆ ಮನವಿ ಮಾಡಿದ್ದಾರೆ. ಆದ್ರೆ ಅಗ್ನಿ ಶಾಮಕ ದಳದ ಸಿಬ್ಬಂದಿ ಮನವಿಯನ್ನು ಆಸ್ಪತ್ರೆ ತಿರಸ್ಕರಿಸಿದ್ದು ಹಣ ಕಟ್ಟಿದ್ರೆ ಮಾತ್ರ ಚಿಕಿತ್ಸೆ ಕೊಡುವುದಾಗಿ ತಕರಾರು ಮಾಡಿದೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ಜೀವಕ್ಕೆ ಬೆಲೆಯೇ ಇಲ್ವಾ? ಚಿಕಿತ್ಸೆಗೆ ಬಂದ ಸಿಬ್ಬಂದಿಯ ಸರ್ಕಾರದ ವಿಮೆ ತಿರಸ್ಕರಿಸಿದ ಸೇಂಟ್‌ ಜಾನ್ಸ್ ಆಸ್ಪತ್ರೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 18, 2021 | 6:44 PM

Share

ಬೆಂಗಳೂರು: ಎಷ್ಟೊತ್ತಲ್ಲಾದರೂ ಆಗಲಿ, ಎಲ್ಲೇ ಆಗಲಿ.. ಬೆಂಕಿ ಬಿದ್ದಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ಉಳಿಸಲು ಬೆಂಕಿ ಹಾರಿಸಲು ಧಾವಿಸುವ ಅಗ್ನಿ ಶಾಮಕ ದಳದ ಸಿಬ್ಬಂದಿ ಜೀವಕ್ಕೆ ಬೆಲೆಯೇ ಇಲ್ವಾ? ಜನರ ಜೀವ ಉಳಿಸಲು ತಮ್ಮ ಜೀವ ಪಣಕ್ಕಿಡುವ ಸಿಬ್ಬಂದಿಗೆ ಈ ರೀತಿ ಮಾಡುವುದಾ ಎಂಬ ಪ್ರಶ್ನೆ ಎದ್ದಿದೆ. ಏಕೆಂದರೆ ಸೇಂಟ್‌ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸರ್ಕಾರದ ಆರೋಗ್ಯ ವಿಮೆ ತಿರಸ್ಕಾರ ಮಾಡಲಾಗಿದೆ.

ನವೆಂಬರ್ 17ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ಅಗ್ನಿಶಾಮಕ ದಳ ಅಧಿಕಾರಿ ಸೇಂಟ್‌ ಜಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಸರ್ಕಾರದ ಆರೋಗ್ಯ ವಿಮೆ ಅಡಿ ಚಿಕಿತ್ಸೆ ನೀಡಲು ಅಧಿಕಾರಿಗಳು ಆಸ್ಪತ್ರೆ ಆಡಳಿತಕ್ಕೆ ಮನವಿ ಮಾಡಿದ್ದಾರೆ. ಆದ್ರೆ ಅಗ್ನಿ ಶಾಮಕ ದಳದ ಸಿಬ್ಬಂದಿ ಮನವಿಯನ್ನು ಆಸ್ಪತ್ರೆ ತಿರಸ್ಕರಿಸಿದ್ದು ಹಣ ಕಟ್ಟಿದ್ರೆ ಮಾತ್ರ ಚಿಕಿತ್ಸೆ ಕೊಡುವುದಾಗಿ ತಕರಾರು ಮಾಡಿದೆ.

ನಂತರ ಅಗ್ನಿ ಶಾಮಕ ದಳದ ಅಧಿಕಾರಿಗಳಿಂದ MOU ಮಾಡಲಾಗಿದೆ. ಚಿಕಿತ್ಸೆ ವೆಚ್ಚ ಭರಿಸುವ ಒಪ್ಪಂದ ಪತ್ರ ಬರೆದುಕೊಡುವುದಾಗಿ ಅಧಿಕಾರಿಗಳು ಒಪ್ಪಿಕೊಂಡಿದ್ದು ಈಗಾಗಲೇ 25 ಸಾವಿರ ರೂಪಾಯಿ ಕೈಯಿಂದ ಕಟ್ಟಿದ್ದಾರೆ. ಸರ್ಕಾರದ ವಿಮೆಗೆ ಮೂರು ಕಾಸಿನ ಬೆಲೆ ಇಲ್ಲದಂತಾಗಿದೆ.

ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಎಲ್ಲೇ ಬೆಂಕಿ ಬಿದ್ದರು ಅದನ್ನು ಹಾರಿಸಲು ಬೆಂಕಿ ಜೊತೆ ಗುದ್ದಾಡುವ ಸಿಬ್ಬಂದಿಗೆ ಸರ್ಕಾರದ ವಿಮೆ ಯಾವುದೇ ಪ್ರಯೋಜನಕ್ಕೆ ಬರುತ್ತಿಲ್ಲ. ಸರ್ಕಾರ ವಿಮೆ ಹಣ ಪಾವತಿಸದ ಹಿನ್ನೆಲೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಯಲ್ಲಿ ಹಿಂದೇಟು ಹಾಕಲಾಗುತ್ತಿದೆ. ಹೀಗಾದರೆ ಸಿಬ್ಬಂದಿ ಜೀವಕ್ಕೆ ಭದ್ರತೆಯೇ ಇಲ್ಲದಂತಾಗುತ್ತೆ.

ಇದನ್ನೂ ಓದಿ: Chemical Castration: ಪಾಕಿಸ್ತಾನದಲ್ಲಿ ಅತ್ಯಾಚಾರಿಗಳಿಗೆ ಕೆಮಿಕಲ್ ಕ್ಯಾಸ್ಟ್ರೇಷನ್‌ ಶಿಕ್ಷೆ ನೀಡಲು ಒಪ್ಪಿಗೆ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ