AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vir Das Show ಬಲಪಂಥೀಯ ಸಂಘಟನೆಯಿಂದ ಆಕ್ಷೇಪ; ಬೆಂಗಳೂರಿನಲ್ಲಿ ನಡೆಯಲಿದ್ದ ಶೋ ರದ್ದು ಮಾಡಿದ ವೀರ್ ದಾಸ್

ವೀರ್ ದಾಸ್ ಅವರ ಕಾರ್ಯಕ್ರಮವು ಹಿಂದೂ ಭಾವನೆಗಳನ್ನು ನೋಯಿಸುತ್ತದೆ ಮತ್ತು ಭಾರತವನ್ನು ಕೆಟ್ಟ ರೀತಿಯಲ್ಲಿ ತೋರಿಸುತ್ತದೆ  ಎಂದು ಬಲಪಂಥೀಯ ಸಂಘಟನೆಯೊಂದು ಆರೋಪಿಸಿದ ಕೆಲವು ದಿನಗಳ ನಂತರ ಈ ಶೋ ರದ್ದು ಮಾಡಲಾಗಿದೆ.

Vir Das Show ಬಲಪಂಥೀಯ ಸಂಘಟನೆಯಿಂದ ಆಕ್ಷೇಪ; ಬೆಂಗಳೂರಿನಲ್ಲಿ ನಡೆಯಲಿದ್ದ ಶೋ ರದ್ದು ಮಾಡಿದ ವೀರ್ ದಾಸ್
ವೀರ್ ದಾಸ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 10, 2022 | 5:44 PM

Share

ಬೆಂಗಳೂರಿನಲ್ಲಿ ಇಂದು ನಡೆಯಲಿದ್ದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ (Vir Das)ಅವರ  ಶೋ ಅನ್ನು ರದ್ದುಗೊಳಿಸಲಾಗಿದೆ ಎಂದು ಅವರು ಇನ್​​ಸ್ಟಾಗ್ರಾಂ(Instagram) ನಲ್ಲಿ ತಿಳಿಸಿದ್ದಾರೆ. ವೀರ್ ದಾಸ್ ಅವರ ಕಾರ್ಯಕ್ರಮವು ಹಿಂದೂ ಭಾವನೆಗಳನ್ನು ನೋಯಿಸುತ್ತದೆ ಮತ್ತು ಭಾರತವನ್ನು ಕೆಟ್ಟ ರೀತಿಯಲ್ಲಿ ತೋರಿಸುತ್ತದೆ  ಎಂದು ಬಲಪಂಥೀಯ ಸಂಘಟನೆಯೊಂದು ಆರೋಪಿಸಿದ ಕೆಲವು ದಿನಗಳ ನಂತರ ಈ ಶೋ ರದ್ದು ಮಾಡಲಾಗಿದೆ. ಅನಿವಾರ್ಯ ಸಂದರ್ಭದಿಂದಾಗಿ ನಾವು ಬೆಂಗಳೂರು (Bangalore) ಕಾರ್ಯಕ್ರಮವನ್ನು ಮುಂದೂಡುತ್ತಿದ್ದೇವೆ. ಹೊಸ ವಿವರಗಳು ಮತ್ತು ದಿನಾಂಕಗಳು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ವೀರ್ ದಾಸ್ ಹೇಳಿದ್ದು, ಶೋ ರದ್ದಾಗಿರುವುದಕ್ಕೆ ಕ್ಷಮೆ ಕೇಳಿದ್ದಾರೆ.

View this post on Instagram

A post shared by Vir Das (@virdas)

ಹಿಂದೂ ಜನಜಾಗೃತಿ ಸಮಿತಿ ವೀರ್ ದಾಸ್ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಕಳೆದ ವರ್ಷ ಯುಎಸ್‌ನಲ್ಲಿ ವೈರಲ್ ಆದ “ಟು ಇಂಡಿಯಾಸ್” ಸ್ವಗತದಿಂದ ಭಾರಿ ಟೀಕೆಗಳನ್ನು  ಎದುರಿಸಿದ ಈ ಕಾಮಿಡಿಯನ್, ಇಂದು(ಗುರುವಾರ) ಮಲ್ಲೇಶ್ವರಂನ ಚೌಡಯ್ಯ ಸ್ಮಾರಕ ಭವನದಲ್ಲಿ ಕಾರ್ಯಕ್ರಮವನ್ನು ನಡೆಸಲು ಸಿದ್ಧರಾಗಿದ್ದರು.

ಈ ಹಿಂದೆ ಅವರು ಅಮೆರಿಕದ ವಾಷಿಂಗ್ಟನ್ ಡಿಸಿಯ ಜಾನ್ ಎಫ್ ಕೆನಡಿ ಸೆಂಟರ್‌ನಲ್ಲಿ ಮಹಿಳೆಯರು, ನಮ್ಮ ಪ್ರಧಾನಿ ಮತ್ತು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು ದೇಶವನ್ನು ಅವಹೇಳನ ಮಾಡಿದ್ದರು. ತಮ್ಮ ಶೋದಲ್ಲಿ ಅವರು ಭಾರತದಲ್ಲಿ ನಾವು ಹಗಲಿನಲ್ಲಿ ಮಹಿಳೆಯರನ್ನು ಪೂಜಿಸುತ್ತೇವೆ ಮತ್ತು ರಾತ್ರಿಯಲ್ಲಿ ಅತ್ಯಾಚಾರ ಮಾಡುತ್ತೇವೆ ಎಂದು ಹೇಳಿದ್ದರ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ಹೇಳಿದ್ದಾರೆ.

ಬೆಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಇಂತಹ ವಿವಾದಿತ ವ್ಯಕ್ತಿಗೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ಬಲಪಂಥೀಯ ಸಂಘಟನೆ ದೂರಿದೆ.

ಮತ್ತಷ್ಟು ಬೆಂಗಳೂರು ಜಿಲ್ಲೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Thu, 10 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ