AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಹೊಸ ಗೈಡ್​ಲೈನ್ಸ್; ನಾಳೆ ಬೆಳಗ್ಗೆಯಿಂದ ದೇಗುಲಗಳಲ್ಲಿ ಮಾಮೂಲಿಯಾಗಿ ಎಲ್ಲ ಚಟುವಟಿಕೆ

ರಾಜ್ಯ ಸರ್ಕಾರ ನಾಳೆಯಿಂದ ಅಮ್ಯೂಸ್​ಮೆಂಟ್​ ಪಾರ್ಕ್​​ ಓಪನ್​ಗೆ ಅನುಮತಿ ನೀಡಿದ್ದು, ಜಲ ಸಂಬಂಧಿತ ಯಾವುದೇ ಸಾಹಸ ಕ್ರೀಡೆಗಳಿಗೆ ಮಾತ್ರ ಅವಕಾಶ ಇಲ್ಲ.

Karnataka Unlock: ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಹೊಸ ಗೈಡ್​ಲೈನ್ಸ್; ನಾಳೆ ಬೆಳಗ್ಗೆಯಿಂದ ದೇಗುಲಗಳಲ್ಲಿ ಮಾಮೂಲಿಯಾಗಿ ಎಲ್ಲ ಚಟುವಟಿಕೆ
ಸಂಗ್ರಹ ಚಿತ್ರ
TV9 Web
| Edited By: |

Updated on: Jul 24, 2021 | 12:24 PM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಈಗಾಗಲೇ ಅನ್​ಲಾಕ್​ 4.0 (ಜುಲೈ 19) ಆರಂಭವಾಗಿದ್ದು, ನಾಳೆಯಿಂದ (ಜುಲೈ 25) ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಪ್ರಕಾರ ನಾಳೆಯಿಂದ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಎಂದಿನಂತೆ ಚಟುವಟಿಕೆ ನಡೆಯಲಿದ್ದು, ದೇಗುಲ, ಮಸೀದಿ, ಗುರುದ್ವಾರ, ಚರ್ಚ್​ಗಳಲ್ಲಿ ಧಾರ್ಮಿಕ ಚಟುವಟಿಕೆ ಆರಂಭವಾಗಲಿದೆ. ಆದರೆ ಯಾವುದೇ ಜಾತ್ರೆ, ಹಬ್ಬ, ಮೆರವಣಿಗೆಗಳಿಗೆ ಅವಕಾಶವಿಲ್ಲ ಎನ್ನುವುದು ಇಲ್ಲಿ ಮುಖ್ಯ.

ನಾಳೆಯಿಂದ ಅಮ್ಯೂಸ್​ಮೆಂಟ್​ ಪಾರ್ಕ್​​ ಓಪನ್​ಗೆ ಅನುಮತಿ ನೀಡಿದ್ದು, ಜಲ ಸಂಬಂಧಿತ ಯಾವುದೇ ಸಾಹಸ ಕ್ರೀಡೆಗಳಿಗೆ ಮಾತ್ರ ಅವಕಾಶ ಇಲ್ಲ. ಮೊದಲ ಅನ್​ಲಾಕ್​ ನಲ್ಲಿ ಬಸ್​, ಮೆಟ್ರೋ ಸಂಚಾರ ಸೇರಿದಂತೆ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿತ್ತು, ಬಳಿಕ ಮಾಲ್​ಗಳನ್ನು ನಿಯಮಾನುಸಾರ ತೆರೆಯಲು ಅವಕಾಶ ಕಲ್ಪಿಸಲಾಗಿತ್ತು. ನಂತರ ಅನ್​ ಲಾಕ್​ 4.0 ನಲ್ಲಿ ಸಿನಿಮಾ ಥಿಯೇಟರ್​ಗಳನ್ನು ಶೇ.50ರಷ್ಟು ಆಸನ ಭರ್ತಿಯೊಂದಿಗೆ ಆಗಸ್ಟ್​ 2 ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ.

ಆ ಮೂಲಕ ನೈಟ್​ ಕರ್ಫ್ಯೂ ಅನ್ನು ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ಕಡಿತಗೊಳಿಸಲಾಗಿದೆ. ಜತೆಗೆ ಪದವಿ ಕಾಲೇಜುಗಳನ್ನು ಜುಲೈ 26ರಿಂದ ಪ್ರಾರಂಭಿಸಲು ಅವಕಾಶ ನೀಡಲಾಗಿದೆ. ಆದರೆ ಕೊರೊನಾ ಮೊದಲ ಡೋಸ್ ಪಡೆದ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗೆ ಮಾತ್ರ ಅವಕಾಶ ಎಂಬ ಸೂಚನೆಯನ್ನು ರಾಜ್ಯ ಸರ್ಕಾರ ನೀಡಿದೆ. ಈಗ ಮತ್ತಷ್ಟು ಸಡಿಲಿಕೆಗೊಂಡಿದ್ದು, ಧಾರ್ಮಿಕ ಕೇಂದ್ರಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜುಲೈ 5 ರಿಂದ ಅನ್​ಲಾಕ್​ 3.0 ಜಾರಿ; ಸೋಮವಾರದಿಂದಲೇ ಪಬ್ ತೆರೆಯಲು ಅವಕಾಶ ಸಾಧ್ಯತೆ

Karnataka Unlock 4.0: ಕರ್ನಾಟಕದಲ್ಲಿ ಮತ್ತೆ ಸಡಿಲಗೊಳ್ಳುತ್ತಾ ಲಾಕ್​ಡೌನ್?; ಮುಂದಿನ ವಾರದಿಂದ ನೈಟ್​ ಕರ್ಫ್ಯೂ ತೆರವು ಸಾಧ್ಯತೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ