AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಹೊಸ ಗೈಡ್​ಲೈನ್ಸ್; ನಾಳೆ ಬೆಳಗ್ಗೆಯಿಂದ ದೇಗುಲಗಳಲ್ಲಿ ಮಾಮೂಲಿಯಾಗಿ ಎಲ್ಲ ಚಟುವಟಿಕೆ

ರಾಜ್ಯ ಸರ್ಕಾರ ನಾಳೆಯಿಂದ ಅಮ್ಯೂಸ್​ಮೆಂಟ್​ ಪಾರ್ಕ್​​ ಓಪನ್​ಗೆ ಅನುಮತಿ ನೀಡಿದ್ದು, ಜಲ ಸಂಬಂಧಿತ ಯಾವುದೇ ಸಾಹಸ ಕ್ರೀಡೆಗಳಿಗೆ ಮಾತ್ರ ಅವಕಾಶ ಇಲ್ಲ.

Karnataka Unlock: ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಹೊಸ ಗೈಡ್​ಲೈನ್ಸ್; ನಾಳೆ ಬೆಳಗ್ಗೆಯಿಂದ ದೇಗುಲಗಳಲ್ಲಿ ಮಾಮೂಲಿಯಾಗಿ ಎಲ್ಲ ಚಟುವಟಿಕೆ
ಸಂಗ್ರಹ ಚಿತ್ರ
TV9 Web
| Edited By: |

Updated on: Jul 24, 2021 | 12:24 PM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಈಗಾಗಲೇ ಅನ್​ಲಾಕ್​ 4.0 (ಜುಲೈ 19) ಆರಂಭವಾಗಿದ್ದು, ನಾಳೆಯಿಂದ (ಜುಲೈ 25) ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಪ್ರಕಾರ ನಾಳೆಯಿಂದ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಎಂದಿನಂತೆ ಚಟುವಟಿಕೆ ನಡೆಯಲಿದ್ದು, ದೇಗುಲ, ಮಸೀದಿ, ಗುರುದ್ವಾರ, ಚರ್ಚ್​ಗಳಲ್ಲಿ ಧಾರ್ಮಿಕ ಚಟುವಟಿಕೆ ಆರಂಭವಾಗಲಿದೆ. ಆದರೆ ಯಾವುದೇ ಜಾತ್ರೆ, ಹಬ್ಬ, ಮೆರವಣಿಗೆಗಳಿಗೆ ಅವಕಾಶವಿಲ್ಲ ಎನ್ನುವುದು ಇಲ್ಲಿ ಮುಖ್ಯ.

ನಾಳೆಯಿಂದ ಅಮ್ಯೂಸ್​ಮೆಂಟ್​ ಪಾರ್ಕ್​​ ಓಪನ್​ಗೆ ಅನುಮತಿ ನೀಡಿದ್ದು, ಜಲ ಸಂಬಂಧಿತ ಯಾವುದೇ ಸಾಹಸ ಕ್ರೀಡೆಗಳಿಗೆ ಮಾತ್ರ ಅವಕಾಶ ಇಲ್ಲ. ಮೊದಲ ಅನ್​ಲಾಕ್​ ನಲ್ಲಿ ಬಸ್​, ಮೆಟ್ರೋ ಸಂಚಾರ ಸೇರಿದಂತೆ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿತ್ತು, ಬಳಿಕ ಮಾಲ್​ಗಳನ್ನು ನಿಯಮಾನುಸಾರ ತೆರೆಯಲು ಅವಕಾಶ ಕಲ್ಪಿಸಲಾಗಿತ್ತು. ನಂತರ ಅನ್​ ಲಾಕ್​ 4.0 ನಲ್ಲಿ ಸಿನಿಮಾ ಥಿಯೇಟರ್​ಗಳನ್ನು ಶೇ.50ರಷ್ಟು ಆಸನ ಭರ್ತಿಯೊಂದಿಗೆ ಆಗಸ್ಟ್​ 2 ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ.

ಆ ಮೂಲಕ ನೈಟ್​ ಕರ್ಫ್ಯೂ ಅನ್ನು ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ಕಡಿತಗೊಳಿಸಲಾಗಿದೆ. ಜತೆಗೆ ಪದವಿ ಕಾಲೇಜುಗಳನ್ನು ಜುಲೈ 26ರಿಂದ ಪ್ರಾರಂಭಿಸಲು ಅವಕಾಶ ನೀಡಲಾಗಿದೆ. ಆದರೆ ಕೊರೊನಾ ಮೊದಲ ಡೋಸ್ ಪಡೆದ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗೆ ಮಾತ್ರ ಅವಕಾಶ ಎಂಬ ಸೂಚನೆಯನ್ನು ರಾಜ್ಯ ಸರ್ಕಾರ ನೀಡಿದೆ. ಈಗ ಮತ್ತಷ್ಟು ಸಡಿಲಿಕೆಗೊಂಡಿದ್ದು, ಧಾರ್ಮಿಕ ಕೇಂದ್ರಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜುಲೈ 5 ರಿಂದ ಅನ್​ಲಾಕ್​ 3.0 ಜಾರಿ; ಸೋಮವಾರದಿಂದಲೇ ಪಬ್ ತೆರೆಯಲು ಅವಕಾಶ ಸಾಧ್ಯತೆ

Karnataka Unlock 4.0: ಕರ್ನಾಟಕದಲ್ಲಿ ಮತ್ತೆ ಸಡಿಲಗೊಳ್ಳುತ್ತಾ ಲಾಕ್​ಡೌನ್?; ಮುಂದಿನ ವಾರದಿಂದ ನೈಟ್​ ಕರ್ಫ್ಯೂ ತೆರವು ಸಾಧ್ಯತೆ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು