AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪದಲ್ಲಿ ಒಂದೇ ದಿನ ಬಂಧನಕ್ಕೀಡಾದ ಐಎಎಸ್​-ಐಪಿಎಸ್ ಅಧಿಕಾರಿಗಳಿಬ್ಬರನ್ನೂ ಮನೆಗೆ ಕಳಿಸಿದ ರಾಜ್ಯ ಸರ್ಕಾರ

ಪಿಎಸ್‌ಐ ಅಕ್ರಮ ನೇಮಕಾತಿಯಲ್ಲಿ ಇಂದು ಮಧ್ಯಾಹ್ನ ಬಂಧಿತರಾಗಿದ್ದ  ಐಪಿಎಸ್‌ ಅಧಿಕಾರಿ ಅಮೃತ್ ಪಾಲ್​​ರನ್ನು  ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ಆರೋಪದಲ್ಲಿ ಒಂದೇ ದಿನ ಬಂಧನಕ್ಕೀಡಾದ ಐಎಎಸ್​-ಐಪಿಎಸ್ ಅಧಿಕಾರಿಗಳಿಬ್ಬರನ್ನೂ ಮನೆಗೆ ಕಳಿಸಿದ ರಾಜ್ಯ ಸರ್ಕಾರ
ಸೇವೆಯಿಂದ ವಜಾಗೊಂಡ ಐಎಎಸ್​-ಐಪಿಎಸ್ ಅಧಿಕಾರಿಗಳು
TV9 Web
| Edited By: |

Updated on:Jul 04, 2022 | 11:02 PM

Share

ಬೆಂಗಳೂರು: ಪಿಎಸ್‌ಐ (PSI) ಅಕ್ರಮ ನೇಮಕಾತಿಯಲ್ಲಿ (PSI recruitment scam) ಇಂದು ಮಧ್ಯಾಹ್ನ ಬಂಧಿತರಾಗಿದ್ದ  ಐಪಿಎಸ್‌ ಅಧಿಕಾರಿ ಅಮೃತ್ ಪಾಲ್​​ರನ್ನು  ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ  ಅಮೃತ್ ಪಾಲ್‌ ಸಿಐಡಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ.

ಇನ್ನು ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಾಗ ರಾಜಧಾನಿ ಬೆಂಗಳೂರಿನ ಜಿಲ್ಲಾಧಿಕಾರಿಯಾಗಿದ್ದ  ಐಎಎಸ್ ಅಧಿಕಾರಿ ಜೆ ಮಂಜುನಾಥ್‌ ಅವರನ್ನೂ ಸಹ ಸಸ್ಪೆಂಡ್‌ ಮಾಡಿ, ರಾಜ್ಯ ಸರ್ಕಾರ ಇದೀಗತಾನೆ ಆದೇಶ ಹೊರಡಿಸಿದೆ. ಇಂದು ಮಧ್ಯಾಹ್ನ  ಎಸಿಬಿ ಪೊಲೀಸರು ಮಂಜುನಾಥರನ್ನು ಬಂಧಿಸಿತ್ತು.

ಅಧಿಕಾರಿಗಳಿಬ್ಬರ ಬಂಧನದ ಹಿನ್ನಲೆ

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ   ಪ್ರಕರಣಕ್ಕೆ ಸಂಬಂಧಿಸಿ ಸಿಐಡಿಪೊಲೀಸರು ಎಡಿಜಿಪಿ ಅಮೃತ್ ಪಾಲ್​ರನ್ನು ಬಂಧಿಸಿದ್ದಾರೆ. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಟಿವಿ9ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಕಚೇರಿಯಲ್ಲೇ ಒಎಂಆರ್ ಶೀಟ್‌ ತಿದ್ದಲಾಗಿದೆ. ಯಾವೊಬ್ಬ ಅಧಿಕಾರಿಯನ್ನೂ ಬಿಡದಂತೆ ಸೂಚಿಸಲಾಗಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದೇವೆ. ಸಿಐಡಿ ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಸಿಐಡಿ ಪೊಲೀಸರು ಎಡಿಜಿಪಿ ಅಮೃತ್ ಪಾಲ್​ರನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಯಲಿದೆ. ಅಮೃತ್ ಪಾಲ್ ವೈದ್ಯಕೀಯ ತಪಾಸಣೆ ಬಳಿಕ ಮ್ಯಾಜೀಸ್ಟೇಟ್​ ಕೋರ್ಟ್​ಗೆ​ ಹಾಜರು ಪಡಿಸಲು ಸಿದ್ದತೆ ನಡೆದಿದೆ.

Published On - 10:47 pm, Mon, 4 July 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?