AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಸದಸ್ಯರನ್ನೊಳಗೊಂಡ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪನೆ; ರಾಜ್ಯ ಸರ್ಕಾರ ಆದೇಶ

ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಹಾಗೂ ಉಪ ಉತ್ಪನ್ನಗಳನ್ನು ಕಚ್ಛಾ ವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಲಾಗಿದೆ.

13 ಸದಸ್ಯರನ್ನೊಳಗೊಂಡ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪನೆ; ರಾಜ್ಯ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Updated By: preethi shettigar|

Updated on:Jan 19, 2022 | 8:42 PM

Share

ಬೆಂಗಳೂರು: 13 ಸದಸ್ಯರನ್ನೊಳಗೊಂಡ ಸೆಕೆಂಡರಿ ಅಗ್ರಿಕಲ್ಚರ್ (Secondary Agriculture) ನಿರ್ದೇಶನಾಲಯ ಸ್ಥಾಪಿಸಿ ರಾಜ್ಯ ಸರ್ಕಾರ(State Government) ಆದೇಶ ನೀಡಿದೆ. ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಹಾಗೂ ಉಪ ಉತ್ಪನ್ನಗಳನ್ನು ಕಚ್ಛಾ ವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಮೂಲಕ ಮಾರುಕಟ್ಟೆ(Market) ಕಲ್ಪಿಸುವ ಉದ್ದೇಶದಿಂದ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇಂದು ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೃಷಿ ಸಚಿವ ಬಿ.ಸಿ. ಪಾಟೀಲರೊಂದಿಗೆ ಸಮಿತಿಯಲ್ಲಿ ಚರ್ಚಿಸಿ ನೀಡಿದ ಭರವಸೆಯಂತೆ ನಿರ್ದೇಶನಾಲಯ ಸ್ಥಾಪಿಸಲಾಗಿದೆ.

ಸೆಕೆಂಡರಿ ಅಗ್ರಿಕಲ್ಚರ್ ಎಂದರೆ ಏನು?

ಗ್ರಾಮೀಣ ಮಟ್ಟದಲ್ಲಿ ಗುಡಿ ಕೈಗಾರಿಕೆ ಎಂದು ಪರಿಗಣಿಸಬಹುದಾದ ಚಟುವಟಿಕೆಯು ಸ್ಥಳೀಯ ಮತ್ತು ಸುತ್ತಮುತ್ತಲಿನ ರೈತರ ಆರ್ಥಿಕ ಮಟ್ಟ ಹೆಚ್ಚಳಕ್ಕೆ ಕೊಡುಗೆ ನೀಡುತ್ತದೆ ಇದನ್ನು ಸೆಕೆಂಡರಿ ಕೃಷಿ ಎಂದು ಕರೆಯುತ್ತಾರೆ. ಸ್ಥಳೀಯವಾಗಿ ಲಭ್ಯವಾಗುವ ಮೂಲ ಹಾಗೂ ಕಚ್ಚಾ ವಸ್ತುಗಳ್ನು ಮಾನವ ಶಕ್ತಿ ಕೌಶಲ್ಯಗಳ ಮೂಲವಾಗಿ ಸದಯೋಗಪಡಿಸಿಕೊಂಡು ಅಳವಡಿಸುವ ಸಮಗ್ರ ಚಟುವಟಿಕೆಗಳನ್ನು ಸೆಕೆಂಡರಿ ಕೃಷಿ ಎಂದು ಪರಿಗಣಿಸಬಹುದು. ಜೈವಿಕ ಗೊಬ್ಬರ ಘಟಕಗಳು, ಜೇನು ಸಾಕಣೆ, ಅಣಬೆ, ರೇಷ್ಮೆ ಹುಳು ಸಾಕಣೆ, ಸಾವಯವ ಬಣ್ಣ ಅಥವಾ ಡೈ ತಯಾರಿಕೆ, ನರ್ಸರಿ ಇತ್ಯಾದಿಗಳಂತಹ ಸಣ್ಣ ಪ್ರಮಾಣದ ಚಟುವಟಿಕೆಗಳು ಸೆಕೆಂಡರಿ ಕೃಷಿಗೆ ಉತ್ತಮ ಉದಾಹರಣೆಯಾಗಿದೆ. ಸ್ಥಳೀಯವಾಗಿ ಲಭ್ಯವಾಗುವ ಮೂಲ ಅಥವಾ ಕಚ್ಛಾ ವಸ್ತುಗಳನ್ನು ಮಾನವ ಶಕ್ತಿಯನ್ನು ಸದುಪಯೋಗಪಡಿಸಿಕೊಂಡು ಅಳವಡಿಸುವ ಸಮಗ್ರ ಚಟುವಟಿಕೆಯಾಗಿರುತ್ತದೆ.

ಬೀದರ್: ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ

ಬೀನ್ಸ್, ಹಾಗಲಕಾಯಿ, ಟೊಮೆಟೊ, ಸೊಪ್ಪು ಅಬ್ಬಬ್ಬಾ.. ಒಂದಾ.. ಎರಡಾ.. ಹತ್ತಾರು ಬೆಳೆಗಳು. ಪ್ರಾಯೋಗಿಕ ಕಲಿಕೆಯಲ್ಲೇ ವಿದ್ಯಾರ್ಥಿಗಳು ರೈತರಾಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬೀದರ್ ನ ತೋಟಗಾರಿಕಾ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು ಭಾರಿ ಸದ್ದು ಮಾಡ್ತಿದ್ದಾರೆ. ತರಕಾರಿ, ಹೂವಿನ ಗಿಡ ಬೆಳೆಸಿ, ಫಲ ಬಂದ ಮೇಲೆ ಮಾರಾಟ ಮಾಡಿ, ಹಣಗಳಿಸುತ್ತಿದ್ದಾರೆ. ತರಕಾರಿ ಬೆಳೆಯುವುದರ ಜೊತೆಗೆ ಫಲಕೊಡುವ ಸಸಿಗಳನ್ನೇ ಬೆಳೆಸಿ, ಅವುಗಳನ್ನು ರೈತರಿಗೆ ಮಾರಾಟ ಮಾಡಿ ಜೇಬು ತುಂಬಿಸಿಕೊಳ್ತಿದ್ದಾರೆ. ಈ ಮೂಲಕ ಕಾಲೇಜಿನ ಕಲಿಯುತ್ತಲೇ ಗಳಿಸುತ್ತಾ, ಬದುಕಿನಲ್ಲಿ ಸ್ವಾವಲಂಬಿಗಳಾಗಿ ಬದುಕಲು ಕಾಲೇಜಿನ ಪ್ರಾಧ್ಯಾಪಕರು ಇವರಿಗೆ ತರಬೇತಿ ನೀಡುತ್ತಿದ್ದಾರೆ.

ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಬೀದರ್ ತೋಟಗಾರಿಕಾ ಕಾಲೇಜಿನ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 6 ತಿಂಗಳ ಪ್ರಾಯೋಗಿಕ ಕಲಿಕೆ ಕಡ್ಡಾಯ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿರುವ ಹೊಲದಲ್ಲಿ ಜೊತೆಗೆ ಪಾಲಿಹೌಸ್‌ನಲ್ಲಿ ಬೆಳೆ ಬೆಳೆಯುತ್ತಾರೆ. ಪಾಲಕ್ ಸೋಪ್ಪು, ಹಿರೇಕಾಯಿ, ಬದನೆ, ಬೆಂಡಿಕಾಯಿ, ಹೂಕೊಸು, ಟೊಮ್ಯಾಟೊ, ಸೀತಾಫಲ, ಕರಿಬೇವು, ಸೇವಂತಿಗೆ ಹೀಗೆ ವಿವಿಧ ಬಗೆಯ ತರಕಾರಿ ಬೆಳೆದು ಅದನ್ನ ಮಾರಾಟ ಮಾಡುತ್ತಾರೆ. ಬಂದ ಆದಾಯದಲ್ಲಿ ಶೇ.75 ರಷ್ಟು ಹಣವನ್ನ ತಾವಿಟ್ಟುಕೊಂಡು ಇನ್ನುಳಿದ ಶೇ.25 ರಷ್ಟು ಹಣವನ್ನ ಕಾಲೇಜಿಗೆ ಕೊಡುತ್ತಾರೆ. ವಿದ್ಯಾರ್ಥಿಗಳು ಬೆಳೆದ ಈ ತರಹೇವಾರಿ ಗಿಡಗಳಿಗೆ ಭಾರಿ ಬೇಡಿಕೆ ಬಂದಿದೆ.

ಇನ್ನು, ವಿವಿಧ ಬಗೆಯ ಸಸಿ ತಯಾರಿಸಿ ಮಾರಾಟ ಮಾಡೋದ್ರ ಜೊತೆಗೆ ಮಾರುಕಟ್ಟೆಯ ಜ್ಞಾನವನ್ನೂ ವಿದ್ಯಾರ್ಥಿಗಳು ಪಡೆಯುತ್ತಿದ್ದಾರೆ.. ಪದವಿ ಮುಗಿದ ಬಳಿಕ ಸರ್ಕಾರಿ ಕೆಲಸ ಸಿಗದಿದ್ರೂ ಕೂಡಾ ಸ್ವಾವಲಂಬಿಗಳಾಗಿ ಬದುಕಲು ವಿದ್ಯಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗ್ತಿದ್ದು, ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: Covid19: ಬೆಂಗಳೂರು ಅಪಾರ್ಟ್​ಮೆಂಟ್​ನಲ್ಲಿ 27, ಹಾಸನ ಕಾಫಿತೋಟದಲ್ಲಿ 23 ಮಂದಿಗೆ ಕೊರೊನಾ ದೃಢ

ಬೀದರ್ ತೋಟಗಾರಿಕಾ ಕಾಲೇಜಿನಲ್ಲಿ ಕೃಷಿ ಪ್ರಾಯೋಗಿಕ ಕಲಿಕೆ; ರೈತರಂತೆ ಬೆಳೆ ಬೆಳೆದು ಹಣ ಸಂಪಾದಿಸಿದ ವಿದ್ಯಾರ್ಥಿಗಳು

Published On - 8:37 pm, Wed, 19 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ