AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಪಿಯು ಕಾಲೇಜುಗಳಿಗೆ ಸೇರುವ ವಿದ್ಯಾರ್ಥಿನಿಯರು ಪಾವತಿಸುವ ಶುಲ್ಕಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ

ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗುವ ವಿದ್ಯಾರ್ಥಿನಿಯರಿಗೆ ರೂ.456 ಶುಲ್ಕದಿಂದ ವಿನಾಯಿತಿ ನೀಡಿ, ಸದರಿ ಮೊತ್ತವನ್ನು ಪ್ರಾಂಶುಪಾಲರ ಖಾತೆಗೆ ಜಮೆ ಮಾಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಪಿಯು ಕಾಲೇಜುಗಳಿಗೆ ಸೇರುವ ವಿದ್ಯಾರ್ಥಿನಿಯರು ಪಾವತಿಸುವ ಶುಲ್ಕಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ
ಶಿಕ್ಷಣ ಸಚಿವ ಬಿಸಿ ನಾಗೇಶ್
TV9 Web
| Edited By: |

Updated on:Jun 29, 2022 | 4:39 PM

Share

ಬೆಂಗಳೂರು: ಸರ್ಕಾರಿ ಪಿಯು ಕಾಲೇಜುಗಳಿಗೆ(Government PU Colleged) ದಾಖಲಾಗುವ ‘ವಿದ್ಯಾರ್ಥಿನಿಯರು’ ಪಾವತಿಸುವ ಶುಲ್ಕಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ(State Government) ಆದೇಶ ಹೊರಡಿಸಿದೆ.

ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗುವ ವಿದ್ಯಾರ್ಥಿನಿಯರಿಗೆ ರೂ.456 ಶುಲ್ಕದಿಂದ ವಿನಾಯಿತಿ ನೀಡಿ, ಸದರಿ ಮೊತ್ತವನ್ನು ಪ್ರಾಂಶುಪಾಲರ ಖಾತೆಗೆ ಜಮೆ ಮಾಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರು 2019-2020 ಸಾಲಿನಿಂದ ರೂ.456/ ಶುಲ್ಕದಿಂದ ವಿನಾಯಿತಿ ನೀಡಿ ಪ್ರವೇಶ ನೀಡಲು ಆದೇಶಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಆಯಾ ವರ್ಷಗಳಿಗೆ ಮಾತ್ರ ಸೀಮಿತವಾಗಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಅನುಮತಿ ನೀಡಲಾಗುತ್ತಿತ್ತು. ಇದನ್ನೂ ಓದಿ: ಸೈಕಲ್​​ ಓಡಿಸುವಾಗ ತಲೆ ಮೇಲೆ ಸೂಟ್​​ಕೇಸ್ ಇಟ್ಟುಕೊಂಡು​​ ಬ್ಯಾಲೆನ್ಸ್​​ ಮಾಡುವ ವ್ಯಕ್ತಿ

ಆದರೆ ಸರ್ಕಾರದ ಆದೇಶದಂತೆ 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ರೂ. 456 ಶುಲ್ಕದಿಂದ ಸಂಪೂರ್ಣ ವಿನಾಯತಿ ನೀಡಲಾಗಿರುತ್ತದೆ. ಮುಂದುವರೆದು ಶುಲ್ಕ ಮರುಪಾವತಿಗಾಗಿ ಲೆಕ್ಕಶೀರ್ಷಿಕೆ: 2202-02-001-0-010 ಉಪಶೀರ್ಷಿಕೆ 103ರಡಿಯಲ್ಲಿ ಒದಗಿಸುವ ಅನುದಾನವನ್ನು ಸಂಬಂಧಿಸಿದ ಪ್ರಾಂಶುಪಾಲರ ಖಾತೆಗೆ ಖಜಾನೆ-2 ತಂತ್ರಾಂಶದ ಮೂಲಕ ಬಿಡುಗಡೆಗೊಳಿಸಲು ಅಗತ್ಯಕ್ರಮ ಕೈಗೊಳಲು ಈ ಮೂಲಕ ಸೂಚಿಸಿದೆ ಎಂದು ಬಿ.ಸಿ. ನಾಗೇಶ್ ಆದೇಶ ಹೊರಡಿಸಿದ್ದಾರೆ. Students fees

Published On - 4:21 pm, Wed, 29 June 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ