AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

105 ಶಾಲೆಗಳನ್ನು ದತ್ತು ಪಡೆಯಲು ಸತ್ವಂ ಕನ್ಸಲ್ಟಿಂಗ್ ಸಂಸ್ಥೆ ಜೊತೆ ರಾಜ್ಯ ಸರ್ಕಾರ ಒಪ್ಪಂದ

ಮೆ. ಸತ್ವಂ ಕನ್ಸಲ್ಟಿಂಗ್ ಸಂಸ್ಥೆಯು ಶಾಲಾ ಶಿಕ್ಷಣ ಇಲಾಖೆಯ 105 ಶಾಲೆಗಳನ್ನು ದತ್ತು ಪಡೆಯುವ ಒಪ್ಪಂದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಹಿ ಹಾಕಲಾಯಿತು.

105 ಶಾಲೆಗಳನ್ನು ದತ್ತು ಪಡೆಯಲು ಸತ್ವಂ ಕನ್ಸಲ್ಟಿಂಗ್ ಸಂಸ್ಥೆ ಜೊತೆ ರಾಜ್ಯ ಸರ್ಕಾರ ಒಪ್ಪಂದ
ಶಾಲಾ ಮಕ್ಕಳು (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 21, 2022 | 10:19 PM

Share

ಬೆಂಗಳೂರು: ಮೆ. ಸತ್ವಂ ಕನ್ಸಲ್ಟಿಂಗ್ ಸಂಸ್ಥೆಯು ಶಾಲಾ (schools) ಶಿಕ್ಷಣ ಇಲಾಖೆಯ 105 ಶಾಲೆಗಳನ್ನು ದತ್ತು ಪಡೆಯುವ ಒಪ್ಪಂದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಹಿ ಹಾಕಲಾಯಿತು. ರೇಸ್ ಕೋರ್ಸ್ ಸರ್ಕಾರಿ ನಿವಾಸದಲ್ಲಿ ಈ ಕುರಿತು ಮಾತುಕತೆ ನಡೆದಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್, ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಸತ್ವಂ ಸಂಸ್ಥೆಯ ಸಿಇಒ ಶ್ರೀಕೃಷ್ಣ ಮತ್ತು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ಬಿ.ಬಿ.ಕಾವೇರಿ ಉಪಸ್ಥಿತರಿದ್ದರು.

ಉದ್ಯಮಿಗಳು ದೇಣಿಗೆ ನೀಡಿ ತೃಪ್ತರಾಗಬಾರದು: ಸಿಎಂ ಬೊಮ್ಮಾಯಿ 

ಉದ್ಯಮಿಗಳು ದೇಣಿಗೆ ನೀಡಿ ತೃಪ್ತರಾಗಬಾರದು. ಸರ್ಕಾರಿ ಕಾಲೇಜುಗಳಿಗೆ ಭೇಟಿ ನೀಡಿ ಅನುಭವ ಹಂಚಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮಾತನಾಡಿದ ಅವರು ತಮ್ಮ ಅನುಭವ ಹಂಚಿಕೊಂಡ್ರೆ ಮಕ್ಕಳ ಆತ್ಮವಿಶ್ವಾಸ ಹೆಚ್ಚುತ್ತದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಂದ ಬರುವ ಮಕ್ಕಳ ಆತ್ಮವಿಶ್ವಾಸ ಹೆಚ್ಚುತ್ತದೆ. ಸುಂದರ ಸಮಾಜ ಸೃಷ್ಟಿಸುವ ಕೆಲಸಕ್ಕೆ ಎಲ್ಲರೂ ಹೆಗಲು ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಬೇಕಾಗುತ್ತೆ.

ಆಗ ಮಾತ್ರ ಸಮಾನತೆಯ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಬಹುದು. ಉದ್ಯಮಿಗಳು ಸಮಾಜದ ಬಗ್ಗೆ ಕಳಕಳಿ ಇಟ್ಟುಕೊಳ್ಳಬೇಕು. ಕಳಕಳಿ ಇಟ್ಟುಕೊಂಡು ದುರ್ಬಲರ ಏಳಿಗೆಗೆ ಮುಂದಾಗಬೇಕು. ಸರ್ಕಾರಿ ಕಾಲೇಜುಗಳು ಕೂಡ ನಮಗೆ ಸೇರಿದ್ದು ಎನ್ನುವ ಅಭಿಮಾನ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿ ಕರೆ ನೀಡಿದರು.

22 ಕಾಲೇಜುಗಳ ಅಭಿವೃದ್ಧಿಗೆ ಉದ್ಯಮಿಗಳ ಒಲವು:

ಇನ್ನೂ ಸಮಾವೇಶದಲ್ಲಿ 22 ಸರಕಾರಿ ಡಿಗ್ರಿ ಕಾಲೇಜುಗಳ ಅಭಿವೃದ್ಧಿಗೆ ವಿವಿಧ ಉದ್ಯಮಿಗಳು ಒಲವು ತೋರಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದ ಉಳಿದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೂ ನೆರವು ನೀಡುವ ಭರವಸೆ ನೀಡಲಾಗಿದೆ. ಶೌಚಾಲಯ, ಪ್ರಯೋಗಾಲಯ, ಗ್ರಂಥಾಲಯ ಮತ್ತು ಇತರ ಸಾಧನ ಸಲಕರಣೆಗಳ ವ್ಯವಸ್ಥೆಗೆ ಸಹಕಾರ ನೀಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:13 pm, Wed, 21 September 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್