AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ 40% ಕಮಿಷನ್ ಪಡೆದ್ರೆ, ಸುಳ್ಳುಗಾರ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ -ಸಿದ್ದರಾಮಯ್ಯ ಆರೋಪ

ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ 40% ಕಮಿಷನ್ ಪಡೆದ್ರೆ, ಸುಳ್ಳುಗಾರ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ -ಸಿದ್ದರಾಮಯ್ಯ ಆರೋಪ
ಮಾಜಿ ಸಿಎಂ ಸಿದ್ದರಾಮಯ್ಯ
TV9 Web
| Edited By: |

Updated on:Aug 28, 2022 | 9:30 PM

Share

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ ಎಂದು ಸಚಿವ ಸೋಮಣ್ಣ(V. Somanna) ವಿರುದ್ಧ ಸಿದ್ದರಾಮಯ್ಯ(Siddaramaiah) ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ 40% ಕಮಿಷನ್ ಪಡೆಯುತ್ತೆ. ಆದ್ರೆ ವಸತಿ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ. ಸೋಮಣ್ಣ ಹೆಸರು ಯಾಕಪ್ಪ ಹೇಳ್ತೀರಾ?, ಸುಳ್ಳುಗಾರ ಸೋಮಣ್ಣ. ಸಚಿವ ವಿ.ಸೋಮಣ್ಣ ಬಗ್ಗೆ ಚರ್ಚೆ ಮಾಡದಿರೋದೇ ಒಳ್ಳೆಯದು. ಬಡವರಿಗೆ ಮನೆ ಕಟ್ಟಿಸಿಲ್ಲ, ಆದ್ರೆ ಸೋಮಣ್ಣ 2 ಮನೆ ಕಟ್ಟಿಸ್ತಿದ್ದಾರೆ. ಸೋಮಣ್ಣ ಅಂದ್ರೇನೆ ಬರೀ ಸುಳ್ಳೇ ಎಂದು ಭಾಷಣದಲ್ಲಿ ಸಚಿವ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಇನ್ನು ಇದೇ ವೇಳೆ ತಮ್ಮ ಭಾಷಣದಲ್ಲಿ ಮಡಿಕೇರಿಯಲ್ಲಿ ಮೊಟ್ಟೆ ಎಸೆದ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. ಮಳೆಹಾನಿ ಪ್ರದೇಶಕ್ಕೆ ನಾನು ಭೇಟಿ ನೀಡಿದಾಗ ಮೊಟ್ಟೆ ಎಸೆದರು. ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಎಸೆದರು. ಇದಕ್ಕೆ ಸ್ಥಳದಲ್ಲಿದ್ದ ಪೊಲೀಸ್‌ ಸಿಬ್ಬಂದಿ ಸಹ ಸಪೋರ್ಟ್‌ ಮಾಡಿದ್ರು. ಬಿಜೆಪಿಯವರು ಇನ್ನು ಕೆಲ ತಿಂಗಳು ಮಾತ್ರ ಅಧಿಕಾರದಲ್ಲಿರುತ್ತಾರೆ. ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆಂದು ಪೊಲೀಸರಿಗೆ ಹೇಳಿದ್ದೇನೆ. ಒಬ್ಬ ಇನ್ಸ್‌ಪೆಕ್ಟರ್‌ ವರ್ಗಾವಣೆಯಾಗಲು ಲಂಚ ಕೊಡಬೇಕಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:38 pm, Sun, 28 August 22

Follow Us
Web contact
Web contact

TV9 Kannada

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?