ವಿದ್ಯಾರ್ಥಿಗಳಿಗೆ ಕೊರೊನಾ ಆತಂಕ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದ ಸಚಿವ ಬಿ.ಸಿ.ನಾಗೇಶ್

Edited By: ಆಯೇಷಾ ಬಾನು

Updated on: Dec 07, 2021 | 12:24 PM

ಶಾಲೆಗಳ ಮಾರ್ಗಸೂಚಿ ನಿರ್ವಹಣೆ ಬಗ್ಗೆ ಸಿಎಂ ಜೊತೆ ಸಭೆ. ಡಿ.9ರಂದು ಸಿಎಂ ಜತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಭೆ. ತಾಂತ್ರಿಕ ಸಲಹಾ ಸಮಿತಿ ತಜ್ಞರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿ.

ಬೆಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಆತಂಕ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪ್ರಾಥಮಿಕ & ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಅನುಸರಿಸುವ ಕ್ರಮಗಳ ಬಗ್ಗೆ, ಶಾಲೆಗಳಲ್ಲಿ ಯಾವೆಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು, ವಸತಿ ಶಾಲೆಗಳಿಗೆ ಯಾವೆಲ್ಲ ಮಾರ್ಗಸೂಚಿ ನೀಡಬೇಕು, ಗೈಡ್​ಲೈನ್ಸ್​ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಚಿವರು ಪತ್ರ ಬರೆದಿದ್ದಾರೆ.

ಶಾಲೆಗಳ ಮಾರ್ಗಸೂಚಿ ನಿರ್ವಹಣೆ ಬಗ್ಗೆ ಸಿಎಂ ಜೊತೆ ಸಭೆ. ಡಿ.9ರಂದು ಸಿಎಂ ಜತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಭೆ. ತಾಂತ್ರಿಕ ಸಲಹಾ ಸಮಿತಿ ತಜ್ಞರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿ.

Follow Us
Web contact

TV9 Kannada

Read More