AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2022: ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ, ಗಡಿನಾಡಿನಲ್ಲಿ ಕನ್ನಡ ಭವನ ಸ್ಥಾಪನೆ

ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಸ್ಕೀಮ್ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Karnataka Budget 2022: ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ, ಗಡಿನಾಡಿನಲ್ಲಿ ಕನ್ನಡ ಭವನ ಸ್ಥಾಪನೆ
ಯಕ್ಷಗಾನ
Follow us
TV9 Web
| Updated By: ganapathi bhat

Updated on: Mar 04, 2022 | 2:26 PM

ಬೆಂಗಳೂರು: ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ ನೀಡಲಾಗಿದೆ. ಅಲ್ಲದೆ, ವಿಶೇಷವಾಗಿ ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ ಮಾಡಲಾಗಿದೆ. ತಳಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ ನಡೆಸುವುದಾಗಿ ಘೋಷಣೆ ಮಾಡಲಾಗಿದೆ.

ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ ಮಾಡಲಾಗುವುದು. ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ ಕೈಗೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಸ್ಕೀಮ್ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಶ್ರೀ ಯೋಗಿನಾರೇಯಣಾ ಯತೀಂದ್ರರ ಜಯಂತಿ ಆಚರಣೆ ಮಾಡಲಾಗುವುದು. ಪ್ರತಿ ವರ್ಷ ಮಾ.27ರಂದು ಆಚರಣೆ ಮಾಡಲಾಗುವುದು. 4 ಸಾಂಸ್ಕೃತಿಕ ಶಿಬಿರಿ ಕಾರ್ಯಕ್ರಮ ಆಯೋಜಿಸಲಾಗುವುದು. ಹಾವೇರಿ ಜಿಲ್ಲೆಯಲ್ಲಿ ₹2 ಕೋಟಿ ವೆಚ್ಚದಲ್ಲಿ ಸಾಂಸ್ಕೃತಿ ಭವನ ನಿರ್ಮಾಣ ಮಾಡಲಾಗುವುದು. ಮಂಗಳೂರು ವಿವಿಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುವುದು. ನೆರೆಯ ರಾಜ್ಯ ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Karnataka Budget 2022: ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್; ಯಾವ ಇಲಾಖೆಗೆ ಎಷ್ಟು ಅನುದಾನ?

ಇದನ್ನೂ ಓದಿ: Karnataka Budget 2022: ಕರ್ನಾಟಕದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ; ಐಐಟಿ ಮಾದರಿಯಲ್ಲಿ ಕೆಐಟಿ

ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ