AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ವಿಚಾರ; ಕೇಂದ್ರದ ಅಧಿಸೂಚನೆಗೆ ಶಾಸಕರ ವಿರೋಧ

ರಾಜ್ಯದ ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ವಿಚಾರವಾಗಿ ಕೇಂದ್ರ ಅರಣ್ಯ ಸಚಿವಾಲಯ ಹೊರಡಿಸಿದ ಅಧಿಸೂಚನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ವಿಚಾರ; ಕೇಂದ್ರದ ಅಧಿಸೂಚನೆಗೆ ಶಾಸಕರ ವಿರೋಧ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on: Jul 18, 2022 | 5:21 PM

Share

ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟ (Western Ghats) ಪರಿಸರ ಸೂಕ್ಷ್ಮ ಪ್ರದೇಶ ವಿಚಾರವಾಗಿ ಕೇಂದ್ರ ಅರಣ್ಯ ಸಚಿವಾಲಯ ಹೊರಡಿಸಿದ ಅಧಿಸೂಚನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga jnanendra) ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 56,826 ಚದರ ಕಿಲೋ ಮೀಟರ್​ ಪರಿಸರ ಸೂಕ್ಷ್ಮ ಪ್ರದೇಶವಾಗಿದೆ. ಇದು ಪಶ್ಚಿಮಘಟ್ಟ ಪ್ರದೇಶದ ಜನರ ಭವಿಷ್ಯಕ್ಕೆ ಮಾರಕವಾಗಿದೆ. ಇದರಿಂದ ಮಲೆನಾಡು ನಿವಾಸಿಗಳ ಬದುಕು ಬೀದಿಗೆ ಬೀಳುತ್ತದೆ. ಅಭಿವೃದ್ಧಿ ಕುಂಠಿತ, ಆರ್ಥಿಕ ಸಂಕಷ್ಟ ಎದುರಾಗಲಿದೆ ಎಂದು ಕೇಂದ್ರದ ಅಧಿಸೂಚನೆ ವಿರುದ್ಧ ಸಭೆಯಲ್ಲಿ ಶಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಭೆ ಬಳಿಕ ಆರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿ ಕಸ್ತೂರಿ ರಂಗನ್ ವರದಿಯ 5ನೇ ನೋಟಿಫಿಕೇಶನ್​​​ನ್ನು ಜುಲೈ 6 2022 ರಂದು ಹೊರಡಿಸಿದ್ದೇವೆ. ಹೀಗಾಗಿ ಸಿಎಂ ನೇತೃತ್ವದಲ್ಲಿ ಸಭೆ ನಡೆಸಿದ್ದೇವೆ. ನಮ್ಮ ಸರ್ಕಾರ ಇದನ್ನು ಒಪ್ಪಿಕೊಳ್ಳುತ್ತದೆ. 2019 ಹಾಗೂ 2020 ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರಕ್ಕೆ ಪತ್ರ ಬರೆದಿದ್ದರು. ನಾವೂ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ್ಮೇಲೆ ಇದನ್ನು ರದ್ದುಮಾಡುವಂತೆ ಕೇಂದ್ರ ಹೋಗಿ ಹೇಳಿದ್ದೇವು. ಆದರೂ ಕೂಡ ಐದನೇ ನೋಟಿಫಿಕೇಶನ್ ಹೊರಡಿಸಿದ್ದಾರೆ. ಹೀಗಾಗಿ ಕ್ಯಾಬಿನೆಟ್ ನಲ್ಲೂ ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ದಿನಾಂಕ 25 ಅಥವಾ 26 ರಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪಶ್ಚಿಮ ಘಟ್ಟದ ಶಾಸಕರ ನಿಯೋಗದಿಂದ ಕೇಂದ್ರದ ಪರಿಸರ ಸಚಿವರ ಭೇಟಿ ಮಾಡಿ, ಈ ವರದಿ ಅವೈಜ್ಞಾನಿಕವಾಗಿದೆ ಇದನ್ನು ಕೈ ಬಿಡುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ