AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಾದ್ಯಂತ ವಿಶೇಷ ಕಾರ್ಯಾಚರಣೆ: ಬರೋಬ್ಬರಿ 800 ಮಂದಿ ಬಾಲ ಕಾರ್ಮಿಕರ ರಕ್ಷಣೆ

ಕರ್ನಾಟಕ ಪೊಲೀಸರು ರಾಜ್ಯಾದ್ಯಂತ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ 16,951 ಕೇಂದ್ರಗಳ ಮೇಲೆ ದಾಳಿ ನಡೆಸಿ 800 ಮಂದಿ ಬಾಲಕಾರ್ಮಿಕರನ್ನು ರಕ್ಷಿಸಿದ್ದು, ಇದರಲ್ಲಿ ಬೆಂಗಳೂರು ಒಂದರಲ್ಲೇ 503 ಮಕ್ಕಳನ್ನು ರಕ್ಷಿಸಲಾಗಿದೆ. ಇನ್ನು ರಕ್ಷಣೆ ಮಾಡಲಾದ ಮಕ್ಕಳನ್ನು ಕಳುಹಿಸಿ ಎಂದು ಬೆಂಗಳೂರಿನ ಡೈರಿ ಸರ್ಕಲ್​ ಬಳಿಯಿರುವ ಬಾಲ ಮಂದಿರದ ಎದುರು ಪೋಷಕರ ಪಟ್ಟು ಹಿಡಿದ ಪ್ರಸಂಗವೂ ನಡೆದಿದೆ.

ಕರ್ನಾಟಕದಾದ್ಯಂತ ವಿಶೇಷ ಕಾರ್ಯಾಚರಣೆ: ಬರೋಬ್ಬರಿ 800 ಮಂದಿ ಬಾಲ ಕಾರ್ಮಿಕರ ರಕ್ಷಣೆ
ಬಾಲ ಕಾರ್ಮಿಕರ ರಕ್ಷಣೆImage Credit source: Deccan Herald
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 13, 2026 | 6:55 AM

Share

ಬೆಂಗಳೂರು, ಸೆಪ್ಟೆಂಬರ್​​ 13: ಕರ್ನಾಟಕದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು 598 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 800 ಮಂದಿ ಬಾಲ ಕಾರ್ಮಿಕರ ರಕ್ಷಣೆ ಮಾಡಿದ್ದಾರೆ. ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿರುವ ಖಚಿತ ಮಾಹಿತಿಯ ಆಧಾರದಲ್ಲಿ 16,951 ಸ್ಥಳಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ 503 ಮಕ್ಕಳ ರಕ್ಷಣೆ ಮಾಡಲಾಗಿದೆ.

ರಾಜ್ಯದ ಎಲ್ಲೆಲ್ಲಿ ಬಾಲ ಕಾರ್ಮಿಕರ ರಕ್ಷಣೆ?

ಜಿಲ್ಲೆ ಪರಿಶೀಲಿಸಲಾದ ಸ್ಥಳಗಳು ರಕ್ಷಣೆ ಮಾಡಲಾಗಿರುವ ಮಕ್ಕಳು
ಬೆಂಗಳೂರು 5897 503
ವಿಜಯಪುರ 1156 72
ತುಮಕೂರು 660 33
ಕಲಬುರಗಿ 427 22
ಕೊಪ್ಪಳ 95 27
ಚಿಕ್ಕಬಳ್ಳಾಪುರ 247 16
ಬಳ್ಳಾರಿ 147 15
ಮೈಸೂರು 648 13
ಚಿತ್ರದುರ್ಗ 147 13
ಬೆಳಗಾವಿ 908 14
ಹುಬ್ಬಳ್ಳಿ-ಧಾರವಾಡ 242 10
ಬೆಂಗಳೂರು ಗ್ರಾಮಾಂತರ 450 9
ಬಾಗಲಕೋಟೆ 247 8
ದಕ್ಷಿಣ ಕನ್ನಡ 552 5
ಕೋಲಾರ 377 3
ಬೆಂಗಳೂರು ದಕ್ಷಿಣ 136 2
ಚಾಮರಾಜನಗರ 244 8
ಬೀದರ್ 435 8
ಯಾದಗಿರಿ 129 3
ವಿಜಯನಗರ 141 4
ಕೊಡಗು 188 2
ಹಾವೇರಿ 189 2
ಉಡುಪಿ 315 2
ಹಾಸನ 269 0
ಮಂಡ್ಯ 533 0
ದಾವಣಗೆರೆ 105 0
ಶಿವಮೊಗ್ಗ 334 0
ಉತ್ತರ ಕನ್ನಡ 282 0
ಚಿಕ್ಕಮಗಳೂರು 251 0
ಗದಗ 228 0
ರಾಯಚೂರು 333 0

ಇದನ್ನೂ ಓದಿ: ತಜ್ಞ ವೈದ್ಯರ ಕೊರತೆಗೆ ಬ್ರೇಕ್: ತಾಲೂಕಾಸ್ಪತ್ರೆ, ಸಿಎಚ್‌ಸಿ, ಪಿಎಚ್‌ಸಿಯನ್ನ ಮೆಡಿಕಲ್ ಕಾಲೇಜುಗಳಿಗೆ ದತ್ತು ನೀಡಲು ಮುಂದಾದ ಸರ್ಕಾರ

ಮಕ್ಕಳನ್ನು ಕಳುಹಿಸಿ ಎಂದು ಪೋಷಕರ ಪಟ್ಟು

ಇನ್ನು ರಕ್ಷಣೆ ಮಾಡಲಾದ ಮಕ್ಕಳನ್ನು ಕಳುಹಿಸಿ ಎಂದು ಬೆಂಗಳೂರಿನ ಡೈರಿ ಸರ್ಕಲ್​ ಬಳಿಯಿರುವ ಬಾಲ ಮಂದಿರದ ಎದುರು ಪೋಷಕರ ಪಟ್ಟು ಹಿಡಿದ ಪ್ರಸಂಗವೂ ನಡೆದಿದೆ. ಆದರೆ ಮಂಗಳವಾರದವರೆಗೂ ಮಕ್ಕಳನ್ನ ಪೋಷಕರಿಗೆ ಹಸ್ತಾಂತರಿಸಲಾಗಲ್ಲ. ಯಾವುದೇ ಬಾಲಕಾರ್ಮಿಕರನ್ನ ರಕ್ಷಿಸಿದರೆ ನೇರವಾಗಿ ಪೋಷಕರಿಗೆ ಹಸ್ತಾಂತರಿಸಲು ಸಾಧ್ಯವಿಲ್ಲ. ಚೈಲ್ಡ್ ವೆಲ್ಫೇರ್ ಕಮಿಟಿ (CWC) ಮುಂದೆ ಹಾಜರು ಪಡಿಸಬೇಕು. ಕಮಿಟಿಯು ನಿಜವಾದ ಪೋಷಕರನ್ನು ಪರಿಶೀಲಿಸಲಿದೆ. ಆ ಬಳಿಕ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ಅಪರಾಧ ಎಂದು ಪೋಷಕರಿಗೆ ಮನವರಿಕೆ ಮಾಡಲಾಗುತ್ತೆ. ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿ ಆಯಾ ಮಕ್ಕಳನ್ನು ಪೋಷಕರ ಜೊತೆಗೆ ಕಳುಹಿಸಿ ಕೊಡಲಾಗುತ್ತೆ. ಅಥವಾ ಮಕ್ಕಳನ್ನು ಮಾನವ ಕಳ್ಳ ಸಾಗಾಣಿಕೆ ಮಾಡಿ, ಮಾರಾಟ ಮಾಡಿ ಕೆಲಸಕ್ಕೆ ಇಟ್ಟಿರೋದು ಕಂಡ ಬಂದರೆ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಅವರು ಶಿಪಾರಸ್ಸು ಮಾಡುತ್ತಾರೆ. ಸದ್ಯ ಎರಡು ದಿನ ರಜೆ ಇರುವ ಕಾರಣ, ಮಂಗಳವಾರ CWC ಮುಂದೆ ರಕ್ಷಿಸಲಾದ ಮಕ್ಕಳನ್ನು ಹಾಜರು ಪಡಿಸಲಾಗುತ್ತೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:51 am, Sun, 13 September 26

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!