AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂತ ಹಂತವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬೇಕಿತ್ತು: ಎಮ್ ಮದನ್ ಗೋಪಾಲ್

ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ನಡೆದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಸವಾಲುಗಳು ಮತ್ತು ಅವಕಾಶಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡಿದ ಕೂಡಲೇ ಕಾಲೇಜಿಗಳಲ್ಲಿ ಅನುಷ್ಠಾನ ಬರುತ್ತೆ ಅಂತಾ ನನಗೆ ಅನಿಸುತ್ತಿಲ್ಲ ಎಂದು ತಿಳಿಸಿದರು.

ಹಂತ ಹಂತವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬೇಕಿತ್ತು: ಎಮ್ ಮದನ್ ಗೋಪಾಲ್
ಎಮ್. ಮದನ್ ಗೋಪಾಲ್
TV9 Web
| Edited By: |

Updated on:Mar 19, 2022 | 7:01 PM

Share

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಜಾರಿಗೆ ತರಬಹುದಿತ್ತು. ಉನ್ನತ ಶಿಕ್ಷಣ ಮಟ್ಟದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (National Education Policy) ಜಾರಿ ಮಾಡುವುದಕ್ಕೂ ಮೊದಲು ಸ್ವಲ್ಪ ಯೋಚನೆ ಮಾಡಬೇಕಿತ್ತು ಎಂದು ರಾಷ್ಟ್ರೀಯ ಶಿಕ್ಷಣ ನೀತಿಯ ಕರ್ನಾಟಕ ಟಾಸ್ಕ್ ಫೋರ್ಸ್​ನ(Task Force) ಚೇರ್ಮನ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಎಮ್. ಮದನ್ ಗೋಪಾಲ್(M. Madan Gopal) ಅವರು ಅಭಿಪ್ರಾಯಪಟ್ಟಿದ್ದಾರೆ.

ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ನಡೆದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಸವಾಲುಗಳು ಮತ್ತು ಅವಕಾಶಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡಿದ ಕೂಡಲೇ ಕಾಲೇಜಿಗಳಲ್ಲಿ ಅನುಷ್ಠಾನ ಬರುತ್ತೆ ಅಂತಾ ನನಗೆ ಅನಿಸುತ್ತಿಲ್ಲ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ನಿಯಮಾವಳಿಯ ಬಗ್ಗೆ ಸಾರ್ವಜನಿಕ ವೇದಿಕೆಗಳಲ್ಲಿ ಹೆಚ್ಚಿನ ಚರ್ಚೆಯಾಗಬೇಕಿದೆ. ಮುಂದಿನ ವರ್ಷ ಮೊದಲ ಹಂತವಾಗಿ ನರ್ಸರಿ ಮಟ್ಟದಲ್ಲಿ ಈ ನೀತಿ ಜಾರಿ ಮಾಡಬೇಕು. ತರಗತಿ ಮೂರರಿಂದ ಹೊಸ ಶಿಕ್ಷಣ ನೀತಿ ಜಾರಿ ಮಾಡುವಾಗ ನಾವು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ಶಾಲಾ ಮಟ್ಟದ ಶೈಕ್ಷಣಿಕ ಸುಧಾರಣೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆದರೆ ಉನ್ನತ ಶಿಕ್ಷಣ ಮಟ್ಟದಲ್ಲಿ ಸರ್ಕಾರ ಇನ್ನಷ್ಟು ಗಮನಹರಿಸಬೇಕಿತ್ತು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಮತ್ತು ಸಮಗ್ರವಾಗಿ ಅರ್ಥಮಾಡಿಕೊಂಡು ಕಾರ್ಯರೂಪಕ್ಕೆ ತರುವಲ್ಲಿ ನಾವು ಎಡವುತ್ತಿದ್ದೇವೆ ಎಂದು ಹೇಳಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಮತ್ತು ಜವಾಬ್ದಾರಿಯನ್ನು ಅತ್ಯಂತ  ವಿವರವಾಗಿ ಚರ್ಚಿಸಲಾಗಿದೆ. ತರಗತಿ-3, ತರಗತಿ -6 ಮತ್ತು ತರಗತಿ-9ರ ಹಂತಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಚಿಂತನೆ ನಡೆಸುವ ಅಗತ್ಯವಿದೆ ಎಂದು ಅವರು ಅಭಿಮತ ವ್ಯಕ್ತಪಡಿಸಿದರು.

ಇನ್ನು ಸಿಇಎಸ್‍ಎಸ್ ನಿರ್ದೇಶಕರಾದ ಪ್ರೊ. ಗೌರೀಶ್ ಜೋಶಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತವಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಒಟ್ಟಾರೆ ಸೂತ್ರಗಳನ್ನು ಅತ್ಯಂತ ನಿಖರವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ತಿಳಿಸಿದರು.

ಸಮಾಜದ ವಿವಿಧ ವರ್ಗಗಳಾದ ಸಾಮಾಜಿಕ, ಆರ್ಥಿಕ ವರ್ಗದ ಜೊತೆ ಬೇರೆ ಬೇರೆ ವರ್ಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಶೇಷ ಶೈಕ್ಷಣಿಕ ವಲಯ ಸೃಷ್ಟಿಸಬೇಕಿದೆ. ಕೇವಲ ತಯಾರಿ ಹಂತವನ್ನೇ ಮುಂದುವರೆಸಿಕೊಂಡು ಹೋದರೆ ಅದು ತಯಾರಿ ಹಂತದಲ್ಲಿಯೇ ಇರುತ್ತದೆ. ನಾವೀಗ ರಾಷ್ಟ್ರೀಯ ಶೈಕ್ಷಣಿಕ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕಿರುವ ಹಂತದಲ್ಲಿದ್ದೇವೆ. ಕೇಂದ್ರ ರೂಪಿಸಿರುವ ಉನ್ನತ ಶಿಕ್ಷಣದ ನೀತಿಯನ್ನು ಸಹ ಕೂಲಂಕುಷವಾಗಿ ಅಧ್ಯಯನ ನಡೆಸಬೇಕಿದೆ. ಹಾಗೇ ಮಾರ್ಪಾಡುಗಳಿದ್ದರೆ ಬದಲಾವಣೆ ಮಾಡಿಕೊಂಡು ಶೀಘ್ರದಲ್ಲಿಯೇ ಜಾರಿಗೊಳಿಸಬೇಕಾಗಿದೆ ಎಂದು ಪ್ರೊ. ಗೌರೀಶ್ ಜೋಶಿ ಹೇಳಿದರು.

ಈ ಸಂವಾದ ಕಾರ್ಯಕ್ರಮದಲ್ಲಿ ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಆರ್. ಉಪೇಂದ್ರ ಶೆಟ್ಟಿಯವರು ಹಾಗೂ ದಕ್ಷಿಣ ಭಾರತದ ವಿವಿಧ ಕಾಲೇಜಿನ ಪ್ರಾಂಶುಪಾಲರುಗಳು ಸೇರಿದಂತೆ ಶಿಕ್ಷಣ ಸಂಸ್ಥೆಯ ಭೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:

Lake Conservation: ಜನರ ಪಾಲುದಾರಿಕೆಯಿಂದ ಕೆರೆ ಸಮೃದ್ಧಿ ಯೋಜನೆಯ ಆಶಯಕ್ಕೆ ಹೊಸ ವೇಗ ಬಂತು: ಮದನ್ ಗೋಪಾಲ್

ಉತ್ತರಾಖಂಡ್​​ನಲ್ಲಿ ಕೆಲಸ ನೋಡಿ ಮೋದಿಗೆ ವೋಟ್ ಹಾಕ್ತೀವಿ ಅಂದ್ರು, ಇದ್ರಲ್ಲಿ‌ ನನ್ನ ಪ್ಲಾನು-ಪಾತ್ರ ಏನೂ ಇಲ್ಲ ಎಂದ ಉಸ್ತುವಾರಿ ಪ್ರಹ್ಲಾದ್ ಜೋಶಿ

Published On - 6:56 pm, Sat, 19 March 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?