Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲೇಟು, ಪ್ರಯಾಣಿಕರಿಗೆ ಗಾಯ, ರೈಲ್ವೆ ಇಲಾಖೆಯಿಂದ ಕಠಿಣ ಕ್ರಮದ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದ ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಕೆ ಆರ್​ ಪುರಂ ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ ರೇಲ್ವೆ ನಿಲ್ದಾಣದ ಮಧ್ಯೆ ನಡೆದಿದೆ.

Vande Bharat Express: ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲೇಟು, ಪ್ರಯಾಣಿಕರಿಗೆ ಗಾಯ, ರೈಲ್ವೆ ಇಲಾಖೆಯಿಂದ ಕಠಿಣ ಕ್ರಮದ ಎಚ್ಚರಿಕೆ
ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ ರೈಲು
Follow us
ವಿವೇಕ ಬಿರಾದಾರ
|

Updated on: Feb 26, 2023 | 9:09 AM

ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಚಾಲನೆ ನೀಡಿದ್ದ ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ (Chennai-Mysuru Vande Bharat Express)​​ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಕೆ ಆರ್​ ಪುರಂ (KR Puram) ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ (Bengaluru cantonment) ರೇಲ್ವೆ ನಿಲ್ದಾಣದ ಮಧ್ಯೆ ನಡೆದಿದೆ. ಘಟನೆಯಲ್ಲಿ ರೈಲಿನ 2 ಗಾಜಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ನೈಋತ್ಯ ರೈಲ್ವೆ (South western Railway) ಇಲಾಖೆ ತಿಳಿಸಿದೆ. ಸದ್ಯ ಕಿಡಿಗೇಡಿಗಳಿಗಾಗಿ ರೇಲ್ವೆ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ರೇಲ್ವೆ ಇಲಾಖೆ ವಿಷಾದ ವ್ಯಕ್ತಪಡಿಸಿದೆ. ಈ ಬಗ್ಗೆ ಬೆಂಗಳೂರು ರೇಲ್ವೆ ವಿಭಾಗೀಯ ಕಚೇರಿ ಇಲಾಖೆಗೆ ಸಂಬಂಧದಿಸಿದ ವಸ್ತುಗಳಿಗೆ ಹಾನಿಯುಂಟು ಮಾಡಿದರೆ, ಅಂತವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇನ್ನು ಜನವರಿ ಮತ್ತು ಫೆಬ್ರವರಿಯಲ್ಲಿ ಒಟ್ಟು 21 ಕಲ್ಲು ತೂರಾಟ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ವಿಭಾಗದಲ್ಲಿ ಇನ್ನೂ 13 ಪ್ರಕರಣಗಳು ದಾಖಲಾಗಿವೆ ಎಂದು ನೈರುತ್ಯ ರೇಲ್ವೆ ಇಲಾಖೆ ಮಾಹಿತಿ ನೀಡಿದೆ. ಎರಡು ವಾರಗಳ ಹಿಂದೆ, ಶುಕ್ರವಾರ ಸಿಕಂದ್ರಾಬಾದ್​-ವಿಶಾಖಪಟ್ಟಣಂ ವಂದೇ ಭಾರತ ಎಕ್ಸಪ್ರೆಸ್​ ರೈಲು ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಮೂಲಕ ಹಾದು ಹೋಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಿದ್ದರು. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ, ಕಲ್ಲು ತೂರಾಟದಿಂದಾಗಿ ಒಂದು ಕಿಟಕಿಗೆ ಹಾನಿಯಾಗಿದೆ.

ಈ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಾಗಿದೆ. ಇದನ್ನು ಕಳೆದ ವರ್ಷ 2022ರ ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಈ ರೈಲು ಬೆಂಗಳೂರು, ಮೈಸೂರಿನಿಂದ, ತಮಿಳುನಾಡಿನ ಚೆನ್ನೈಗೆ ಸಂಪರ್ಕಿಸುತ್ತದೆ. ಇದನ್ನು ಮೇಕ್-ಇನ್-ಇಂಡಿಯಾ ಉಪಕ್ರಮದ ಅಡಿಯಲ್ಲಿ ತಯಾರು ಮಾಡಲಾಗಿದೆ.

ಸದ್ಯ ರೈಲ್ವೇ ಪೊಲೀಸರು ಸ್ಥಳೀಯ ಪೊಲೀಸರ ಜೊತೆಗೂಡಿ ಕಂಟೋನ್ಮೆಂಟ್ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಬೆಳಗ್ಗೆ 8.30 ರಿಂದ ವಂದೇ ಭಾರತ್ ರೈಲು ಬಂದು, ಹೋಗವವರೆಗು ಟ್ರ್ಯಾಕ್ ಪ್ಯಾಟ್ರೋಲಿಂಗ್ (ಗಸ್ತು) ಮಾಡುತ್ತಿದ್ದಾರೆ. ಟ್ಯಾನರಿ ರಸ್ತೆ ಬ್ರಿಡ್ಜ್, ಕಲ್ಲಪಲ್ಲಿ ಸ್ಮಶಾನ, ಜೀವನಹಳ್ಳಿ ಸೇರಿ ಹಲವೆಡೆ ಕಡೆ ಗಸ್ತು ತಿರುಗುತ್ತಿದ್ದಾರೆ. ಹಾಗೇ ಬೆಂಗಳೂರು ಸಿಟಿ, ಕೆಂಗೇರಿ, ಹೆಜ್ಜಾಲ, ಕಂಟೋನ್ಮೆಂಟ್ ನಿಂದ ಸಿಟಿ ಹೊರ ಭಾಗದಲ್ಲೂ ಟ್ರ್ಯಾಕ್ ಪ್ಯಾಟ್ರೋಲಿಂಗ್ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ