AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲೇಟು, ಪ್ರಯಾಣಿಕರಿಗೆ ಗಾಯ, ರೈಲ್ವೆ ಇಲಾಖೆಯಿಂದ ಕಠಿಣ ಕ್ರಮದ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದ ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಕೆ ಆರ್​ ಪುರಂ ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ ರೇಲ್ವೆ ನಿಲ್ದಾಣದ ಮಧ್ಯೆ ನಡೆದಿದೆ.

Vande Bharat Express: ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲೇಟು, ಪ್ರಯಾಣಿಕರಿಗೆ ಗಾಯ, ರೈಲ್ವೆ ಇಲಾಖೆಯಿಂದ ಕಠಿಣ ಕ್ರಮದ ಎಚ್ಚರಿಕೆ
ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ ರೈಲು
ವಿವೇಕ ಬಿರಾದಾರ
|

Updated on: Feb 26, 2023 | 9:09 AM

Share

ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಚಾಲನೆ ನೀಡಿದ್ದ ಮೈಸೂರು-ಚನೈ ವಂದೇ ಭಾರತ ಎಕ್ಸಪ್ರೆಸ್ (Chennai-Mysuru Vande Bharat Express)​​ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಕೆ ಆರ್​ ಪುರಂ (KR Puram) ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ (Bengaluru cantonment) ರೇಲ್ವೆ ನಿಲ್ದಾಣದ ಮಧ್ಯೆ ನಡೆದಿದೆ. ಘಟನೆಯಲ್ಲಿ ರೈಲಿನ 2 ಗಾಜಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ನೈಋತ್ಯ ರೈಲ್ವೆ (South western Railway) ಇಲಾಖೆ ತಿಳಿಸಿದೆ. ಸದ್ಯ ಕಿಡಿಗೇಡಿಗಳಿಗಾಗಿ ರೇಲ್ವೆ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ರೇಲ್ವೆ ಇಲಾಖೆ ವಿಷಾದ ವ್ಯಕ್ತಪಡಿಸಿದೆ. ಈ ಬಗ್ಗೆ ಬೆಂಗಳೂರು ರೇಲ್ವೆ ವಿಭಾಗೀಯ ಕಚೇರಿ ಇಲಾಖೆಗೆ ಸಂಬಂಧದಿಸಿದ ವಸ್ತುಗಳಿಗೆ ಹಾನಿಯುಂಟು ಮಾಡಿದರೆ, ಅಂತವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇನ್ನು ಜನವರಿ ಮತ್ತು ಫೆಬ್ರವರಿಯಲ್ಲಿ ಒಟ್ಟು 21 ಕಲ್ಲು ತೂರಾಟ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ವಿಭಾಗದಲ್ಲಿ ಇನ್ನೂ 13 ಪ್ರಕರಣಗಳು ದಾಖಲಾಗಿವೆ ಎಂದು ನೈರುತ್ಯ ರೇಲ್ವೆ ಇಲಾಖೆ ಮಾಹಿತಿ ನೀಡಿದೆ. ಎರಡು ವಾರಗಳ ಹಿಂದೆ, ಶುಕ್ರವಾರ ಸಿಕಂದ್ರಾಬಾದ್​-ವಿಶಾಖಪಟ್ಟಣಂ ವಂದೇ ಭಾರತ ಎಕ್ಸಪ್ರೆಸ್​ ರೈಲು ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಮೂಲಕ ಹಾದು ಹೋಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಿದ್ದರು. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ, ಕಲ್ಲು ತೂರಾಟದಿಂದಾಗಿ ಒಂದು ಕಿಟಕಿಗೆ ಹಾನಿಯಾಗಿದೆ.

ಈ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಾಗಿದೆ. ಇದನ್ನು ಕಳೆದ ವರ್ಷ 2022ರ ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಈ ರೈಲು ಬೆಂಗಳೂರು, ಮೈಸೂರಿನಿಂದ, ತಮಿಳುನಾಡಿನ ಚೆನ್ನೈಗೆ ಸಂಪರ್ಕಿಸುತ್ತದೆ. ಇದನ್ನು ಮೇಕ್-ಇನ್-ಇಂಡಿಯಾ ಉಪಕ್ರಮದ ಅಡಿಯಲ್ಲಿ ತಯಾರು ಮಾಡಲಾಗಿದೆ.

ಸದ್ಯ ರೈಲ್ವೇ ಪೊಲೀಸರು ಸ್ಥಳೀಯ ಪೊಲೀಸರ ಜೊತೆಗೂಡಿ ಕಂಟೋನ್ಮೆಂಟ್ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಬೆಳಗ್ಗೆ 8.30 ರಿಂದ ವಂದೇ ಭಾರತ್ ರೈಲು ಬಂದು, ಹೋಗವವರೆಗು ಟ್ರ್ಯಾಕ್ ಪ್ಯಾಟ್ರೋಲಿಂಗ್ (ಗಸ್ತು) ಮಾಡುತ್ತಿದ್ದಾರೆ. ಟ್ಯಾನರಿ ರಸ್ತೆ ಬ್ರಿಡ್ಜ್, ಕಲ್ಲಪಲ್ಲಿ ಸ್ಮಶಾನ, ಜೀವನಹಳ್ಳಿ ಸೇರಿ ಹಲವೆಡೆ ಕಡೆ ಗಸ್ತು ತಿರುಗುತ್ತಿದ್ದಾರೆ. ಹಾಗೇ ಬೆಂಗಳೂರು ಸಿಟಿ, ಕೆಂಗೇರಿ, ಹೆಜ್ಜಾಲ, ಕಂಟೋನ್ಮೆಂಟ್ ನಿಂದ ಸಿಟಿ ಹೊರ ಭಾಗದಲ್ಲೂ ಟ್ರ್ಯಾಕ್ ಪ್ಯಾಟ್ರೋಲಿಂಗ್ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​