Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿಚಿತ್ರ ಮಂಕಿ ಕ್ಯಾಪ್ ಕಳ್ಳರು; ಮೆಡಿಕಲ್ ಸ್ಟೋರ್​ಗಳೇ ಇವರ ಟಾರ್ಗೆಟ್

ಈ ಖತರ್ನಾಕ್​ ಕಳ್ಳರು, ಔಷಧಿ ಖರೀದಿ ನೆಪದಲ್ಲಿ ಬರುತ್ತಾರೆ. ಮೊದಲಿಗೆ ಕಡಿಮೆ ಪ್ರಮಾಣದ ವಸ್ತುವೊಂದನ್ನು ಕೊಂಡುಕೊಳ್ಳುತ್ತಾರೆ. ಖರೀದಿ ನೆಪದಲ್ಲಿ ಬಂದ ಇವರು ಫಾರ್ಮಸಿಯಲ್ಲಿ ಎಷ್ಟು ಜನ ಇದ್ದಾರೆ ಎನ್ನುವುದನ್ನು ಗಮನಿಸುತ್ತಾರೆ. ಬಳಿಕ ಏಕಾಎಕಿ ಬಂದು ದರೋಡೆ ಮಾಡುವ ಖದೀಮರು, ಕೊತ್ತನೂರು, ಹೆಚ್​ಎಸ್​ಆರ್ ಲೇಔಟ್, ಮಾರತ್ತಹಳ್ಳಿ ಅಪೊಲೋ ಫಾರ್ಮಸಿಗಳಲ್ಲಿ ತಮ್ಮ ಕೈಚಳಕ ತೋರಿಸಿದ್ದಾರೆ.

ಬೆಂಗಳೂರಿನಲ್ಲಿ ವಿಚಿತ್ರ ಮಂಕಿ ಕ್ಯಾಪ್ ಕಳ್ಳರು; ಮೆಡಿಕಲ್ ಸ್ಟೋರ್​ಗಳೇ ಇವರ ಟಾರ್ಗೆಟ್
ಬೆಂಗಳೂರಿನಲ್ಲಿ ಮಂಕಿ ಕ್ಯಾಪ್​ ಕಳ್ಳರು
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 06, 2023 | 3:25 PM

ಬೆಂಗಳೂರು, ಸೆ.06: ಮಹಾನಗರದಲ್ಲಿ ಕಳ್ಳತನ ಹೆಚ್ಚಾಗಿದ್ದು, ಪೊಲೀಸರು ಖದೀಮರಿಗೆ ಬ್ರೇಕ್ ಹಾಕಲು ಹರಸಾಹಸ ಪಡುತ್ತಿದ್ದಾರೆ. ಅದರಂತೆ ಇದೀಗ ಅಪೋಲೋ ಫಾರ್ಮಸಿಗಳನ್ನೆ ರಾಬರಿಕೋರರು ಟಾರ್ಗೇಟ್ ಮಾಡುತ್ತಿದ್ದಾರೆ. ಕಳೆದ ಹದಿನೈದು ದಿನಗಳಲ್ಲಿ ಮೂರು ಕಡೆ ಅಪೋಲೋ ಫಾರ್ಮಸಿಗಳಲ್ಲಿ ಕಳ್ಳತನ ನಡೆದಿದೆ. ಕೊತ್ತನೂರು, ಹೆಚ್​ಎಸ್​ಆರ್ ಲೇಔಟ್, ಮಾರತ್ತಹಳ್ಳಿ ಅಪೊಲೋ ಫಾರ್ಮಸಿಗಳಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ.

ಖದೀಮರು ಮಾಡಿದ ಪ್ಲ್ಯಾನ್​ ಹೀಗಿದೆ

ಈ ಖತರ್ನಾಕ್​ ಕಳ್ಳರು, ಔಷಧಿ ಖರೀದಿ ನೆಪದಲ್ಲಿ ಬರುತ್ತಾರೆ. ಮೊದಲಿಗೆ ಕಡಿಮೆ ಪ್ರಮಾಣದ ವಸ್ತುವೊಂದನ್ನು ಕೊಂಡುಕೊಳ್ಳುತ್ತಾರೆ. ಖರೀದಿ ನೆಪದಲ್ಲಿ ಬಂದ ಇವರು ಫಾರ್ಮಸಿಯಲ್ಲಿ ಎಷ್ಟು ಜನ ಇದ್ದಾರೆ ಎನ್ನುವುದನ್ನು ಗಮನಿಸುತ್ತಾರೆ. ಒಬ್ಬರೇ ಇದ್ದಲ್ಲಿ ಹತ್ತು ನಿಮಿಷದಲ್ಲಿ ಮತ್ತೆ ವಾಪಸ್ ಬರುವ ಕಳ್ಳರು, ಮೊದಲು ಖರೀದಿ ಮಾಡಿದ ವಸ್ತು ಬೇಡವೆಂದು ಹಣ ವಾಪಸ್ ಕೇಳುತ್ತಾರೆ. ಬಳಿಕ ಗಲ್ಲಾಪೆಟ್ಟಿಗೆ ಓಪನ್ ಮಾಡ್ತಿದ್ದಂತೆ ಚಾಕು ತೋರಿಸಿ ರಾಬರಿಗೆ ಇಳಿಯುವ ಖರ್ತನಾಕ್ ಕಳ್ಳರ ಮೇಲೆ ಇದೀಗ ಮಾರತ್ತಹಳ್ಳಿ, HSR ಲೇಔಟ್, ಕೊತ್ತನೂರು ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.

ಇದನ್ನೂ ಓದಿ:ಪೊಲೀಸರೆಂದು ಹೇಳಿ ಮನೆಗೆ ನುಗ್ಗಿದ ಖದೀಮರು; ಚಾಕು ತೋರಿಸಿ ಕೈಯಲ್ಲಿದ್ದ ಉಂಗುರ, ಇತರೆ ವಸ್ತುಗಳನ್ನು ದೋಚಿದ ಕಳ್ಳರು

ಮಾರತ್ತಹಳ್ಳಿ ಬಳಿ ಫಾರ್ಮಸಿ ಸಿಬ್ಬಂದಿಗೆ ‍‍ಚಾಕು ಇರಿದು ಹಣ ಕಸಿದಿರೋ ರಾಬರಿಕೋರರು

ಮೆಡಿಕಲ್ ಸ್ಟೋರ್​ಗಳಿಗೆ ಟಾರ್ಗೆಟ್ ಇವರು ಮಂಕಿ ಕ್ಯಾಪ್ ಹಾಕಿಕೊಂಡು ಮೆಡಿಕಲ್ ಸಿಬ್ಬಂದಿ ಒಳಗಿದ್ದಾಗಲೇ ಶೆಟರ್ ಮುರಿದು ಒಳಗೆ ಎಂಟ್ರಿ ಕೊಟ್ಟು, ಒಬ್ಬ ರೋಡ್​ನಲ್ಲಿ ಅಬ್ಸರ್ವ್ ಮಾಡುತ್ತಾನೆ. ಮತ್ತೊಬ್ಬ ಶೆಟರ್ ಮುರಿದು, ದರೋಡೆ ಮಾಡುತ್ತಾರೆ. ಇದಕ್ಕೆ ನಿರಾಕರಿಸಿದ ಹಿನ್ನಲೆ ಮಾರತ್ತಹಳ್ಳಿ ಬಳಿ ಫಾರ್ಮಸಿ ಸಿಬ್ಬಂದಿಗೆ ‍‍ಚಾಕು ಇರಿದು ರಾಬರಿಕೋರರು ಹಣ ಕಸಿದು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾರೆ. ಆರೋಪಿಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್