AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮಿತಿ ಮೀರಿದ ಶ್ವಾನಗಳ ದಾಳಿ ಪ್ರಕರಣ: 5 ತಿಂಗಳಲ್ಲಿ 9.7 ಸಾವಿರ ಕೇಸ್​​

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ 2.66 ಲಕ್ಷಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿದೆ. ರೇಬಿಸ್‌ನಿಂದ 30 ಜನರು ಮೃತಪಟ್ಟಿದ್ದು, ಆಸ್ಪತ್ರೆಗಳಲ್ಲಿ ಆ್ಯಂಟಿ ರೇಬಿಸ್ ವ್ಯಾಕ್ಸಿನ್‌ಗೆ ಬೇಡಿಕೆ ಹೆಚ್ಚಾಗಿದೆ. ನಾಯಿ ಕಚ್ಚಿದರೆ ನಿರ್ಲಕ್ಷ್ಯ ಮಾಡದಂತೆ ವೈದ್ಯರಿಂದಲೂ ಸಲಹೆ ವ್ಯಕ್ತವಾಗಿದೆ.

ಬೆಂಗಳೂರಲ್ಲಿ ಮಿತಿ ಮೀರಿದ ಶ್ವಾನಗಳ ದಾಳಿ ಪ್ರಕರಣ: 5 ತಿಂಗಳಲ್ಲಿ 9.7 ಸಾವಿರ ಕೇಸ್​​
ಸಾಂದರ್ಭಿಕ ಚಿತ್ರImage Credit source: PTI
Vinay Kashappanavar
| Edited By: |

Updated on: Jun 16, 2026 | 10:41 AM

Share

ಬೆಂಗಳೂರು, ಜೂನ್​​ 16: ರಾಜಧಾನಿ ಬೆಂಗಳೂರಲ್ಲಿ (Bengaluru) ಶ್ವಾನಗಳ ದಾಳಿ ಪ್ರಕರಣಗಳು ಮಿತಿ ಮೀರಿದ್ದು, ಈ ಸಂಬಂಧ ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಆತಂಕ ಮೂಡಿಸಿದೆ. ಕಳೆದ 5 ತಿಂಗಳಲ್ಲಿ ಬೆಂಗಳೂರಲ್ಲಿ ಬರೋಬ್ಬರಿ 9,763 ಪ್ರಕರಣಗಳು ಪತ್ತೆಯಾಗಿದ್ದು, ಕೇವಲ 1 ವಾರದಲ್ಲಿ 13,220 ನಾಯಿ ಕಡಿತಗಳು ರಾಜ್ಯದಲ್ಲಿ ವರದಿಯಾಗಿವೆ. ನಾಯಿಗಳ ದಾಳಿಯಿಂದ ಕಳೆದ ವಾರ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಜನವರಿಯಿಂದ ಇಲ್ಲಿಯವರೆಗೆ ಬರೊಬ್ಬರಿ 2,66,367 ಜನರಿಗೆ ರಾಜ್ಯದಲ್ಲಿ ನಾಯಿ ಕಚ್ಚಿದ್ದು ಒಟ್ಟು 30 ಜನರು ಮೃತಪಟ್ಟಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಯಿಗಳ ಅಟ್ಟಹಾಸ
  • 5 ತಿಂಗಳಲ್ಲಿ ಬೆಂಗಳೂರಲ್ಲಿ 9,763 ನಾಯಿ ಕಡಿತ ಪ್ರಕರಣ
  • ಕೇವಲ 1 ವಾರದಲ್ಲಿ ರಾಜ್ಯದಲ್ಲಿ 13,220 ನಾಯಿ ಕಡಿತ ಕೇಸ್​

ಇದನ್ನೂ ಓದಿ: ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ; ಕಾಫಿನಾಡಿನಲ್ಲಿ ರಸ್ತೆಗಿಳಿಯಲೂ ಭಯಪಡುತ್ತಿರುವ ಜನರು!

ಕಳೆದ 5 ತಿಂಗಳ ಬೆಂಗಳೂರಿನ ಅಂಕಿ-ಅಂಶ

ವಲಯ ಪ್ರಕರಣಗಳು
ಆನೇಕಲ್ 982
ಪೂರ್ವ ವಲಯ 2909
ಉತ್ತರ ವಲಯ 2569
ದಕ್ಷಿಣ ವಲಯ 3303

ಬೆಂಗಳೂರಿನ ಸೌತ್ ಝೋನ್​​ನಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣ ದಾಖಲಾಗಿದ್ದು, ಕಳೆದ 5 ತಿಂಗಳಿನಲ್ಲಿ 3,303 ಪ್ರಕರಣಗಳು ಪತ್ತೆಯಾಗಿವೆ. ಕೆಸಿ ಜನರಲ್ ಆಸ್ಪತ್ರೆ ಸೇರಿದಂತೆ ಅನೇಕ ಕಡೆಗಳಲ್ಲಿ ಡಾಗ್ ಬೈಟ್ ವ್ಯಾಕ್ಸಿನ್​​ಗೆ ಬೇಡಿಕೆ ಹೆಚ್ಚಿದ್ದು, ದಿನಕ್ಕೆ 60-70 ಜನರಿಗೆ ಡಾಗ್ ಬೈಟ್ ವ್ಯಾಕ್ಸಿನ್ ನೀಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಆ್ಯಂಟಿ ರೇಬಿಸ್ ವ್ಯಾಕ್ಸಿನ್​​ನ ಶೇಖರಣೆಗೆ ಸರ್ಕಾರಿ ಆಸ್ಪತ್ರೆಗಳು ಮುಂದಾಗಿವೆ. ನಾಯಿ ಕಚ್ಚಿದರೆ ನಿರ್ಲಕ್ಷ್ಯ ಮಾಡದೆ ಕೂಡಲೇ ವ್ಯಾಕ್ಸಿನ್ ಪಡೆಯಿರಿ ಎಂದು ವೈದ್ಯರು ಕೂಡ ಸಲಹೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!