AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಕಾಟ; ವಾಹನ ಸವಾರರಿಗೆ ಸಂಕಷ್ಟ, ಜನರಿಗೆ ಆತಂಕ

ಬೀದಿನಾಯಿಗಳ ಗ್ಯಾಂಗ್​ನಿಂದಾಗಿ ಬೆಂಗಳೂರಿನ ಕೆಲ ರಸ್ತೆಗಳಿಗೆ ಕಾಲಿಡೋಕೆ ಜನರು ಹೆದರುವಂತ ಪರಿಸ್ಥಿತಿ ನಿರ್ಮಾಣವಾಗಿಬಿಟ್ಟಿದೆ. ಯಾವ ಗಲ್ಲಿಯಿಂದ, ಯಾವ ಕಡೆಯಿಂದ ಅಟ್ಯಾಕ್ ಮಾಡುತ್ತವೋ ಅನ್ನೋ ಭಯದಲ್ಲೇ ಜನರು ಓಡಾಡ್ತಿದ್ದಾರೆ. ಅತ್ತ ವಾಹನ ಸವಾರರನ್ನೂ ಬಿಡದೇ ಅಟ್ಟಾಡಿಸ್ತಿರೋದು ವಾಹನ ಸವಾರರಿಗೂ ಆತಂಕ ತಂದಿಟ್ತಿದೆ. ಅತ್ತ ಈ ಗ್ಯಾಂಗ್​ಗೆ ಲಗಾಮು ಹಾಕಬೇಕಿದ್ದ ಪಾಲಿಕೆ ಸೈಲೆಂಟ್ ಆಗಿರೋದಕ್ಕೆ ಸಿಟಿಮಂದಿ ವೈಲೆಂಟ್ ಆಗಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಕಾಟ; ವಾಹನ ಸವಾರರಿಗೆ ಸಂಕಷ್ಟ, ಜನರಿಗೆ ಆತಂಕ
ಸಾಂದರ್ಭಿಕ ಚಿತ್ರ
ಶಾಂತಮೂರ್ತಿ
| Edited By: |

Updated on: Jul 13, 2024 | 2:25 PM

Share

ಬೆಂಗಳೂರು, ಜುಲೈ.13: ರಾಜ್ಯ ರಾಜಧಾನಿಯಲ್ಲಿ ಬೀದಿನಾಯಿಗಳ (Stray Dogs) ಹಾವಳಿ ಜೋರಾಗ್ತಿದೆ. ಶಾಪಿಂಗ್ ಹಾಟ್ ಸ್ಪಾಟ್ ಆಗಿದ್ದ ಬಸವನಗುಡಿಯ ಗಾಂಧಿ ಬಜಾರ್, ಲಾಲ್ ಬಾಗ್, ಸಂಪಂಗಿ ರಾಮನಗರ ಸೇರಿದಂತೆ ಹಲವೆಡೆ ಬೀದಿನಾಯಿಗಳು ಎಲ್ಲೆಂದರಲ್ಲಿ ಗುಂಪು ಗುಂಪಾಗಿ ಕಂಡುಬರ್ತಿದೆ. ರಾಜಧಾನಿಯ ರಸ್ತೆಗಳಲ್ಲಿ ಸೈಲೆಂಟ್ ಆಗಿ ಮಲಗಿ ನಿದ್ದೆಮಾಡ್ತಿರೋ ಈ ಶ್ವಾನಗಳು, ಕೆಲವೊಮ್ಮೆ ವೈಲೆಂಟ್ ಆಗ್ತಿರೋದು ಸಿಟಿಮಂದಿಗೆ ಸಂಕಷ್ಟ ತಂದಿಟ್ಟಿದೆ.

ಶಾಪಿಂಗ್ ಹಾಟ್ ಸ್ಪಾಟ್ ಆಗಿರೋ ಗಾಂಧಿ ಬಜಾರ್ ಸುತ್ತಮುತ್ತ ಬೀದಿನಾಯಿಗಳು ಗುಂಪು ಕಟ್ಟಿಕೊಂಡು ಓಡಾಡ್ತಿವೆ. ಸಂಜೆ ವೇಳೆ ಕೆಲ ಶ್ವಾನಗಳು ಜನರಿಗೆ ಕಾಟ ಕೊಡ್ತಿರೋದು ಜನರನ್ನ ಹೈರಾಣಾಗಿಸಿದೆ. ಅತ್ತ ಸಂಪಂಗಿ ರಾಮನಗರ ಸುತ್ತಮುತ್ತ ಯಾವ ವಾಹನ ಬಂದ್ರೂ ಬೀದಿನಾಯಿಗಳು ಅಟ್ಟಾಡಿಸಿಕೊಂಡು ಹೋಗ್ತಿದ್ದು, ಇದರಿಂದ ವಾಹನ ಸವಾರರು ಗಾಬರಿಯಾಗಿ ಅಪಘಾತ ಸಂಭವಿಸಿದ ಉದಾಹರಣೆಯಿದೆ. ಬೀದಿನಾಯಿಗಳ ಕಾಟಕ್ಕೆ ಬೇಸತ್ತ ಮಂದಿ, ಪಾಲಿಕೆ ಬೀದಿನಾಯಿಗಳಿಗೆ ಕಡಿವಾಣ ಹಾಕಬೇಕು ಅಂತಾ ಆಗ್ರಹ ಮಾಡ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಪ್ರವಾಸಿ ತಾಣಗಳಲ್ಲಿ ಹೆಚ್ಚಿದ ಪೊಲೀಸ್ ತಪಾಸಣೆ, ಮದ್ಯದ ಬಾಟಲಿಗಳು ಸೀಜ್!

ಇನ್ನು ಬೀದಿನಾಯಿಗಳು ಹಲವೆಡೆ ಜನರಿಗೆ ಸಮಸ್ಯೆಯಾಗ್ತಿದ್ದರು ಪಾಲಿಕೆ ಕ್ರಮ ಕೈಗೊಂಡಿಲ್ಲ ಅಂತಿರೋ ಸಿಟಿಮಂದಿ, ಬೀದಿನಾಯಿಗಳನ್ನ ಸೆರೆಹಿಡಿಯೋದೊಂದೆ ಇದಕ್ಕೆ ಪರಿಹಾರ ಅಂತಾ ಆಗ್ರಹ ಮಾಡ್ತಿದ್ದಾರೆ. ಅಲ್ಲದೇ ಬೀದಿಗಳಲ್ಲಿ ನಾಯಿಗಳ ಕಾಟಕ್ಕೆ ಮಹಿಳೆಯರು, ಮಕ್ಕಳು ಓಡಾಡೋಕು ಭಯಪಡುವಂತಾಗಿದೆ ಅಂತಿರೋ ಜನರು, ಬೀದಿನಾಯಿಗಳ ಮೇಲೆ ನಿಗಾ ಇಡಿ ಅಂತಿದ್ದಾರೆ.

ಸದ್ಯ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಿ ಸೈಲೆಂಟ್ ಆಗ್ತಿರೋ ಪಾಲಿಕೆ, ಬೀದಿನಾಯಿಗಳು ಜನರ ಮೇಲೆ ದಾಳಿ ನಡೆಸೋ ಮೊದಲೇ ಪಾಲಿಕೆ ಎಚ್ಚೆತ್ತುಕೊಳ್ಳಬೇಕಿದೆ. ಬೀದಿನಾಯಿಗಳ ಕಾಟಕ್ಕೆ ಸುಸ್ತಾದ ಸಿಟಿಮಂದಿ ಪಾಲಿಕೆಗೆ ಹಿಡಿಶಾಪ ಹಾಕ್ತಿದ್ದು, ಸದ್ಯ ಬೀದಿನಾಯಿಗಳ ಕಾಟಕ್ಕೆ ಪಾಲಿಕೆ ಬ್ರೇಕ್ ಹಾಕುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು