AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೀದಿ ದನಗಳ ಹಾವಳಿ; ವಾಹನ ಸವಾರರು ಹೈರಾಣ, ಪಾಲಿಕೆ ವಿರುದ್ಧ ಆಕ್ರೋಶ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ನೋಡಿದ್ರು ‌ಟ್ರಾಫಿಕ್‌. ಇನ್ನೂ ಟ್ರಾಫಿಕ್‌ ಸಮಸ್ಯೆ‌ ಒಂದಡೆಯಾದರೆ ಮತ್ತೊಂದೆಡೆ ಬೀದಿ ದನಗಳ ಹಾವಳಿ. ಒಂದಲ್ಲ ಎರಡಲ್ಲ ನಾಲ್ಕೈದು ದನಗಳು ಗುಂಪು ಕಟ್ಟಿಕೊಂಡು ಓಡಾಡೊ ದನಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಹೈರಾಣಾಗಿದ್ದಾರೆ.

ಬೆಂಗಳೂರಿನಲ್ಲಿ ಬೀದಿ ದನಗಳ ಹಾವಳಿ; ವಾಹನ ಸವಾರರು ಹೈರಾಣ, ಪಾಲಿಕೆ ವಿರುದ್ಧ ಆಕ್ರೋಶ
ಬೆಂಗಳೂರಿನಲ್ಲಿ ಬೀದಿ ದನಗಳ ಹಾವಳಿ
Vinayak Hanamant Gurav
| Edited By: ಆಯೇಷಾ ಬಾನು|

Updated on: Jul 14, 2024 | 9:22 AM

Share

ಬೆಂಗಳೂರು, ಜುಲೈ.14: ಸಿಲಿಕಾನ್‌ ಸಿಟಿ‌ ಬೆಂಗಳೂರಿನಲ್ಲಿ‌ (Bengaluru) ಬೀದಿ ದನಗಳ ಉಪಟಳ ಮಿತಿ ಮೀರಿದೆ. ಅದರಲ್ಲೂ ಬನಶಂಕರಿಯಿಂದ ತಲಘಟ್ಟಪುರದ ಕನಕಪುರ ಮುಖ್ಯ ರಸ್ತೆಯಲ್ಲಿ ಓಡಾಡಬೇಕೆಂದರೆ ಜೀವ ಕೈಯಲ್ಲೆ ಹಿಡಿದು ಓಡಾಡಬೇಕು. ರಸ್ತೆಯ ಮಧ್ಯದಲ್ಲಿ ರಾಜರೋಷವಾಗಿ ಓಡಾಡೊ‌ ಸ್ಟ್ರೀಟ್ ಬುಲ್ಸ್​ಗಳಿಂದ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಿವೆ.

ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಈ ರಸ್ತೆಯಲ್ಲಿ ಓಡಾಡುವುದಕ್ಕೂ ಭಯ ಪಡುತ್ತಿದ್ದಾರೆ. ಲಂಗು, ಲಗಾಮು ಇಲ್ಲದೇ ದನಗಳನ್ನ ಮಾಲೀಕರುಗಳು ಬೀದಿಗೆ ಬಿಟ್ಟು ಬಿಡ್ತಾರೆ. ಇದರಿಂದ ದನಗಳು ಆಹಾರ ಅರಿಸಿ ಮಾರ್ಕೆಟ್ ಏರಿಯಾ, ಸಾರ್ವಜನಿಕರು ಕಸ ಎಸೆಯುವಂತಹ ಪ್ರದೇಶಗಳಲ್ಲಿ ಓಡಾಡುವುದರಿಂದಾಗಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅವುಗಳನ್ನ ಓಡಿಸೊದಕ್ಕೆ ಹೋದರೆ ಗುಮ್ಮೊದಕ್ಕೆ ಬರುತ್ತವೆ. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಓಡಾಡೊಕೆ ಕಷ್ಟವಾಗುತ್ತೆ ಹೀಗಾಗಿ ಬೀದಿ ದನಗಳ‌ನ್ನ ಕಂಟ್ರೋಲ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ. Street Cattle in Bangalore; Motorists are outraged against the bbmp kannada news

ಇದನ್ನೂ ಓದಿ: ಪೋಷಕರೇ ಎಚ್ಚರ: ಕರ್ನಾಟಕದಲ್ಲಿ ಮಕ್ಕಳನ್ನೇ ಹೆಚ್ಚು ಬಾಧಿಸುತ್ತಿದೆ ಡೆಂಗ್ಯೂ!

ಇನ್ನೂ ಟಿವಿ9 ಕ್ಯಾಮಾರಾ ತಗೆದು ಶೂಟ್ ಮಾಡುವಾಗ ಸ್ಟ್ರೀಟ್ ಬುಲ್ಸ್ ಮೈ ಮೇಲೆ ಎಗರಿ ಅಟ್ಯಾಕ್ ಮಾಡೋ ದೃಶ್ಯ ಸೆರೆಯಾಗಿದೆ. ಅಲ್ಲದೇ ಮೆಟ್ರೊ ನಿಲ್ದಾಣ ಕೆಳಗಡೆ ನಿಲ್ಲೋ ಕಪ್ಪು ಹಸುಗಳಿಂದಾಗಿ ಬೆಳಕಿನಿಂದ ನಿಲ್ದಾಣ ಕೆಳಗೆ ಬಂದ್ರೆ ಹಸುಗಳು ಕಾಣದೇ ಅಪಘಾತ ಸಂಭವಿಸುತ್ತಿವೆ. ಸಾಕಷ್ಟು ಬಾರಿ ಬೀದಿ ದನಗಳ ಕಂಟ್ರೋಲ್‌ಗೆ ಮನವಿ ಮಾಡಿದ್ರು ತಲೆಕೆಡಿಸಿಕೊಳ್ಳದ ಪಾಲಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದು, ಬೀದಿಗೆ ದನಗಳ‌ನ್ನ ಬಿಡೋ ಮಾಲೀಕರುಗಳಿಗೆ ದಂಡದ ಬೀಸಿ ಮುಟ್ಟಿಸೋ ಮೂಲಕ ಕ್ರಮಕ್ಕೆ ಮುಂದಾಗಬೇಕು ಎನ್ನುತ್ತಿದ್ದಾರೆ.

ಒಟ್ಟಿನಲ್ಲಿ ಈ ಸ್ಟ್ರೀಟ್ ಬುಲ್ಸ್‌ಗಳಿಂದಾಗಿ‌ ರಾಜಧಾನಿ ಮಂದಿ ರಸ್ತೆ ಮೇಲೆ ಓಡಾಡಲು ಭಯ ಪಡುವಂತಾಗಿದ್ದು, ಇನ್ನಾದರು ಪಾಲಿಕೆ ಎಚ್ಚೆತ್ತುಕೊಂಡು ಈ ಬೀದಿ ದನಗಳ ಉಪಟಳಕ್ಕೆ ಹೇಗೆ ಕಡಿವಾಣ ಹಾಕುತ್ತೆ ಅಂತ ಕಾದು ನೋಡಬೇಕು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Vinayak Hanamant Gurav
Vinayak Hanamant Gurav
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ