AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 2 ವರ್ಷದ ಮಗು ಮೇಲೆ ಬೀದಿ ನಾಯಿಗಳ ದಾಳಿ! ಸಾವು ಬದುಕಿನ ನಡುವೆ ಮಗು ಹೋರಾಟ

ಮನೆ ಮುಂದೆ ಎರಡು ವರ್ಷದ ಮಗು ಆಟವಾಡುತ್ತಿತ್ತು. ಈ ವೇಳೆ ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ನಡೆಸಿವೆ. ಮಗುವಿನ ಕುತ್ತಿಗೆ, ತೊಡೆ, ಕಿವಿ ಭಾಗಕ್ಕೆ ಕಚ್ಚಿವೆ.

ಬೆಂಗಳೂರಿನಲ್ಲಿ 2 ವರ್ಷದ ಮಗು ಮೇಲೆ ಬೀದಿ ನಾಯಿಗಳ ದಾಳಿ! ಸಾವು ಬದುಕಿನ ನಡುವೆ ಮಗು ಹೋರಾಟ
ಗಾಯಗೊಂಡಿರುವ ಮಗು
TV9 Web
| Updated By: sandhya thejappa|

Updated on: Sep 04, 2021 | 3:41 PM

Share

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಬೀದಿ ನಾಯಿಗಳ (Street Dogs) ಹಾವಳಿ ಹೆಚ್ಚಾಗುತ್ತಿದೆ. ಬೀದಿ ನಾಯಿಗಳ ಗುಂಪು ಜನರ ಮೇಲೆ ಏಕಾಏಕಿ ದಾಳಿ ನಡೆಸುತ್ತಿದೆ. ಇಂದು ಹೆಚ್ಎಎಲ್ ಬಳಿಯ ನಾರಾಯಣರೆಡ್ಡಿ ಲೇಔಟ್​ನಲ್ಲಿ ಎರಡು ವರ್ಷದ ಹೆಣ್ಣು ಮಗುವೊಂದರೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. 2 ವರ್ಷದ ಹೆಣ್ಣು ಮಗುವನ್ನು ನಾಯಿಗಳು ಕಚ್ಚಿ ಎಳೆದಾಡಿದ್ದು, ಗಾಯಗೊಂಡಿರುವ ಮಗು ಸಾವು ಬದುಕಿನ ನಡುವೆ ಹೋರಾಡುತ್ತಿದೆ.

ಮನೆ ಮುಂದೆ ಎರಡು ವರ್ಷದ ಮಗು ಆಟವಾಡುತ್ತಿತ್ತು. ಈ ವೇಳೆ ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ನಡೆಸಿವೆ. ಮಗುವಿನ ಕುತ್ತಿಗೆ, ತೊಡೆ, ಕಿವಿ ಭಾಗಕ್ಕೆ ಕಚ್ಚಿವೆ. ಗಾಯಗೊಂಡಿರುವ ಮಗು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಬಿಬಿಎಂಪಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಬೀದಿ ನಾಯಿಗಳ ಹಾವಳಿ ತಡೆಯುವಂತೆ ಈ ಹಿಂದೆ ಹಲವು ಬಾರಿ ಬಿಬಿಎಂಪಿಗೆ ದೂರು ನೀಡಲಾಗಿತ್ತು. ಸದ್ಯ ಮಗುವಿನ ಪೊಷಕರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ ಅಂತ ಎಫ್ಐಆರ್ ದಾಖಲಾಗಿದೆ. ಮಹಾದೇವಪುರ ವಲಯ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈವರೆಗೂ ಯಾವೊಬ್ಬ ಬಿಬಿಎಂಪಿ ಅಧಿಕಾರಿಗಳಿಗೂ ನೋಟಿಸ್ ನೀಡಿಲ್ಲ. ಘಟನೆ ಬಗ್ಗೆ ಹೆಚ್ಎಎಲ್ ಪೊಲೀಸರು ವಿಚಾರಣೆ ಕೂಡ ನಡೆಸಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚಬೇಕು; ಬಿಬಿಎಂಪಿ ಅಧಿಕಾರಿಗಳಿಗೆ ಗೌರವ್ ಗುಪ್ತಾ ಸೂಚನೆ

ಕೊರೊನಾ ಪ್ರಕರಣ ಹೆಚ್ಚಿರುವ ಜಿಲ್ಲಾಡಳಿತಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ

(Street Dog attack on two years Girl Baby in Bengaluru)

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!