AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿಯಿಂದ ನಿಂದನೆ: ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಳು ಎಂದು ಶಿಕ್ಷಕಿ ನಿಂದಿಸಿದಕ್ಕೆ ಮನನೊಂದು ವಿದ್ಯಾರ್ಥಿನಿ ಡೆತ್​ನೋಟ್​ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿಯಿಂದ ನಿಂದನೆ: ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ
ಮೃತ ವಿದ್ಯಾರ್ಥಿನಿ ಅಮೃತಾ
TV9 Web
| Edited By: |

Updated on:Nov 14, 2022 | 3:20 PM

Share

ಬೆಂಗಳೂರು: ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಳು ಎಂದು ಶಿಕ್ಷಕಿ (teacher) ನಿಂದಿಸಿದಕ್ಕೆ ಮನನೊಂದು ವಿದ್ಯಾರ್ಥಿನಿ (Student) ಡೆತ್​ನೋಟ್​ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದ ಒಎಂಬಿಆರ್​ ಲೇಔಟ್​ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲಿಷ್​ ಸ್ಕೂಲ್​ನಲ್ಲಿ ನಡೆದಿದೆ. ಅಲ್ಲಿಗೆ ಬೆಂಗಳೂರಿನಲ್ಲಿ ಮತ್ತೊಂದು ವಿದ್ಯಾರ್ಥಿನಿಯ ಆತ್ಮಹತ್ಯೆಯಾದಂತಾಗಿದೆ. ಅಮೃತಾ ನೇಣಿಗೆ ಶರಣಾದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ. ನವೆಂಬರ್​ 2ರಂದು ಟೆಸ್ಟ್ ವೇಳೆ ಅಮೃತಾ ಕಾಪಿ ಚೀಟಿ ತಂದಿದ್ದಾಳೆ. ಇದೇ ವಿಷಯಕ್ಕೆ 4-5 ದಿನಗಳಿಂದ ಕ್ಲಾಸ್​ನಲ್ಲಿ ವಿದ್ಯಾರ್ಥಿಗಳ ಮುಂದೆ ಅಮೃತಾಳನ್ನು ಶಿಕ್ಷಕಿ ಶಾಲಿನಿ ನಿಂದಿಸಿದ್ದಾರೆ. ಶಾಲೆಯಲ್ಲಿ ತನಗಾಗುತ್ತಿದ್ದ ಅವಮಾನದ ಬಗ್ಗೆ ಅಮೃತಾ ಡೆತ್​ನೋಟ್​​ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಇದ್ದ ಒಬ್ಬಳೇ ಪುತ್ರಿಯನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕಿದ್ದಾರೆ. LKGಯಿಂದ ಇದೇ ಶಾಲೆಯಲ್ಲಿ ಅಮೃತಾ ಓದುತ್ತಿದ್ದಳು ಎನ್ನಲಾಗುತ್ತಿದೆ.

ನನ್ನ ಮಗಳ ಸಾವಿಗೆ ಶಿಕ್ಷಕಿ ಶಾಲಿನಿಯೇ ಕಾರಣ: ಅಮೃತಾ ತಾಯಿ ಆಶಾ ಆರೋಪ

ಇತ್ತ ಶಾಲಾ ಆವರಣದಲ್ಲಿ ಅಮೃತಾ ಮೃತದೇಹವಿಟ್ಟು ಪೋಷಕರು ಪ್ರತಿಭಟನೆ ಮಾಡಿದರು. ನನ್ನ ಮಗಳ ಸಾವಿಗೆ ಶಿಕ್ಷಕಿ ಶಾಲಿನಿಯೇ ಕಾರಣ ಎಂದು ತಾಯಿ ಆಶಾ ಆರೋಪ ಮಾಡಿದರು. ಕ್ಲಾಸ್ ಟೀಚರ್ ಶಾಲಿನಿ ಬರುವವರೆಗೂ ಇಲ್ಲಿಂದ ಮೃತ ದೇಹ ತೆಗೆದುಕೊಂಡು ಹೋಗಲ್ಲ ಎಂದು ಪಟ್ಟುಹಿಡಿದರು. ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಜಯಪ್ರಕಾಶ್​ ಭೇಟಿ ನೀಡಿ ಅಮೃತಾ ತಾಯಿ ಆಶಾ ಅವರನ್ನು ಸಾಂತ್ವನ ಮಾಡಿದರು. ಅಮೃತಾ ಮೃತ ದೇಹಕ್ಕೆ ಅಂತಿಮ ನಮನ ಸಲ್ಲಿಸಿದರು.

ಅಮೃತ ಕಾಪಿ ಮಾಡಿರುವುದಕ್ಕೆ ನಮ್ಮಲ್ಲಿ ದಾಖಲೆ ಇವೆ: ಪ್ರಿನ್ಸಿಪಲ್ ಐರಿನ್

ಘಟನೆ ಕುರಿತಾಗಿ ಸ್ಕೂಲ್ ಪ್ರಿನ್ಸಿಪಲ್ ಐರಿನ್ ಮಾತನಾಡಿದ್ದು, ಅವರು ಮಕ್ಕಳಿಗೆ ಬೈಯುವವರಲ್ಲ. ನನಗೆ ಇವತ್ತು ಬೆಳಿಗ್ಗೆ ಗೊತ್ತಾಯಿತು ಆತ್ಮಹತ್ಯೆ ಮಾಡಿಕೊಂಡಿರುವುದು. ಕಾಪಿ ಮಾಡಿರುವುದಕ್ಕೆ ನಮ್ಮಲ್ಲಿ ದಾಖಲೆ ಇವೆ. ನಾನು ಪೋಷಕರ ಜೊತೆಗೆ ಮಾತಾಡಿದ್ದೇನೆ. ಕ್ಲಾಸ್ ಟೀಚರ್ ಶಾಲಿನಿ ಕೂಡ ಮೃತ ಅಮೃತ ಜೊತೆಗೆ ಮಾತಾಡಿದ್ದಾರೆ. ಮುಂದೆ ಹೀಗೆ ಮಾಡಬೇಡ ಎಂದು ಬುದ್ದಿ ಹೇಳಿದ್ದಾರೆ ಎಂದು ಹೇಳಿದರು.

ಶಾಲೆ ವಿರುದ್ಧ ಪೊಷಕರ ಆರೋಪ:

ಇನ್ನು ಇತರೆ ವಿದ್ಯಾರ್ಥಿಗಳ ಪೋಷಕರು ಪ್ರತಿಕ್ರಿಯೆ ನೀಡಿದ್ದು, ನನ್ನ ಮಗನೂ ಈ ಸ್ಕೂಲ್​ನಲ್ಲಿ ಓದುತ್ತಿದ್ದ. ಅವನಿಗೂ ತುಂಬಾ ತೊಂದರೆ ಕೊಟ್ಟರು. ಅವನು ಈ ಸ್ಕೂಲ್‌ ಮುಗಿಸಿ ಈಗ ಕಾಲೇಜಿಗೆ ಹೋಗುತ್ತಿದ್ದಾನೆ ಎಂದು ಪೋಷಕಿ ವರಲಕ್ಷ್ಮೀ ಆರೋಪಿಸಿದರು. ನಮ್ಮ ಮಗಳು ಕ್ಲಾಸ್ ಟೀಚರ್ ಮಗಳ ಜೊತೆಗೆ ಮಾತಾಡಿಲ್ಲ ಎಂದು ತೊಂದರೆ ಕೊಟ್ಟರು. ಕ್ಲಾಸ್ ಟೀಚರ್ ನಂತರ ಪ್ರಿನ್ಸಿಪಲ್ ಕರೆದು ಸಾರಿ ಹೇಳಿದರು ಎಂದು ಶಾಲೆಯ ವಿರುದ್ಧ ಮತ್ತೊಬ್ಬ ಪೋಷಕ ಬಾಬು ಆಕ್ರೋಶ ವ್ಯಕ್ತಪಡಿಸಿದರು.

ಕಲ್ಪಳ್ಳಿ ಸಶ್ಮಾನದಲ್ಲಿ ಅಮೃತ ಅಂತ್ಯಕ್ರಿಯೆ:

ಪುಲಿಕೇಶಿ ನಗರದ ಜೀವನಹಳ್ಳಿಯಲ್ಲಿರುವ ಕಲ್ಪಳ್ಳಿ ಸಶ್ಮಾನದಲ್ಲಿ ಅಮೃತ ಅಂತ್ಯಕ್ರಿಯೆ ನಡೆಯಲಿದೆ. ಕೆಲವೇ ಕ್ಷಣದಲ್ಲಿ ಮನೆಯಿಂದ ಸ್ಮಶಾನಕ್ಕೆ ಮೃತದೇಹ ಶಿಫ್ಟ್ ಮಾಡಲಿದ್ದು, ಎಲೆಕ್ಟ್ರಿಕ್ ಬರ್ನಿಂಗ್ ಮೂಲಕ ಅಂತ್ಯಕ್ರಿಯೆ ನಡೆಯಲಿದೆ. ಆ್ಯಂಬುಲೆನ್ಸ್ ಮುಂದೆ ಧಿಕ್ಕಾರ ಕೂಗಿ ಮಹಿಳಾ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Mon, 14 November 22

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್