AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​

ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on:Nov 27, 2021 | 1:24 PM

Share

ಬೆಂಗಳೂರು: ವೈದ್ಯೆ ಆಗಬೇಕು ಎಂದು ಕನಸು ಕಂಡಿದ್ದ ವಿದ್ಯಾರ್ಥಿನಿಯೊಬ್ಬರು ದ್ವಿತೀಯ ಪಿಯುಸಿಯಲ್ಲಿ ಶೇ.96ರಷ್ಟು ಅಂಕ ಗಳಿಸಿದ್ದರೂ ಅವರಿಗೆ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರಕಾರಿ ಸೀಟು ಸಿಗಲಿಲ್ಲ. ಈ ಕಾರಣಕ್ಕೆ ಆ ಹೆಣ್ಣುಮಗಳು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಚನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ. ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಡಿಸೆಂಬರ್​ 27 ರಂದು ನಡೆದ ಘಟನೆ ಇದಾಗಿದೆ. ಆದರೆ ಸಂಕಲ್ಪ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನು ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ಕೂಡ ವಿದ್ಯಾರ್ಥಿನಿ ಸಾವಿಗೆ ನಿಜವಾದ ಕಾರಣ ಏನು ಎಂಬ ಬಗ್ಗೆ ಸ್ಪಷ್ಟನೆ ನೀಡಿಲ್ಲ.

ಇದನ್ನೂ ಓದಿ: ತಾಯಿಯ ಮೊಬೈಲ್‌ಗೆ ‌ಮೆಸೇಜ್ ಕಳುಹಿಸಿ ಹದಿಹರೆಯದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ

ಕಾಸರಗೋಡಿನಲ್ಲಿ ಮಲಯಾಳೀಕರಣ ನಡೆದಿಲ್ಲ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಅಶ್ರಫ್​ಗೆ ಅಭಿನಂದನೆ ತಿಳಿಸಿದ ಹೆಚ್​ಡಿಕೆ

Published On - 12:30 pm, Sat, 27 November 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?