AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವು: ಮುಂಜಾಗ್ರತೆ ಕ್ರಮ ಕೈಗೊಳ್ಳಲುವಂತೆ ಕರಾರಸಾನಿ ಸೂಚನೆ

ಸರ್ಕಾರಿ ಬಸ್​ನಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ನಿನ್ನೆ ಮೃತಪಟ್ಟ ಹಿನ್ನೆಲೆ ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವು: ಮುಂಜಾಗ್ರತೆ ಕ್ರಮ ಕೈಗೊಳ್ಳಲುವಂತೆ ಕರಾರಸಾನಿ ಸೂಚನೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Jun 13, 2023 | 7:37 PM

Share

ಬೆಂಗಳೂರು: ಕಿಕ್ಕಿರಿದು ತುಂಬಿದ್ದ ಸರ್ಕಾರಿ ಬಸ್​ನಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ನಿನ್ನೆ ಮೃತಪಟ್ಟ ದಾರಣ ಘಟನೆಯೊಂದು ಹಾವೇರಿ (Haveri) ಜಿಲ್ಲೆಯ ಹಾನಗಲ್​ ತಾಲೂಕಿನ ಕುಸನೂರ ಗ್ರಾಮದಲ್ಲಿ ಸಂಭವಿಸಿತ್ತು. ಈ ಕುರಿತಾಗಿ ಸಾರಿಗೆ ಮತ್ತು ಮುಜರಾಯಿ ಸಚಿವರು ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲನಾ ಸಿಬ್ಬಂದಿಗಳಿಗೆ ಕೆಲ ಸೂಕ್ತ ನಿರ್ದೇಶನಗಳನ್ನು ನೀಡುವ ಮೂಲಕ ಕರ್ನಾಟಕ ರಾಜ್ಯ ಸಾರಿಗೆ ನಿಗಮ (KSRTC) ಸುತ್ತೋಲೆ ಹೊರಡಿಸಿದೆ.

ಸುತ್ತೋಲೆಯಲ್ಲಿ ಏನಿದೆ?

ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ, ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆಯು ನಮ್ಮ ಆದ್ಯ ಕರ್ತವ್ಯವಾಗಿರುತ್ತದೆ ಆದರೆ, ಜೂನ್​ 12ರಂದು ವಾ.ಕ.ರ.ಸಾ ಸಂಸ್ಥೆಯ ಹಾವೇರಿ ವಿಭಾಗದ ಹಾನಗಲ್‌ ಘಟಕದ ವಾಹನವು ಕಾರ್ಯಾಚರಣೆಯಲ್ಲಿರುವಾಗ ಓರ್ವ ವಿದ್ಯಾರ್ಥಿನಿಯು ವಾಹನದಿಂದ ಕೆಳಗೆ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿರುವಂತಹ ದುರಾದೃಷ್ಟಕರ ಘಟನೆ ವರದಿಯಾಗಿದೆ.

ಇದನ್ನೂ ಓದಿ: Haveri News: ಬಸ್‌ ರಶ್‌ಗೆ ಬಾಲಕಿ ಬಲಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ದುರಂತ ಅಂತ್ಯ

ಈ ಬಗ್ಗೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ತೀವ್ರ ವಿಷಾದ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಅವಘಡಗಳು ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ, ನಡೆಯದಂತೆ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಅದರಂತೆ, ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳಿಗೆ ಈ ಕೆಳಕಂಡಂತೆ ಸೂಕ್ತ ನಿರ್ದೇಶನಗಳನ್ನು ಸಹ ನೀಡಲಾಗಿದೆ.

ಇದನ್ನೂ ಓದಿ: ನಾವು ನಷ್ಟ ಮಾಡಿ ನಿಮ್ಮನ್ನು ಲಾಭದಲ್ಲಿ ಇಡಬೇಕಾ: ಬಿಲ್ ಕಟ್ಟಿ ಎಂದ ಹೆಸ್ಕಾಂ ಎಂಡಿಗೆ ಕೈಗಾರಿಕೋದ್ಯಮಿಗಳ ಪ್ರಶ್ನೆ

  • ಚಾಲನಾ ಸಿಬ್ಬಂದಿಗಳು ವಾಹನವನ್ನು ಘಟಕದಿಂದ ಕಾರ್ಯಾಚರಣೆಗೆ ತೆಗೆದುಕೊಂಡು ಹೋಗುವ ಮೊದಲು ವಾಹನದ ಬಾಗಿಲುಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು.
  • ಪ್ರತಿಯೊಂದು ಬಸ್‌ ನಿಲ್ದಾಣಗಳಲ್ಲಿ ವಾಹನದ ನಿರ್ವಾಹಕರು ವಾಹನದ ಹಿಂದಿನ ಬಾಗಿಲನ್ನು ಮುಚ್ಚಿರುವ ಬಗ್ಗೆ ಖಾತ್ರಿಪಡಿಸಿಕೊಂಡು ಚಾಲಕರಿಗೆ ಸೂಚನೆ ನೀಡಿದ ನಂತರವೇ ಚಾಲಕರು ವಾಹನವನ್ನು ಚಾಲನೆ ಮಾಡಬೇಕು.
  • ವಾಹನದ ಪುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸಲು ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು.
  • ಚಾಲಕರು ವಾಹನದ ಮುಂದಿನ ಹಿಂದಿನ ಬಾಗಿಲನ್ನು ಮುಚ್ಚಿರುವ ಬಗೆ, ಖಾತ್ರಿಸಿಕೊಂಡು ವಾಹನ ಚಾಲನೆ ಮಾಡಬೇಕು.
  • ಬಸ್​ ನಿಲ್ದಾಣ ತಲುವುವ ಮುಂಚೆ ವಾಹನದ ಬಾಗಿಲನ್ನು ತೆರೆಯದೆ ಬಸ್‌ ನಿಲ್ದಾಣ ಅಥವಾ ನಿಲುಗಡೆ ಸ್ಥಳದಲ್ಲಿ, ಬಸ್‌ ನಿಲ್ಲಿಸಿದ ನಂತರ ಬಾಗಿಲನ್ನು ತೆರೆದು ಪ್ರಯಾಣಿಕರನ್ನು ಇಳಿಸಬೇಕು.

ಈ ಎಲ್ಲಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸೂಚನೆ ನೀಡಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:37 pm, Tue, 13 June 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ