AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್ಲೈನ್​ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್! ಲೋನ್ ಕಟ್ಟಿಲ್ಲವೆಂದು ಟಾರ್ಚರ್, ನೇಣಿಗೆ ಶರಣಾದ ವಿದ್ಯಾರ್ಥಿ

ಆನ್ಲೈನ್ ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್ ಹುಷಾರ್​. ಲೋನ್ ಕಟ್ಟಿಲ್ಲ ಎಂದು ಚೀನಾ ಮೂಲದ ಆ್ಯಪ್ ಕಂಪನಿ​ ಟಾರ್ಚರ್​ ನೀಡಿದ್ದು, ಇಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ನಗರದ ಹೆಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ನಡೆದಿದೆ.

ಆನ್ಲೈನ್​ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್! ಲೋನ್ ಕಟ್ಟಿಲ್ಲವೆಂದು ಟಾರ್ಚರ್, ನೇಣಿಗೆ ಶರಣಾದ ವಿದ್ಯಾರ್ಥಿ
ಮೃತ ವಿದ್ಯಾರ್ಥಿ ತೇಜಸ್
Kiran HV
| Edited By: |

Updated on:Jul 12, 2023 | 4:07 PM

Share

ಬೆಂಗಳೂರು: ಚೀನಾ ಆ್ಯಪ್ (China app)​ ಮೂಲಕ ಲೋನ್ ಪಡೆದಿದ್ದ ವಿದ್ಯಾರ್ಥಿ ನೇಣಿಗೆ ಶರಣಾಗಿರುವಂತಹ ಘಟನೆ ನಗರದ ಹೆಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ನಡೆದಿದೆ. ತೇಜಸ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸ್ನೇಹಿತ ಮಹೇಶ್​ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ‌ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕೊಟ್ಟವರು ಟಾರ್ಚರ್​ ನೀಡುತ್ತಿದ್ದರಂತೆ. ಹಾಗಾಗಿ ಡೆತ್ ನೋಟ್ ಬರೆದಿಟ್ಟು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್​ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

‘ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ’ ‘ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್​ ಬೈ’ ಎಂದು ಡೆತ್ ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಎಂಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.

ಇದನ್ನೂ ಓದಿ: Chikkaballapur News: ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿ, ಕನಸು ನನಸಾಗದೇ ಆತ್ಮಹತ್ಯೆಗೆ ಶರಣು

ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಬೆಳಗಾವಿ: ಲಾರಿಹರಿದು ಪಾದಚಾರಿ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಯರಗಟ್ಟಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದಿದೆ. ಸಂತೋಷ್ ಹಿರೇಮಠ(24) ಮೃತ ಪಾದಚಾರಿ. ಲಾರಿ ಬರ್ತಿದ್ದನ್ನು ನೋಡಿ ಡ್ರೈವರ್‌ಗೆ ನಿಲ್ಲುವಂತೆ ಹೇಳಿ ಮುಂದೆ ಹೋಗಿದ್ದಾರೆ. ಪಾದಚಾರಿ ರಸ್ತೆ ಕ್ರಾಸ್ ಮಾಡಿದ್ದಾನೆ ಅಂತಾ ಚಾಲಕ ಲಾರಿ ಚಲಾಯಿಸಿದ್ದಾನೆ. ಈ ವೇಳೆ ಲಾರಿ ಚಕ್ರಕ್ಕೆ ಪಾದಚಾರಿ ಸಿಲುಕಿ ಸಾವನ್ನಪ್ಪಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: Ramanagara News: ಕೆಎಸ್ಆರ್​ಟಿಸಿ ಬಸ್​ಗೆ ಬೈಕ್ ಡಿಕ್ಕಿ; ವಿದ್ಯಾರ್ಥಿ ಸಾವು

ನೇಣು ಹಾಕಿಕೊಂಡು ಚಿತ್ರಕಲಾ ಶಿಕ್ಷಕ ಆತ್ಮಹತ್ಯೆ

ಬಾಗಲಕೋಟೆ: ನೇಣು ಹಾಕಿಕೊಂಡು ಚಿತ್ರಕಲಾ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ರಂಗನಾಥ​​ ಕಂಬಾರ(38) ನೇಣಿಗೆ ಶರಣಾದ ಶಿಕ್ಷಕ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಗುಳೇದಗುಡ್ಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:54 pm, Wed, 12 July 23

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ