AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆ, ನಿಂದನೆ ಆರೋಪಿಸಿ ವಿದ್ಯಾರ್ಥಿಗಳಿಂದ ಟ್ವೀಟ್‌, ಆರೋಪ ತಳ್ಳಿ ಹಾಕಿದ ಪೊಲೀಸ್

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜನವರಿ13ರ ಮಧ್ಯರಾತ್ರಿ 2.30 ಸಮಯದಲ್ಲಿ ಸದ್ದುಗುಂಟೆಪಾಳ್ಯದ ಆಂಜನೇಯ ದೇಗುಲ ಬಳಿ ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಬೀಟ್ ಪೊಲೀಸರು ನಿಂದಿಸಿ ಹಲ್ಲೆ ಮಾಡಿದ್ದಾರೆಂದು ವಿದ್ಯಾರ್ಥಿ ಆರೋಪಿಸಿದ್ದಾರೆ. ಮುಸ್ಲಿಂರಾಗಿದಕ್ಕೆ ನಮ್ಮನ್ನು ಪೊಲೀಸರು ನೀವು ಪಾಕಿಸ್ತಾನದವರೆಂದು ನಿಂದಿಸಿದ್ದಾರೆ. ಅಲ್ಲದೆ ವಾರಂಟ್ ಇಲ್ಲದೆ ಬಲವಂತವಾಗಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸಿಎಎ, NRC ಪ್ರೊಟೆಸ್ಟ್ ಇನ್ಫೋ ಪೇಜ್​ನಲ್ಲಿ […]

ಹಲ್ಲೆ, ನಿಂದನೆ ಆರೋಪಿಸಿ ವಿದ್ಯಾರ್ಥಿಗಳಿಂದ ಟ್ವೀಟ್‌, ಆರೋಪ ತಳ್ಳಿ ಹಾಕಿದ ಪೊಲೀಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 15, 2020 | 1:49 PM

Share

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜನವರಿ13ರ ಮಧ್ಯರಾತ್ರಿ 2.30 ಸಮಯದಲ್ಲಿ ಸದ್ದುಗುಂಟೆಪಾಳ್ಯದ ಆಂಜನೇಯ ದೇಗುಲ ಬಳಿ ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಬೀಟ್ ಪೊಲೀಸರು ನಿಂದಿಸಿ ಹಲ್ಲೆ ಮಾಡಿದ್ದಾರೆಂದು ವಿದ್ಯಾರ್ಥಿ ಆರೋಪಿಸಿದ್ದಾರೆ.

ಮುಸ್ಲಿಂರಾಗಿದಕ್ಕೆ ನಮ್ಮನ್ನು ಪೊಲೀಸರು ನೀವು ಪಾಕಿಸ್ತಾನದವರೆಂದು ನಿಂದಿಸಿದ್ದಾರೆ. ಅಲ್ಲದೆ ವಾರಂಟ್ ಇಲ್ಲದೆ ಬಲವಂತವಾಗಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸಿಎಎ, NRC ಪ್ರೊಟೆಸ್ಟ್ ಇನ್ಫೋ ಪೇಜ್​ನಲ್ಲಿ ವಿಡಿಯೋ ಅಪ್​ಲೋಡ್ ಮಾಡಿದ್ದಾರೆ.

ಇದಾದ ನಂತರ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಟ್ವೀಟ್‌ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ತಡರಾತ್ರಿ ಐವರು ಯುವಕರು ರಸ್ತೆ ಬದಿ ನಿಂತಿದ್ದರು. ಈ ವೇಳೆ ವಿಚಾರಿಸಲು ಯುವಕರ ಬಳಿ ಪೊಲೀಸರು ತೆರಳಿದ್ದರು. ಆದ್ರೆ ಪೊಲೀಸರನ್ನು ಕಂಡು ಇಬ್ಬರು ಯುವಕರು ಓಡಿ ಹೋಗಿದ್ದರು. ಪೊಲೀಸರು ಎಂದಾಗ ಐಡಿ ಕಾರ್ಡ್ ತೋರಿಸಿ ಎಂದು ಕೇಳಿದ್ದಾರೆ. ಐಡಿ ತೋರಿಸಿ ಯುವಕರನ್ನು ಠಾಣೆಗೆ ಕರ್ಕೊಂಡು ಬಂದಿದ್ದೇವೆ. ಈ ವೇಳೆ ಮೂವರನ್ನು ವಿಚಾರಣೆ ನಡೆಸಿ, ಸಣ್ಣ ಕೇಸ್ ಹಾಕಿ ಯುವಕರನ್ನು ಬಿಟ್ಟು ಕಳಿಸಿದ್ದೇವೆಂದು ಸ್ಪಷ್ಟನೆ ನೀಡಿದ್ದಾರೆ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ