AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಸ್ಥಳದಲ್ಲೇ ವಿದ್ಯಾರ್ಥಿಗಳಿಂದ ಸಿಗರೇಟ್ ಸೇವನೆ: ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಮನವಿ ಮಾಡಿದ ಸ್ಥಳೀಯರು

ಶಾಲಾ-ಕಾಲೇಜುಗಳಲ್ಲಿ ಪೊಲೀಸರು ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಇದಕ್ಕೆ ಕ್ಯಾರೇ ಅನ್ನದ ವಿದ್ಯಾರ್ಥಿಗಳು ಮಾತ್ರ ಸಾರ್ವಜನಿಕ ಸ್ಥಳಗಳಲ್ಲೇ ಸಿಗರೇಟ್ ಸೇವನೆ ಮಾಡಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿಗರೇಟ್ ಚಟಕ್ಕೆ ಬಿದ್ದಿದ್ದಾರೆ. ಸ್ಥಳೀಯರು ವಿದ್ಯಾರ್ಥಿಗಳ ಫೋಟೋ ತೆಗೆದು ವಿವಿ ಪುರಂ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ. 

ಸಾರ್ವಜನಿಕ ಸ್ಥಳದಲ್ಲೇ ವಿದ್ಯಾರ್ಥಿಗಳಿಂದ ಸಿಗರೇಟ್ ಸೇವನೆ: ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಮನವಿ ಮಾಡಿದ ಸ್ಥಳೀಯರು
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 05, 2023 | 4:08 PM

Share

ಬೆಂಗಳೂರು, ಅಕ್ಟೋಬರ್​ 05: ಶಾಲಾ-ಕಾಲೇಜುಗಳಲ್ಲಿ ಪೊಲೀಸರು ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಇದಕ್ಕೆ ಕ್ಯಾರೇ ಅನ್ನದ ವಿದ್ಯಾರ್ಥಿಗಳು (Students) ಮಾತ್ರ ಸಾರ್ವಜನಿಕ ಸ್ಥಳಗಳಲ್ಲೇ ಸಿಗರೇಟ್ ಸೇವನೆ ಮಾಡಿದ್ದಾರೆ. ವಿವಿ ಪುರಂ ಟೆಂಪಲ್ ಸ್ಟ್ರೀಟ್ ಬಳಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಸಿಗರೇಟ್ ಸೇದುತ್ತ ನಿಂತಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿಗರೇಟ್ ಚಟಕ್ಕೆ ಬಿದ್ದಿದ್ದಾರೆ. ಸ್ಥಳೀಯರು ವಿದ್ಯಾರ್ಥಿಗಳ ಫೋಟೋ ತೆಗೆದು ವಿವಿ ಪುರಂ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಲಬುರಗಿ: ಸಮರ್ಪಕ ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿತ್ತು. ವಾಡಿಯಿಂದ ಯಾದಗಿರಿಗೆ ಹೋಗಲು ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: Ambaari Dasara Bus: ಮೈಸೂರು ದಸರಾಗೆ ಮತ್ತಷ್ಟು ಮೆರಗು ನೀಡಲು ರಸ್ತೆಗೆ ಇಳಿಯುತ್ತಿದೆ ಅಂಬಾರಿ

ಅನೇಕ ಬಸ್ ಗಳು ಕಲಬುರಗಿಯಿಂದ ಬೈಪಾಸ್ ಮಾರ್ಗವಾಗಿ ಯಾದಗಿರಿಗೆ ಹೋಗುತ್ತಿವೆ. ಹೀಗಾಗಿ ವಾಡಿಯಿಂದ ಯಾದಗಿರಿಗೆ ಹೋಗಲು ಬಸ್ ಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹೀಗಾಗಿ ಸಮರ್ಪಕವಾಗಿ ಮತ್ತು ನಿಗದಿತ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದರು.

ನೆಚ್ಚಿನ ಶಿಕ್ಷನಿಗೆ ವಿದ್ಯಾರ್ಥಿನಿಯ ಕಣ್ಣೀರ ವಿದಾಯ

ಗದಗ: ಶಿಕ್ಷಕ ವರ್ಗಾವಣೆ ವಿಷಯ ತಿಳದು ವಿದ್ಯಾರ್ಥಿನಿಯರು ಬಿಕ್ಕಿ ಬಿಕ್ಕಿ ಅಳುವ ಮೂಲಕ ನೆಚ್ಚಿನ ಶಿಕ್ಷನಿಗೆ ಬಿಳ್ಕೊಡುಗೆ ನೀಡಿರುವಂತಹ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮದ ಶ್ರೀ ಗುರು ದಿಂಗಾಲೇಶ್ವರ ಸರಕಾರಿ ಫ್ರೌಡ ಶಾಲೆಯಲ್ಲಿ ನಡೆದಿದೆ. ದೈಹಿಕ ಶಿಕ್ಷಕ ಮಹಾವೀರ ಸವದಿ ಎನ್ನುವ ಶಿಕ್ಷಕರಿಗೆ ವರ್ಗಾವಣೆ ಆದೇಶ ಬಂದಿದೆ.

ಇದನ್ನೂ ಓದಿ: ನಾಯಿಗಳ ಸಂತಾನ ನಿಯಂತ್ರಣ ಕಾನೂನು ಜಾರಿಗೆ ಮೀನಮೇಷ; ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ

ಸುಮಾರು 13 ವರ್ಷಗಳಿಂದ ಬಾಲೆಹೊಸೂರು ಶಾಲೆಯಲ್ಲಿ ಶಿಕ್ಷಕ ಮಹಾವೀರ ಕರ್ತವ್ಯ ನಿರ್ವಹಿಸಿದ್ದರು. ಹೀಗಾಗಿ ನೆಚ್ಚಿನ ಶಿಕ್ಷಕರು ವರ್ಗಾವಣೆ ಆಗಿದ್ದಾರೆ ಅನ್ನೋ ವಿಷಯ ತಿಳಿದು ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದರು. ವಿದ್ಯಾರ್ಥಿನಿಯರ ಪ್ರೀತಿಗೆ ಶಿಕ್ಷಕ ಕೂಡಾ ಕಣ್ಣೀರು ಹಾಕಿದ್ದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ನೇತೃತ್ವದಲ್ಲಿ ಶಿಕ್ಷಕ ಮಹಾವೀರಗೆ ಬೀಳ್ಕೋಡುಗೆ ನೀಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ