AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ಆರಂಭ, ವಿದ್ಯಾರ್ಥಿಗಳ ಮೇಲಿನ FIR ಹಿಂಪಡೆಯುವಂತೆ ಆಗ್ರಹ

ಹಣ ವರ್ಗಾವಣೆ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಮೇಲೆ ದಾಖಲಿಸಿದ ಎಫ್​ಐಆರ್ ಹಿಂಪಡೆಯುವಂತೆ ಆಗ್ರಹಿಸಲಾಗುತ್ತಿದೆ.

ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ಆರಂಭ, ವಿದ್ಯಾರ್ಥಿಗಳ ಮೇಲಿನ FIR ಹಿಂಪಡೆಯುವಂತೆ ಆಗ್ರಹ
ಬೆಂಗಳೂರು ವಿಶ್ವವಿದ್ಯಾಲಯ
TV9 Web
| Edited By: |

Updated on:May 30, 2022 | 2:40 PM

Share

ಬೆಂಗಳೂರು: ಹಣ ವರ್ಗಾವಣೆ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯ (Bengaluru University)ದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ (Protest) ಆರಂಭಗೊಂಡಿದ್ದು, ವಿವಿಯ ಕೇಂದ್ರ ಕಚೇರಿ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು (Students) ಜಮಾಯಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ಅಕ್ರಮ (Illegal)ವಾಗಿ 28 ಕೋಟಿ ಮೊತ್ತದ ಬಿಲ್‌ಗೆ ಅನುಮೋದನೆ ನೀಡಿದ್ದಾರೆ ಎಂದು ವಿಶ್ವವಿದ್ಯಾಲಯದ  ಸಿಬ್ಬಂದಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿ FIR ಹಾಕಲಾಗಿದ್ದು, ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಬಸವಕಲ್ಯಾಣದ ಮೂಲ ಅನುಭವ ಮಂಟಪಕ್ಕಾಗಿ ಜೂನ್ 12ರಂದು ಪ್ರತಿಭಟನೆ; ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗಶ್ರೀ

ಎಫ್​ಐಆರ್ ಬಗ್ಗೆ ಮಾತನಾಡಿದ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿ ಗೋಪಾಲ್, ನ್ಯಾಯ ಕೇಳಲು ಹೋದ ವಿದ್ಯಾರ್ಥಿಗಳ ಮೇಲೆ ಕಂಪ್ಲೇಟ್ ಕೊಟ್ಟಿದ್ದಾರೆ. ವಿದ್ಯಾರ್ಥಿಗಳು ನ್ಯಾಯ ಕೇಳುವುದು ತಪ್ಪಾ?  ಉಪ ಕುಲಪತಿ ಪ್ರೊ.ವೇಣುಗೋಪಾಲ್ ಇರೋದೆ ಇನ್ನು ಹತ್ತು ದಿನ ಮಾತ್ರ. ಹಣವನ್ನ ವರ್ಗಾವಣೆಗೆ ಮುಂದಾದ ಉಪ ಕುಲಪತಿಯವರನ್ನು ನಾವು ಪ್ರಶ್ನೆ ಮಾಡಿದ್ದೇವೆ. ಆದರೆ, ವಿದ್ಯಾರ್ಥಿಗಳ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿ ಎಫ್ಐಆರ್ ಹಾಕಿದ್ದಾರೆ. ದೌರ್ಜನ್ಯ ಆರೋಪದ ಅಡಿ ಹಂಗಾಮಿ ವಿತ್ತಾಧಿಕಾರಿ ವಿತ್ತ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳ ಮೇಲಿನ ದೂರು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ವಿವಿ ಸಂಶೋಧನಾ ವಿದ್ಯಾರ್ಥಿ ಚಂದ್ರು ಪೆರಿಯಾರ್ ಮಾತನಾಡಿ, ವೇಣುಗೋಪಾಲ್ ಬಂದ ಮೇಲೆ ಬೆಂಗಳೂರು ವಿವಿ ಅನೇಕ ಭ್ರಷ್ಟಚಾರವಾಗಿದೆ. ವಿಸಿ ವೇಣುಗೋಪಾಲ್ ತಮ್ಮ ಸಂಬಂಧಿಕರಿಗೆ ತರಾತುರಿಯ ಟೆಂಡರ್ ನೀಡಲು ಮುಂದಾಗಿದ್ದಾರೆ. ಹಂಗಾಮಿ ವಿತ್ತಾಧಿಕಾರಿ ರಾತ್ರೊ ರಾತ್ರಿ ಹಣ ಬಿಡುಗಡೆ ಮಾಡಿಸಿಕೊಳ್ಳುತ್ತಾರೆ. ಇದನ್ನ ಪ್ರಶ್ನೆ ಮಾಡಲು ಬಂದ ವಿದ್ಯಾರ್ಥಿಗಳ ಮೇಲೆ ಕಂಪ್ಲೇಟ್ ನೀಡುತ್ತಾರೆ. ನಾವು ಉಪ ಕುಲಪತಿ ಮೇಲೆ 2 ಸಾವಿರ ಕೇಸ್ ಹಾಕುತ್ತೆವೆ. ನಿನ್ನೆ ಗಲಾಟೆಯಾಗಿದೆ ಸಂಜೆ ಎಪ್ಐಆರ್ ಮಾಡಿದ್ದಾರೆ. ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ದೂರು ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಮೇಲಿನ ಎಫ್ಐಆರ್ ವಾಪಸ್ ಪಡೆಯವರೆಗೂ ಹೋರಾಟ ಮಾಡುತ್ತೇವೆ. ವಿತ್ತ ಅಧಿಕಾರಿ ಜಯಲಕ್ಷ್ಮಿ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಬರೋಬ್ಬರಿ 28 ಕೋಟಿ ಮೊತ್ತದ ಬಿಲ್​ಗೆ ಉಪ ಕುಲಪತಿ ವೇಣುಗೋಪಾಲ್ ಅವರು ಮೇ 26ರಂದು ಅನುಮೋದನೆ ಮಾಡಿಕೊಂಡಿದ್ದಾರೆ.  ಕಚೇರಿ ಅವಧಿ ಮುಗಿದ ಬಳಿಕವೂ ಅನುಮೋದನೆ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಸಿಂಡಿಕೇಟ್ ಸಭೆ ಮಾಡದೆ ಅನುಮೋದನೆ ಪಡೆದಿದ್ದಾರೆಂದು ಆರೋಪಿಸಲಾಗಿದೆ. ಜೂನ್ 11ಕ್ಕೆ ಪ್ರೊ.ವೇಣುಗೋಪಾಲ್ ಅವಧಿ ಅಂತ್ಯವಾಗಲಿದ್ದು, ಈ ಸಂದರ್ಭದಲ್ಲಿ ಇಷ್ಟು ದೊಡ್ಡ ಮೊತ್ತ ಅನುಮೋದನೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Mon, 30 May 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ