AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರು ವಿಶ್ವವಿದ್ಯಾಲಯ ಸಂಪೂರ್ಣ ಸ್ತಬ್ಧ! ತರಗತಿ ಬಹಿಷ್ಕರಿಸಿ ಅಹೋರಾತ್ರಿ ಹೋರಾಟಕ್ಕೆ ವಿದ್ಯಾರ್ಥಿಗಳ ಒಕ್ಕೂಟ ನಿರ್ಧಾರ

ವಿವಿ ಪ್ರಭಾರ ವಿತ್ತಾಧಿಕಾರಿ ಆರ್.ಜಯಲಕ್ಷ್ಮಿ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ದೂರು ನೀಡಿದ್ದಾರೆ. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿರುದ್ಧ ದೂರು ದಾಖಲಾಗಿದೆ. ದೂರು ಹಿಂಪಡೆಯುವವರೆಗೂ ಧರಣಿ ನಿಲ್ಲಿಸದಿರಲು ವಿದ್ಯಾರ್ಥಿಗಳು ನಿರ್ಧಾರ ಮಾಡಿದ್ದಾರೆ.

ನಾಳೆ ಬೆಂಗಳೂರು ವಿಶ್ವವಿದ್ಯಾಲಯ ಸಂಪೂರ್ಣ ಸ್ತಬ್ಧ! ತರಗತಿ ಬಹಿಷ್ಕರಿಸಿ ಅಹೋರಾತ್ರಿ ಹೋರಾಟಕ್ಕೆ ವಿದ್ಯಾರ್ಥಿಗಳ ಒಕ್ಕೂಟ ನಿರ್ಧಾರ
ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು
TV9 Web
| Edited By: sandhya thejappa|

Updated on:May 29, 2022 | 9:10 AM

Share

ಬೆಂಗಳೂರು: ಉಪಕುಲಪತಿ ಪ್ರೊ.ವೇಣುಗೋಪಾಲ್ ಅಕ್ರಮವಾಗಿ 28 ಕೋಟಿ ರೂ. ಮೊತ್ತದ ಬಿಲ್​ಗೆ ಅನುಮೋದನೆ ನೀಡಿದ್ದಾರೆ ಎಂದು ಮೇ 27ಕ್ಕೆ ಪ್ರತಿಭಟನೆ (Protest) ನಡೆಸಿ, ಆಕ್ರೋಶ ಹೊರಹಾಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ (Bengaluru University) ಸಿಬ್ಬಂದಿ, ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ದಾಖಲಾಗಿರುವ ದೂರನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ವಿದ್ಯಾರ್ಥಿ ಒಕ್ಕೂಟ ನಾಳೆ (ಮೇ 30) ವಿಶ್ವವಿದ್ಯಾಲಯ ಬಂದ್ಗೆ ಕರೆ ಕೊಟ್ಟಿದೆ. ತರಗತಿ ಬಹಿಷ್ಕರಿಸಿ ನಾಳೆ 10 ಗಂಟೆಯಿಂದ ಧರಣಿ ನಡೆಸಲು ಸಂಶೋಧನೆ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟ ನಿರ್ಧರಿಸಿದೆ.

ವಿವಿ ಪ್ರಭಾರ ವಿತ್ತಾಧಿಕಾರಿ ಆರ್.ಜಯಲಕ್ಷ್ಮಿ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ದೂರು ನೀಡಿದ್ದಾರೆ. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿರುದ್ಧ ದೂರು ದಾಖಲಾಗಿದೆ. ದೂರು ಹಿಂಪಡೆಯುವವರೆಗೂ ಧರಣಿ ನಿಲ್ಲಿಸದಿರಲು ವಿದ್ಯಾರ್ಥಿಗಳು ನಿರ್ಧಾರ ಮಾಡಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ವಿತ್ತಾಧಿಕಾರಿ ಮತ್ತು ಕುಲಪತಿ ಪ್ರೊ. ವೇಣುಗೋಪಾಲ್ ವಿರುದ್ಧ ವಿವಿ ವಿದ್ಯಾರ್ಥಿ ಒಕ್ಕೂಟ ನಿನ್ನೆ ದೂರು ದಾಖಲಿಸಿದೆ.

ನಾಳೆ ನಡೆಯುವ ಪ್ರತಿಭಟನೆಯಲ್ಲಿ ಸುಮಾರು 7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಬೆಂಗಳೂರು ವಿವಿ ಆಡಳಿತ ಕಚೇರಿ ಮುಂಭಾಗ ಧರಣಿ ನಡೆಯಲಿದೆ.

ಇದನ್ನೂ ಓದಿ
Image
Transient Global Amnesia : ಸಂಭೋಗದ ಬಳಿಕ 10 ನಿಮಿಷ ಸ್ಮರಣ ಶಕ್ತಿ ಕಳೆದುಕೊಂಡ ಐರಿಶ್ ವ್ಯಕ್ತಿ
Image
GT vs RR, IPL 2022 Final: ಐಪಿಎಲ್ 2022ಕ್ಕೆ ಇಂದು ತೆರೆ: ಯಾರಾಗಲಿದ್ದಾರೆ ಚಾಂಪಿಯನ್?
Image
ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನ: ಮೇ 30ರಂದು ಪ್ರಧಾನಿ ಮೋದಿ ಘೋಷಣೆ
Image
Mango Recipe: ಕೇವಲ ಹತ್ತೇ ನಿಮಿಷದಲ್ಲಿ ಮಾವಿನ ಹಣ್ಣಿನಿಂದ ಈ ರೆಸಿಪಿ ಮಾಡಿ

ಇದನ್ನೂ ಓದಿ: ಬೆಳಗಾವಿಗೂ ಕಾಲಿಟ್ಟ ಮಸೀದಿ – ಮಂದಿರ ವಿವಾದ; ನ್ಯಾಯ ಸಿಗುವವರೆಗೂ ಸುಮ್ಮನೆ ಕೂರಲ್ಲ ಎಂದ ಬಿಜೆಪಿ ಶಾಸಕ ಅಭಯ್ ಪಾಟೀಲ್

ಘಟನೆ ಏನು? ಉಪಕುಲಪತಿ ಪ್ರೊ.ವೇಣುಗೋಪಾಲ್ ಅಕ್ರಮವಾಗಿ 28 ಕೋಟಿ ರೂ. ಮೊತ್ತದ ಬಿಲ್‌ಗೆ ಅನುಮೋದನೆ ನೀಡಿದ್ದಾರೆ ಎಂದು ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು, ವಿವಿಯ ಫೈನಾನ್ಸ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದರು. ಹಣಕಾಸು ಕಚೇರಿಯತಲ್ಲಿದ್ದ ಅಧಿಕಾರಿ ಜಯಲಕ್ಷ್ಮೀರನ್ನು ಕಚೇರಿಯಿಂದ ಹೊರಗೆ ಕಳಿಸಿ ಪ್ರತಿಭಟನೆ ಮಾಡಿದ್ದರು. ಹಣಕಾಸು ಅಧಿಕಾರಿ ವಿವಿ ಬಿಟ್ಟು ತೊಲಗಲಿ ಎಂದು ಘೋಷಣೆ ಕೂಗಿದ್ದರು. ಹಣಕಾಸು ಅಧಿಕಾರಿ ಕಚೇರಿಗೆ ವಿದ್ಯಾರ್ಥಿಗಳು ಬೀಗ ಹಾಕಿಸಿದ್ದರು. ಬಳಿಕ ನಮ್ಮ ಪರವಾಗಿ ಧ್ವನಿ ಎತ್ತಿ ಅಂತ ಸಿಂಡಿಕೇಟ್ ಸದಸ್ಯರಿಗೆ ತರಾಟೆ ತೆಗೆದುಕೊಂಡಿದ್ದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:07 am, Sun, 29 May 22

Follow Us
Web contact
Web contact

TV9 Kannada

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್