ಸುರಕ್ಷತಾ ಕಳವಳಕ್ಕೆ ಕಾರಣವಾಗುತ್ತಿವೆ ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳು; ಹೆಚ್ಚಿನವುಗಳಲ್ಲಿಲ್ಲ ಮೂಲಸೌಕರ್ಯ

ಸಮೀಕ್ಷೆಗೆ ಒಳಪಟ್ಟ ಶೇ 91ರಷ್ಟು ಮಹಿಳಾ ಶೌಚಾಲಯಗಳಲ್ಲಿ ಕಸದ ಬುಟ್ಟಿಗಳಿಲ್ಲ. ಇದರಿಂದಾಗಿ ಸ್ಯಾನಿಟರಿ ನ್ಯಾಪ್ಕಿನ್​ಗಳನ್ನು ವಿಲೇವಾರಿ ಮಾಡಲು ಅವರಿಗೆ ಕಷ್ಟವಾಗುತ್ತಿದೆ. ಟಿಶ್ಯೂ ಪೇಪರ್​ಗಳು, ಸ್ಯಾನಿಟರಿ ನ್ಯಾಪ್ಕಿನ್​ಗಳು, ಪ್ಲಾಸ್ಟಿಕ್​ಗಳು ಎಲ್ಲೆಂದರಲ್ಲಿ ಎಸೆದಿರುತ್ತವೆ.

ಸುರಕ್ಷತಾ ಕಳವಳಕ್ಕೆ ಕಾರಣವಾಗುತ್ತಿವೆ ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳು; ಹೆಚ್ಚಿನವುಗಳಲ್ಲಿಲ್ಲ ಮೂಲಸೌಕರ್ಯ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Jan 22, 2024 | 9:51 AM

ಬೆಂಗಳೂರು, ಜನವರಿ 22: ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿನ ಸಾರ್ವಜನಿಕ ಶೌಚಾಲಯಗಳ (Bengaluru’s public toilets) ಪೈಕಿ ಹೆಚ್ಚಿನವು ಸರಕ್ಷತಾ ಕಳವಳಕ್ಕೆ ಕಾರಣವಾಗಿವೆ ಎಂಬುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ಸಾರ್ವಜನಿಕ ಶೌಚಾಲಯಗಳಲ್ಲಿ ಸರಿಯಾದ ಚಿಲಕದ ವ್ಯವಸ್ಥೆ ಇಲ್ಲದಿರುವುದು, ಲೈಟ್ ಹಾಗೂ ಇತರ ಮೂಲಸೌಕರ್ಯ ಕೊರತೆ ಇರುವುದು ಗೊತ್ತಾಗಿದೆ. ‘Nguvu Change’ನ ಅರ್ಚನಾ ಕೆಟಿಆರ್ ಅವರು ನಡೆಸಿದ ‘ದಿ ಬಿಗ್ ಬೆಂಗಳೂರು ಟಾಯ್ಲೆಟ್ ಸರ್ವೇ’ಯಲ್ಲಿ ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳ ದುಸ್ಥಿತಿ ಬಯಲಿಗೆ ಬಂದಿದೆ.

ಸಮೀಕ್ಷೆಗೆ ಒಳಪಟ್ಟ ಸಾರ್ವಜನಿಕ ಶೌಚಾಲಯಗಳ ಪೈಕಿ ಶೇ 75ರಷ್ಟರಲ್ಲಿ ಚಿಲಕ ಇಲ್ಲದಿರುವುದು, ಸರಿಯಾದ ಬಾಗಿಲುಗಳು ಇಲ್ಲದಿರುವುದು ಕಂಡುಬಂದಿದೆ. ಪುರುಷ ಮತ್ತು ಮಹಿಳಾ ಶುಚಿತ್ವ ಸಿಬ್ಬಂದಿ ಶೌಚಾಲಯಗಳಲ್ಲೇ ವಾಸಿಸುವಂಥ ಪ್ರಕರಣಗಳೂ ಕಂಡುಬಂದಿದ್ದು, ಇವುಗಳ ವಿಡಿಯೋ ದಾಖಲೆ ಕೂಡ ಇದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಶೇ 66ರಷ್ಟು ಶೌಚಾಲಯಗಳಲ್ಲಿ ಸಮರ್ಪಕವಾದ ಲೈಟ್ ವ್ಯವಸ್ಥೆ ಇಲ್ಲ. ವಿಶೇಷವಾಗಿ ಮಹಿಳೆಯರಿಗೆ ಸುರಕ್ಷಿತವಾಗಿಲ್ಲ. ಮಹಿಳೆಯರು ರಾತ್ರಿ ಬಳಸುವುದಕ್ಕಂತೂ ಯೋಗ್ಯವಾಗಿಲ್ಲ ಎಂದು ಸಮೀಕ್ಷೆ ತಿಳಿಸಿದೆ.

ದರದಲ್ಲಿಯೂ ಲಿಂಗ ತಾರತಮ್ಯ

ಸಾರ್ವಜನಿಕ ಶೌಚಾಲಯಗಳಲ್ಲಿ ದರ ವಿಧಿಸುವಾಗಲೂ ಲಿಂಗ ತಾರತಮ್ಯ ಮಾಡಲಾಗುತ್ತಿದೆ. ಪುರುಷರಿಗೆ 2 ರೂ. ಹಾಗೂ ಮಹಿಳೆಯರಿಗೆ 5 ರೂ. ವಿಧಿಸಲಾಗುತ್ತಿದೆ. ಇದು ಸಾರ್ವಜನಿಕ ಶೌಚಾಲಯಗಳಲ್ಲಿ ತಾರತಮ್ಯಕ್ಕೆ ಸ್ಪಷ್ಟ ನಿದರ್ಶನ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ನೈರುತ್ಯ ರೈಲ್ವೆ ವಲಯದ ಟ್ರೇನ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ: 46 ಕೋಟಿ ರೂ. ದಂಡ ಸಂಗ್ರಹ

ಸಮೀಕ್ಷೆಗೆ ಒಳಪಟ್ಟ ಶೇ 91ರಷ್ಟು ಮಹಿಳಾ ಶೌಚಾಲಯಗಳಲ್ಲಿ ಕಸದ ಬುಟ್ಟಿಗಳಿಲ್ಲ. ಇದರಿಂದಾಗಿ ಸ್ಯಾನಿಟರಿ ನ್ಯಾಪ್ಕಿನ್​ಗಳನ್ನು ವಿಲೇವಾರಿ ಮಾಡಲು ಅವರಿಗೆ ಕಷ್ಟವಾಗುತ್ತಿದೆ. ಟಿಶ್ಯೂ ಪೇಪರ್​ಗಳು, ಸ್ಯಾನಿಟರಿ ನ್ಯಾಪ್ಕಿನ್​ಗಳು, ಪ್ಲಾಸ್ಟಿಕ್​ಗಳು ಎಲ್ಲೆಂದರಲ್ಲಿ ಎಸೆದಿರುತ್ತವೆ. ಹೆಚ್ಚಿನ ಕಡೆಗಳಲ್ಲಿ ಶೌಚಾಲಯದ ಡ್ರೈನೇಜ್ ಪೈಪ್​ಗಳು ಬ್ಲಾಕ್ ಆಗಿವೆ ಎಂದು ಸಮೀಕ್ಷಾ ವರದಿ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ