AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ಯಾಲೇಸ್​ ರಸ್ತೆಗೆ ಇಳಿಯುವ ಮುನ್ನ ಎಚ್ಚರ: ದಿಢೀರ್ ಎಂದು ವರ್ಕ್ ಇನ್ ಪ್ರೋಸೆಸ್ ಬೋರ್ಡ್ ಪ್ರತ್ಯಕ್ಷ

ನಿನ್ನೆ ಮೊನ್ನೆ ಇಲ್ಲದ ಬೋರ್ಡ್ ಅನ್ನು ಮಾಹಿತಿಯೇ ಇಲ್ಲದಂತೆ ತಂದು ಹಾಕಲಾಗುತ್ತಿದೆ. ಇದು ಜನರನ್ನು ಸಂಕಷ್ಟೀಕ್ಕೀಡು ಮಾಡಿದೆ.

ಬೆಂಗಳೂರು: ಪ್ಯಾಲೇಸ್​ ರಸ್ತೆಗೆ ಇಳಿಯುವ ಮುನ್ನ ಎಚ್ಚರ: ದಿಢೀರ್ ಎಂದು ವರ್ಕ್ ಇನ್ ಪ್ರೋಸೆಸ್ ಬೋರ್ಡ್ ಪ್ರತ್ಯಕ್ಷ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 23, 2021 | 4:32 PM

Share

ಬೆಂಗಳೂರಿನಲ್ಲಿರುವ ರಸ್ತೆ ಮಧ್ಯೆಗುಂಡಿಗಳಿಂದಲೇ ಜನ ಸಂಚರಿಸಲು ಪರದಾಡುತ್ತಿದ್ದರೆ. ಈ ನಡುವೆ ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ BWSSB(Benagaluru Water Supply and Sewerage Board) ವರ್ಕ್ ಇನ್ ಪ್ರೋಸೆಸ್ ಎನ್ನುವ ಬೋರ್ಡ್ ಪ್ರತ್ಯಕ್ಷವಾಗುತ್ತಿದೆ. ನಿನ್ನೆ ಮೊನ್ನೆ ಇಲ್ಲದ ಬೋರ್ಡ್ ಅನ್ನು ಮಾಹಿತಿಯೇ ಇಲ್ಲದಂತೆ ತಂದು ಹಾಕಲಾಗುತ್ತಿದೆ. ಇದು ಜನರನ್ನು ಸಂಕಷ್ಟೀಕ್ಕೀಡು ಮಾಡಿದೆ. ಸದ್ಯ ಪ್ಯಾಲೇಸ್​ ರಸ್ತೆಯಲ್ಲಿ, ವಿಕ್ರಮ್ ಹಾಸ್ಪಿಟಲ್ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ BWSSB ವರ್ಕ್ ಇನ್ ಪ್ರೋಸೆಸ್ ಎನ್ನುವ ಬೋರ್ಡ್ ಅನ್ನು ಹಾಕಲಾಗಿದ

ಕಾಮಗಾರಿ ನಡೆಯುತ್ತಿರುವ ಕುರಿತು ಬೋರ್ಡ್ ಹಾಕಿ, ರಸ್ತೆ ಬಂದ್​ ಮಾಡಿರುವುದರಿಂದ  ಮೇಕ್ರಿ ಸರ್ಕಲ್ ನಿಂದ ಹಿಡಿದು ಚಾಳುಕ್ಯ ಸರ್ಕಲ್ ತನಕ ಹಾಗೂ ಮಿಲ್ಲರ್ಸ್ ರಸ್ತೆ, ಆಲಿ ಆಸ್ಕರ್ ರಸ್ತೆ, ಹೈ ಗ್ರೌಂಡ್ ಪೋಲಿಸ್ ಠಾಣೆಯ ಸುತ್ತ ಮುತ್ತ ಜನ ಟ್ರಾಫಿಕ್ ನಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಸಂಚರಿಸಲು ಸರಿಯಾದ ರಸ್ತೆಯಿಲ್ಲದೆ ವಾಹನ ಸವಾರರು ಸುತ್ತು ಬಳಸಿಕೊಂಡು ಹೋಗಬೇಕಾದ ಸ್ಥಿತಿ ಎದುರಾಗಿದೆ. ಯಾವುದೇ ಮಾಹಿತಿ ನೀಡದೆ ರಸ್ತೆ ಬ್ಲಾಕ್​ ಮಾಡಿರುವ BWSSB ಹಾಗೂ ಸರ್ಕಾರಕ್ಕೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ. BWSSBನಿಂದ ರಸ್ತೆ ಕಾಮಗಾರಿ ಇನ್ನೂ ಹದಿನೈದು ದಿನಗಳಿಂದ ಇಪ್ಪತ್ತು ದಿನಗಳ ಕಾಲ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಇನ್ನೂ ಒಂದಷ್ಟು ದಿನ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಹೀಗಾಗಿ ಜನ ಪರ್ಯಾಯ ದಾರಿ ನೋಡಿಕೊಳ್ಳುವುದು ಅನಿವಾರ್ಯವಾಗಿದೆ. ರಸ್ತೆ ಮಧ್ಯೆ ಗುಂಡಿಗಳಿಂದ ಬೇಸತ್ತಿರುವ ಬೆಂಗಳೂರಿನ ಜನ ರಸ್ತೆ ಕಾಮಗಾರಿ ಎಂದು ದಾರಿಯನ್ನು ಬಂದ್​ ಮಾಡುತ್ತಿರುವುದರಿಂದ ಇನ್ನಷ್ಟು ಕಿರಿಕಿರಗೆ ಒಳಗಾಗಿದ್ದಾರೆ. ಆದ್ದರಿಂದ ಜನರು ಪ್ಯಾಲೇಸ್ ರಸ್ತೆಗೆ ಇಳಿಯುವ ಮೊದಲು ಜನರು ಎಚ್ಚರವಹಿಸುವುದು ಅಗತ್ಯವಾಗಿದೆ.

ಇದನ್ನೂ ಓದಿ:

ಕರ್ನಾಟಕದಲ್ಲಿ ಇಂದು ಒಂದೇ ದಿನ 12 ಒಮಿಕ್ರಾನ್ ಕೇಸ್ ಪತ್ತೆ; ಬೆಂಗಳೂರಿನಲ್ಲೇ ಅತಿ ಹೆಚ್ಚು ಸೋಂಕಿತರು

Published On - 4:31 pm, Thu, 23 December 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ