AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷಸೇವಿಸಿ ಲೋಕಾಯುಕ್ತರ ಕಚೇರಿಗೆ ಬಂದಿದ್ದ ದೂರುದಾರನ ವಿರುದ್ಧ ಎಫ್​ಐಆರ್ ದಾಖಲು

ದೂರು ನೀಡಲು ಬಂದಿದ್ದ ವ್ಯಕ್ತಿ ಮೊದಲೇ ವಿಷಸೇವಿಸಿದ್ದ ಎಂಬ ಕಾರಣದಿಂದ ಅವರ ವಿರುದ್ಧವೇ ಆತ್ಮಹತ್ಯೆ ಯತ್ನದ ಆರೋಪದ ಮೇಲೆ ಸಿಬ್ಬಂದಿ ಎಫ್​ಐಆರ್ ದಾಖಲಿಸಿದ್ದಾರೆ

ವಿಷಸೇವಿಸಿ ಲೋಕಾಯುಕ್ತರ ಕಚೇರಿಗೆ ಬಂದಿದ್ದ ದೂರುದಾರನ ವಿರುದ್ಧ ಎಫ್​ಐಆರ್ ದಾಖಲು
ಲೋಕಾಯುಕ್ತ ಕಚೇರಿ
TV9 Web
| Edited By: |

Updated on: Dec 19, 2021 | 10:05 PM

Share

ಬೆಂಗಳೂರು: ನಿವೇಶನಕ್ಕೆ ಸಂಬಂಧಿಸಿದಂತೆ ತನಗೆ ಅನ್ಯಾಯವಾಗಿದೆ. ನ್ಯಾಯ ದೊರಕಿಸಿಕೊಡಿ ಎಂದು ದೂರು ನೀಡಲು ಲೋಕಾಯುಕ್ತ ಕಚೇರಿಗೆ ಬಂದಿದ್ದ ವ್ಯಕ್ತಿಯೊಬ್ಬರು ದೂರು ನೀಡುವ ಮೊದಲೇ ಕುಸಿದುಬಿದ್ದ ಘಟನೆ ನಗರದ ಲೋಕಾಯುಕ್ತ ಕಚೇರಿಯಲ್ಲಿ ಈಚೆಗೆ ನಡೆದಿದೆ. ಘಟನೆಯು ಎರಡು ದಿನಗಳ ಬಳಿಕ ಬೆಳಕಿಗೆ ಬಂದಿದ್ದು, ದೂರು ನೀಡಲು ಬಂದಿದ್ದ ವ್ಯಕ್ತಿ ಮೊದಲೇ ವಿಷಸೇವಿಸಿದ್ದ ಎಂಬ ಕಾರಣದಿಂದ ಅವರ ವಿರುದ್ಧವೇ ಆತ್ಮಹತ್ಯೆ ಯತ್ನದ ಆರೋಪದ ಮೇಲೆ ಸಿಬ್ಬಂದಿ ಎಫ್​ಐಆರ್ ದಾಖಲಿಸಿದ್ದಾರೆ. ಸೈಟ್ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ದೂರು ನೀಡಲು ಬಂದಿದ್ದ ವ್ಯಕ್ತಿ, ಸಿಬ್ಬಂದಿಗೆ ದೂರಿನ ಪ್ರತಿ ಹಸ್ತಾಂತರಿಸುವ ಮೊದಲೇ ಕುಸಿದುಬಿದ್ದಿದ್ದ. ತಕ್ಷಣ ಅವರನ್ನು ಲೋಕಾಯುಕ್ತ ಸಿಬ್ಬಂದಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದರು. ಬೌರಿಂಗ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ ನಂತರ ಅವರ ಆರೋಗ್ಯ ಸುಧಾರಿಸಿತು. ಪ್ರಸ್ತುತ ಸಾಮಾನ್ಯ ವಾರ್ಡ್​ನಲ್ಲಿ ಮಂಜುನಾಥ್ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಬೆಳಗಾವಿಗೆ ಹೊರಟ ಕರವೇ ಕಾರ್ಯಕರ್ತರು ಬೆಂಗಳೂರಿನಿಂದ ನೂರಾರು ಸಂಖ್ಯೆಯಲ್ಲಿ ಕನ್ನಡ ರಕ್ಷಣ ವೇದಿಕೆ ಕಾರ್ಯಕರ್ತರು ಬೆಳಗಾವಿಯ ಕಡೆಗೆ ಹೊರಡುತ್ತಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ (ಡಿ.20) ಮಧ್ಯಾಹ್ನ 12 ಗಂಟೆಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರವೇ ಮುಖಂಡರು ಘೋಷಿಸಿದ್ದಾರೆ.

ಬೆಳಗಾವಿಗೆ ಬಂದ ಸಿಎಂ ಬೊಮ್ಮಾಯಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರವೇ ಬೆಂಗಳೂರಿನಿಂದ ಬೆಳಗಾವಿಗೆ ತೆರಳಿದರು. ಸಚಿವರಾದ ಅಶೋಕ್, ಮುರುಗೇಶ್ ನಿರಾಣಿ, ವಿ.ಸೋಮಣ್ಣ, ಬಿ.ಸಿ.ಪಾಟೀಲ್, ಎಸ್‌.ಟಿ ಸೋಮಶೇಖರ್ ಜೊತೆ ವಿಮಾನದಲ್ಲಿ ಬೆಳಗಾವಿಗೆ ಬಂದ ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ ಜೊತೆಗೆ ಬೆಳಗಾವಿಗೆ ಖಾಸಗಿ ವಿಮಾನದಲ್ಲಿ ಬಂದರು.

ಜೈಪುರದಲ್ಲಿ ಡ್ರಗ್ಸ್​ ಜಪ್ತಿ ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ₹ 14.65 ಕೋಟಿ ಮೌಲ್ಯದ 2150 ಗ್ರಾಂ ಡ್ರಗ್ಸ್‌ ಜಪ್ತಿ ಮಾಡಲಾಗಿದೆ. ಕೀನ್ಯಾದಿಂದ ಬಂದಿದ್ದ ಮಹಿಳೆ ಅಕ್ರಮವಾಗಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದಳು. ಕೀನ್ಯಾ ಮಹಿಳೆ ವಿರುದ್ಧ ಎನ್‌ಡಿಪಿಎಸ್‌ ಌಕ್ಟ್‌ನಡಿ ಮೊಕದ್ದಮೆ ಹೂಡಲಾಗಿದೆ.

ಇದನ್ನೂ ಓದಿ: ಬೆಳಗಾವಿಯತ್ತ ಸಾವಿರಾರು ಕರವೇ ಕಾರ್ಯಕರ್ತರು: 12 ಗಂಟೆಗೆ ಸುವರ್ಣ ಸೌಧ ಮುತ್ತಿಗೆ ಇದನ್ನೂ ಓದಿ: ಎಂಇಎಸ್ ನಿಷೇಧಕ್ಕೆ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಆಗ್ರಹ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್