AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮಾನಸಿಕ ಅಸ್ವಸ್ಥೆ ಆಗಿದ್ದಳು, ನನ್ನ ಕೊಲೆಗೆ ಯತ್ನಿಸಿದ್ದಳು: ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕರ್ ಪ್ರತಿಕ್ರಿಯೆ

Crime News: ತಿಥಿ ಕಾರ್ಯ ಹಿನ್ನೆಲೆ ವಿಚಾರಣೆಗೆ 5ದಿನ ಸಮಯ ಕೇಳಿದ್ದೇನೆ. ಬದುಕುಳಿದ ಪ್ರೇಕ್ಷಾಳನ್ನು ಅಳಿಯನ ಮನೆಗೆ ಕಳುಹಿಸಿದ್ದೇನೆ ಎಂದು ಪೊಲೀಸರ ವಿಚಾರಣೆ ಬಳಿಕ ಹಲ್ಲೆಗೆರೆ ಶಂಕರ್ ಹೇಳಿಕೆ ನೀಡಿದ್ದಾರೆ.

ಪತ್ನಿ ಮಾನಸಿಕ ಅಸ್ವಸ್ಥೆ ಆಗಿದ್ದಳು, ನನ್ನ ಕೊಲೆಗೆ ಯತ್ನಿಸಿದ್ದಳು: ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕರ್ ಪ್ರತಿಕ್ರಿಯೆ
ಆತ್ಮಹತ್ಯಗೆ ಶರಣಾಗಿರುವ ಶಂಕರ್ ಕುಟುಂಬ
TV9 Web
| Updated By: ganapathi bhat|

Updated on: Sep 20, 2021 | 10:59 PM

Share

ಬೆಂಗಳೂರು: ನಗರದಲ್ಲಿ ಒಂದೇ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿ ಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ಪತ್ನಿ ಮಾನಸಿಕ ಅಸ್ವಸ್ಥೆ ಆಗಿದ್ದಳು, ನನ್ನ ಕೊಲೆಗೆ ಯತ್ನಿಸಿದ್ದಳು. ನನ್ನ ಪತ್ನಿ ವಿರುದ್ಧ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದೆ. ನನಗೆ ಯಾರ ಜೊತೆಯೂ ಅನೈತಿಕ ಸಂಬಂಧವಿಲ್ಲ ಎಂದು ಪೊಲೀಸರ ವಿಚಾರಣೆ ಬಳಿಕ ಹಲ್ಲೆಗೆರೆ ಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ ಬಗ್ಗೆ ಅಪಪ್ರಚಾರ ಬೇಡ, ನಾನು ಆ ರೀತಿಯ ವ್ಯಕ್ತಿ ಅಲ್ಲ. 2 ಬಾರ್ ಇರೋದು ನಿಜ, ಎಲ್ಲದಕ್ಕೂ ತೆರಿಗೆ ಕಟ್ಟುತ್ತಿದ್ದೇನೆ. ತಿಥಿ ಕಾರ್ಯ ಹಿನ್ನೆಲೆ ವಿಚಾರಣೆಗೆ 5ದಿನ ಸಮಯ ಕೇಳಿದ್ದೇನೆ. ಬದುಕುಳಿದ ಪ್ರೇಕ್ಷಾಳನ್ನು ಅಳಿಯನ ಮನೆಗೆ ಕಳುಹಿಸಿದ್ದೇನೆ ಎಂದು ಪೊಲೀಸರ ವಿಚಾರಣೆ ಬಳಿಕ ಹಲ್ಲೆಗೆರೆ ಶಂಕರ್ ಹೇಳಿಕೆ ನೀಡಿದ್ದಾರೆ.

ಶಂಕರ್ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ತನಿಖೆ ಚುರುಕುಗೊಂಡಿತ್ತು. ಈ ವೇಳೆ, ಪ್ರತ್ಯೇಕವಾಗಿ ಬರೆದಿದ್ದ 27 ಪುಟಗಳ ಡೆತ್​​ನೋಟ್ ಪತ್ತೆಯಾಗಿತ್ತು. ಈ ಮೊದಲು ಮನೆಯಲ್ಲಿ 3 ಪ್ರತ್ಯೇಕ ಡೆತ್​​ನೋಟ್ ಪತ್ತೆಯಾಗಿತ್ತು. ಸಿಂಚನಾ ಎಂಬವರ ಕೊಠಡಿಯಲ್ಲಿ 4 ಪುಟಗಳ ಡೆತ್​​ನೋಟ್ ಸಿಕ್ಕಿತ್ತು. ಸಿಂಧೂರಾಣಿ ಕೊಠಡಿಯಲ್ಲಿ 4 ಪುಟದ ಡೆತ್​​ನೋಟ್ ಸಿಕ್ಕಿತ್ತು. ಇಬ್ಬರೂ ತಮ್ಮ ಗಂಡನ ಮನೆ ಮತ್ತು ತಂದೆ ವಿರುದ್ಧ ಆರೋಪ ಮಾಡಿದ್ದರು.

ಮಂಗಳೂರು: ಅಪರಿಚಿತನಿಂದ ತಲ್ವಾರ್ ದಾಳಿ; ಆತ ತನ್ನ ಹೆಸರು, ಉದ್ದೇಶವನ್ನು ಬಾಯಿ ಬಿಟ್ಟಿಲ್ಲ ಮಹಿಳೆಯರ ಮೇಲೆ ಅಪರಿಚಿತನಿಂದ ತಲ್ವಾರ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್​ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗೆ ಬಂದ ಅಪರಿಚಿತ ಲೆಕ್ಚರರ್ ಹೆಸರು ಕೇಳಿದ್ದಾನೆ. ಆದ್ರೆ ಆ ಲೆಕ್ಚರರ್ ಯಾರೆಂದು ಅಲ್ಲಿದ್ದ ಸಿಬ್ಬಂದಿಗೆ ಗೊತ್ತಾಗಿಲ್ಲ. ಅವರಿಗೊಂದು ಗಿಫ್ಟ್ ಕೊಡುವುದಿದೆ ಎಂದು ಮಚ್ಚು ಬೀಸಿದ್ದಾನೆ. ಘಟನೆಯಲ್ಲಿ ಒಬ್ಬರು ಎಫ್​ಡಿಎ, ಸ್ಟೆನ್ನೋಗ್ರಾಫರ್ ಮತ್ತು ಡಿ ಗ್ರೂಪ್​ನ ಮಹಿಳಾ ಸಿಬ್ಬಂದಿಗೆ ಗಾಯವಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಪಕ್ಕದಲ್ಲಿದ್ದ ಜೈಲು ಸಿಬ್ಬಂದಿ, ಸ್ಥಳೀಯರು ಆತನನ್ನು ಹಿಡಿದು ಕೊಟ್ಟಿದ್ದಾರೆ. ಸದ್ಯ ಆತನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೇವೆ. ಇದುವರೆಗೆ ಆತ ತನ್ನ ಹೆಸರು, ಉದ್ದೇಶವನ್ನು ಬಾಯಿ ಬಿಟ್ಟಿಲ್ಲ. ಮೂವರೂ ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್​ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸರ್ಕಾರಿ ಕಚೇರಿಯಲ್ಲಿದ್ದ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ

ಇದನ್ನೂ ಓದಿ: ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿದ್ದು ಒಟ್ಟು 27 ಪುಟಗಳ ಡೆತ್ ನೋಟ್!

ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ