Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವೀಂದ್ರ ಶ್ರೀಕಂಠಯ್ಯಗೆ ಟ್ರೀಟ್​ಮೆಂಟ್​ ಅಗತ್ಯವಿದೆ; ಸಂಸದೆ ಸುಮಲತಾ ವಾಗ್ದಾಳಿ

ಅಂಬರೀಶ್ ದಾರಿಯಲ್ಲಿ ನಾನು ರಾಜಕೀಯ ಮಾಡುತ್ತಿದ್ದೇನೆ. ಇವರು ಭ್ರಷ್ಟಾಚಾರಕ್ಕೆ ರಾಯಭಾರಿಗಳಾಗಿದ್ದಾರೆ. ಯಾವುದೇ ಸಭೆಗೆ ಇವರು ಬಂದಿರಲಿಲ್ಲ, ನಿನ್ನೆ ಸಭೆಗೆ ಬಂದಿದ್ದಾರೆ.

ರವೀಂದ್ರ ಶ್ರೀಕಂಠಯ್ಯಗೆ ಟ್ರೀಟ್​ಮೆಂಟ್​ ಅಗತ್ಯವಿದೆ; ಸಂಸದೆ ಸುಮಲತಾ ವಾಗ್ದಾಳಿ
ಸಂಸದೆ ಸುಮಲತಾ
Follow us
TV9 Web
| Updated By: sandhya thejappa

Updated on:Aug 19, 2021 | 11:55 AM

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಸುತ್ತ ಗೂಂಡಾಗಳು, ಫ್ರಾಡ್ಗಳಿದ್ದಾರೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ (Ravindra Srikantaiah) ವಿರುದ್ಧ ಸುಮಲತಾ ವಾಗ್ದಾಳಿ ನಡೆಸಿದ್ದಾರೆ. ಅವರ ಮಾತು ಹೊಸದೇನಲ್ಲ. ಅಕ್ರಮ ಗಣಿಗಾರಿಕೆ ನಿಂತಾಗಿನಿಂದ ತೊಂದರೆಯಾಗುತ್ತಿದೆ. ಅಭಿವೃದ್ದಿ, ಕೊರೊನಾ ಬಗ್ಗೆ ಅವರಿಗೆ ಆಸಕ್ತಿ ಇಲ್ಲ. ಅವರಿಗೆ ಟ್ರೀಟ್​ಮೆಂಟ್ ಅವಶ್ಯಕತೆ ಇದೆ. ಟ್ರೀಟ್​ಮೆಂಟ್ ನಂತರ ಶಾಸಕರಾಗಿ ಮುಂದುವರೆಯಲಿ ಅಂತ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. ಅಂಬರೀಶ್ ದಾರಿಯಲ್ಲಿ ನಾನು ರಾಜಕೀಯ ಮಾಡುತ್ತಿದ್ದೇನೆ. ಇವರು ಭ್ರಷ್ಟಾಚಾರಕ್ಕೆ ರಾಯಭಾರಿಗಳಾಗಿದ್ದಾರೆ. ಯಾವುದೇ ಸಭೆಗೆ ಇವರು ಬಂದಿರಲಿಲ್ಲ, ನಿನ್ನೆ ಸಭೆಗೆ ಬಂದಿದ್ದಾರೆ ಎಂದು ತಿಳಿಸಿದ ಸುಮಲತಾ, ಆಪ್ತ ಕಾರ್ಯದರ್ಶಿ ನಯವಂಚಕ್ಕೆ ಎಂಬ ಹೇಳಿಕೆ ವಿಚಾರಕ್ಕೂ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ರವೀಂದ್ರ ಶ್ರೀಕಂಠಯ್ಯ ಹೇಳಿದ ಮಾತ್ರಕ್ಕೆ ನಿಜ ಆಗಲ್ಲ. ಮಹಾತ್ಮ ಗಾಂಧಿಯಂತವರು ಹೇಳಿದ್ದರೆ ನಂಬಬಹುದು. ಇಂತವರ ಮಾತನ್ನ ಹೇಗೆ ಸೀರಿಯಸ್ ಆಗಿ ತೆಗೆದುಕೊಳ್ಳುವುದಕ್ಕೆ ಆಗುತ್ತೆ ಎಂದು ಹೇಳಿಕೆ ನೀಡಿದ್ದಾರೆ.

ಶ್ರೀರಂಗಪಟ್ಟಣಕ್ಕೆ ಹೋದರೆ ಎಲ್ಲಾ ಮನೆಯವರು ಇವರ ಬಗ್ಗೆ ಹೇಳುತ್ತಾರೆ. ಮೆಡಿಕಲ್ ಸೀಟ್ ಕೊಡಿಸುವುದಾಗಿ ಆಪ್ತ ಕಾರ್ಯದರ್ಶಿ ವಂಚನೆ ಮಾಡಿರುವ ಬಗ್ಗೆ ಆಧಾರವಿದ್ದರೆ ತೋರಿಸಲಿ. ಇಂತವರು ಒಬ್ಬರಲ್ಲ, ನೂರು ಜನ ಬಂದರೂ ಎದುರಿಸುತ್ತೇನೆ. ದೇವರು ನಮಗೆ ಎಲ್ಲವನ್ನೂ ಕೊಟ್ಟಿದ್ದಾನೆ. ಇದನ್ನ ನಂಬಿಕೊಂಡು ಜೀವನ ಮಾಡುತ್ತಿಲ್ಲ. ನಾವು ರಾಜಕೀಯವನ್ನ ಸೇವೆ ಎಂದು ಮಾಡುತ್ತಿದ್ದೇವೆ ಅಂತ ಸಂಸದೆ ಸುಮಲತಾ ತಿಳಿಸಿದರು.

ರವೀಂದ್ರ ಶ್ರೀಕಂಠಯ್ಯನವರ ಆರೋಪವೇನು? ಸಂಸದೆ ಸುಮಲತಾ ಸುತ್ತ ಗೂಂಡಾಗಳು, ಫ್ರಾಡ್ಗಳಿದ್ದಾರೆ. ಸುಮಲತಾ ಅಟೆಂಡರ್ ಒಬ್ಬ ಫ್ರಾಡ್, ನಯ ವಂಚಕ. ಮೆಡಿಕಲ್ ಸೀಟ್ ಕೊಡಿಸುವುದಾಗಿ ಜನರಿಗೆ ಪಂಗನಾಮ ಹಾಕಿದ್ದಾನೆ. ಸುಮಲತಾ ಸುತ್ತ ಇರುವವರಿಂದ ಅಧಿಕಾರಿಗಳಿಗೆ ಧಮ್ಕಿ, ಹಣಕ್ಕಾಗಿ ಪೀಡಿಸಿದ್ದಾರೆ. ಸುಮಲತಾಗೆ ಆಪ್ತ ಕಾರ್ಯದರ್ಶಿ ಎಂಬ ಹುದ್ದೆಯೆ ಇಲ್ಲ. ಶ್ರೀನಿವಾಸ್ ಭಟ್ ಎಂಬುವವನನ್ನ ಅನಧಿಕೃತವಾಗಿ ಪಿಎಸ್ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಮಾನಸಿಕವಾಗಿ ಜರ್ಜರಿತವಾಗಿದ್ದಾರೆಂದು ತಿಳಿಸಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಅಂಬರೀಶ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

‘ಸುಮಲತಾ ಸುತ್ತ ಗೂಂಡಾಗಳು, ಫ್ರಾಡ್​ಗಳಿದ್ದಾರೆ’; ಸುಮಲತಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹ

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ; ಬಡವ, ಶ್ರೀಮಂತ ಕಾರಣ ಕೊಡುತ್ತಿರುವ ಆರೋಪಿಗಳು

(Sumalatha Ambareesh react to JDS  MLA Ravindra Srikantaiah accused)

Published On - 11:49 am, Thu, 19 August 21

ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ