Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌; ಮಳೆಗಾಲದಲ್ಲಿಯು 32 ಡಿಗ್ರಿ ಬಿಸಿಲು ದಾಖಲು

ಕರ್ನಾಟಕ ರಾಜ್ಯದಲ್ಲಿ ಮಳೆಗಾಲವಿದ್ದರೂ ಹವಾಮಾನ ಮಾತ್ರ ಬೇಸಿಗೆಯ ಫೀಲ್ ಕೊಡುತ್ತಿದ್ದು, ಬಿಸಿಲಿನ ತಾಪಮಾನ ಮಾತ್ರ ನೆತ್ತಿ ಸುಡುತ್ತಿದೆ.‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌ವಾಗಿದೆ. ಮಳೆಗಾಲದಲ್ಲಿಯೂ 32 ಡಿಗ್ರಿಯಷ್ಟು ಬಿಸಿಲು ದಾಖಲಾಗಿದೆ. ಮಳೆಗಾಲದಲ್ಲಿಯೂ ಬಿಸಿಲಿನ ಫೀಲ್ ಆಗುತ್ತಿದ್ದು, ಸ್ಕಿನ್ ಮೇಲೂ ಸಾಕಷ್ಟು ಪರಿಣಾಮ ಬೀರುತ್ತಿದೆ. ಜನರು ಆರೋಗ್ಯದ ಮೇಲೆ ನಿಗಾ ವಹಿಸಬೇಕಾಗಿದೆ.

ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌; ಮಳೆಗಾಲದಲ್ಲಿಯು 32 ಡಿಗ್ರಿ ಬಿಸಿಲು ದಾಖಲು
ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌
Follow us
Poornima Agali Nagaraj
| Updated By: ಆಯೇಷಾ ಬಾನು

Updated on: Sep 22, 2024 | 8:07 AM

ಬೆಂಗಳೂರು, ಸೆ.22: ಸಿಲಿಕಾನ್ ಸಿಟಿಯಲ್ಲಿ (Bengaluru) ಕಳೆದ ಒಂದು ವಾರದಿಂದ ಬಿಸಿಲಿನ ಪ್ರಮಾಣ ಜಾಸ್ತಿಯಾಗಿದ್ದು, ಮಳೆಗಾಲದಲ್ಲಿ ಬೇಸಿಗೆಯ ಫೀಲ್ ಕೊಡುತ್ತಿದೆ. ಸುಡುಬಿಸಿಲು ಜನರ ನೆತ್ತಿ ಸುಡುತ್ತಿದ್ದು, ಇನ್ನು ಮೂರ್ನಾಲ್ಕು ದಿನಗಳು ಇದೇ ರೀತಿ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳ್ತಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ‌ ಮಳೆಗಾಲದಲ್ಲೂ ಬೇಸಿಗೆ ಅನುಭವವಾಗುತ್ತಿದ್ದು, ನಗರದಲ್ಲಿ ಬಿಸಿಲಿನ ಗರಿಷ್ಠ ಉಷ್ಣಾಂಶ 32 ಡಿಗ್ರಿಯವರೆಗೂ ದಾಟಿದೆ. ಇನ್ನು ಬಿಸಿಲಿನ ಜೊತೆಗೆ ಬಿಸಿಗಾಳಿಯ ಅನುಭವವು ಆಗುತ್ತಿದ್ದು, ಈ ಬಿಸಿಲಿನಿಂದ ಆರೋಗ್ಯದ ಮೇಲೆ‌ ಭಾರಿ ಪರಿಣಾಮ ಬೀರಲಿದೆ. ಸಧ್ಯ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೆಳಗ್ಗಿನ ಜಾವದ ವೇಳೆ ಚಳಿಯ ಅನುಭವ, ಮಧ್ಯಾಹ್ನ ಬಿಸಿಲಿನ‌ ಅನುಭವ ಸಂಜೆಯಾಗುತ್ತಿದ್ದಂತೆ ಮಳೆಯ ವಾತಾವರಣ ಕಂಡುಬರುತ್ತಿದೆ.‌

ಇದೇ ವಾತಾವರಣ ಇನ್ನು ಒಂದು ವಾರ ಕಂಡುಬರಲಿದ್ದು, ಮಕ್ಕಳನ್ನ ಮಧ್ಯಾಹ್ನದ ವೇಳೆ ಬಿಸಿಲಿಗೆ ಬಿಡದಂತೆ ಎಚ್ಚರವಹಿಸಲು ಹವಾಮಾನ ಇಲಾಖೆ ತಜ್ಞರು ಹೇಳ್ತಿದ್ದಾರೆ. ಇನ್ನು, ಬಂಗಾಳಕೊಲ್ಲಿಯಲ್ಲಿ ಮೇಲ್ಮೆನಲ್ಲಿ ಯಾವುದೇ ಫಾರ್ಮ್‌ ಉಂಟಾಗದ ಕಾರಣ ಬಿಸಿಲಿನ ಪ್ರಮಾಣ ಜಾಸ್ತಿಯಾಗಿದ್ದು, ಮುಂದಿನ‌ ಒಂದು ವಾರ ಇದೇ ರೀತಿಯ ಅನುಭವ ಆಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೆಎಂಎಫ್​​ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್; ಮತ್ತಷ್ಟು ತುಪ್ಪ ಪೂರೈಸುವಂತೆ ಟಿಟಿಡಿ ಮನವಿ

ಇನ್ನು, ಈ ಹವಾಮಾನ ವೈಪರಿತ್ಯದಿಂದಾಗಿ‌ ಮಕ್ಕಳಲ್ಲಿ‌ಶ್ವಾಸ ನಾಳ ಹಾಗೂ ಉಸಿರಾಟದ ಸಮಸ್ಯೆಗಳು ಕಂಡುಬರುತ್ತಿದ್ದು, ಹೊರಗಡೆ ಊಟವನ್ನ ಕಂಟ್ರೋಲ್ ಮಾಡಿ ಅಂತ ಡಾಕ್ಟರ್​ಗಳು ಸಲಹೆ ನೀಡ್ತಿದ್ದಾರೆ.

ಒಟ್ನಲ್ಲಿ, ಮಳೆಗಾಲದಲ್ಲಿಯೂ ಬಿಸಿಲಿನ ಫೀಲ್ ಆಗುತ್ತಿದ್ದು, ಸ್ಕಿನ್ ಮೇಲೂ ಸಾಕಷ್ಟು ಪರಿಣಾಮ ಬೀರುತ್ತಿದೆ. ಜನರು ಆರೋಗ್ಯದ ಮೇಲೆ ನಿಗಾ ವಹಿಸಬೇಕಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ