AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌; ಮಳೆಗಾಲದಲ್ಲಿಯು 32 ಡಿಗ್ರಿ ಬಿಸಿಲು ದಾಖಲು

ಕರ್ನಾಟಕ ರಾಜ್ಯದಲ್ಲಿ ಮಳೆಗಾಲವಿದ್ದರೂ ಹವಾಮಾನ ಮಾತ್ರ ಬೇಸಿಗೆಯ ಫೀಲ್ ಕೊಡುತ್ತಿದ್ದು, ಬಿಸಿಲಿನ ತಾಪಮಾನ ಮಾತ್ರ ನೆತ್ತಿ ಸುಡುತ್ತಿದೆ.‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌ವಾಗಿದೆ. ಮಳೆಗಾಲದಲ್ಲಿಯೂ 32 ಡಿಗ್ರಿಯಷ್ಟು ಬಿಸಿಲು ದಾಖಲಾಗಿದೆ. ಮಳೆಗಾಲದಲ್ಲಿಯೂ ಬಿಸಿಲಿನ ಫೀಲ್ ಆಗುತ್ತಿದ್ದು, ಸ್ಕಿನ್ ಮೇಲೂ ಸಾಕಷ್ಟು ಪರಿಣಾಮ ಬೀರುತ್ತಿದೆ. ಜನರು ಆರೋಗ್ಯದ ಮೇಲೆ ನಿಗಾ ವಹಿಸಬೇಕಾಗಿದೆ.

ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌; ಮಳೆಗಾಲದಲ್ಲಿಯು 32 ಡಿಗ್ರಿ ಬಿಸಿಲು ದಾಖಲು
ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌
Poornima Agali Nagaraj
| Edited By: |

Updated on: Sep 22, 2024 | 8:07 AM

Share

ಬೆಂಗಳೂರು, ಸೆ.22: ಸಿಲಿಕಾನ್ ಸಿಟಿಯಲ್ಲಿ (Bengaluru) ಕಳೆದ ಒಂದು ವಾರದಿಂದ ಬಿಸಿಲಿನ ಪ್ರಮಾಣ ಜಾಸ್ತಿಯಾಗಿದ್ದು, ಮಳೆಗಾಲದಲ್ಲಿ ಬೇಸಿಗೆಯ ಫೀಲ್ ಕೊಡುತ್ತಿದೆ. ಸುಡುಬಿಸಿಲು ಜನರ ನೆತ್ತಿ ಸುಡುತ್ತಿದ್ದು, ಇನ್ನು ಮೂರ್ನಾಲ್ಕು ದಿನಗಳು ಇದೇ ರೀತಿ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳ್ತಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ‌ ಮಳೆಗಾಲದಲ್ಲೂ ಬೇಸಿಗೆ ಅನುಭವವಾಗುತ್ತಿದ್ದು, ನಗರದಲ್ಲಿ ಬಿಸಿಲಿನ ಗರಿಷ್ಠ ಉಷ್ಣಾಂಶ 32 ಡಿಗ್ರಿಯವರೆಗೂ ದಾಟಿದೆ. ಇನ್ನು ಬಿಸಿಲಿನ ಜೊತೆಗೆ ಬಿಸಿಗಾಳಿಯ ಅನುಭವವು ಆಗುತ್ತಿದ್ದು, ಈ ಬಿಸಿಲಿನಿಂದ ಆರೋಗ್ಯದ ಮೇಲೆ‌ ಭಾರಿ ಪರಿಣಾಮ ಬೀರಲಿದೆ. ಸಧ್ಯ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೆಳಗ್ಗಿನ ಜಾವದ ವೇಳೆ ಚಳಿಯ ಅನುಭವ, ಮಧ್ಯಾಹ್ನ ಬಿಸಿಲಿನ‌ ಅನುಭವ ಸಂಜೆಯಾಗುತ್ತಿದ್ದಂತೆ ಮಳೆಯ ವಾತಾವರಣ ಕಂಡುಬರುತ್ತಿದೆ.‌

ಇದೇ ವಾತಾವರಣ ಇನ್ನು ಒಂದು ವಾರ ಕಂಡುಬರಲಿದ್ದು, ಮಕ್ಕಳನ್ನ ಮಧ್ಯಾಹ್ನದ ವೇಳೆ ಬಿಸಿಲಿಗೆ ಬಿಡದಂತೆ ಎಚ್ಚರವಹಿಸಲು ಹವಾಮಾನ ಇಲಾಖೆ ತಜ್ಞರು ಹೇಳ್ತಿದ್ದಾರೆ. ಇನ್ನು, ಬಂಗಾಳಕೊಲ್ಲಿಯಲ್ಲಿ ಮೇಲ್ಮೆನಲ್ಲಿ ಯಾವುದೇ ಫಾರ್ಮ್‌ ಉಂಟಾಗದ ಕಾರಣ ಬಿಸಿಲಿನ ಪ್ರಮಾಣ ಜಾಸ್ತಿಯಾಗಿದ್ದು, ಮುಂದಿನ‌ ಒಂದು ವಾರ ಇದೇ ರೀತಿಯ ಅನುಭವ ಆಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೆಎಂಎಫ್​​ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್; ಮತ್ತಷ್ಟು ತುಪ್ಪ ಪೂರೈಸುವಂತೆ ಟಿಟಿಡಿ ಮನವಿ

ಇನ್ನು, ಈ ಹವಾಮಾನ ವೈಪರಿತ್ಯದಿಂದಾಗಿ‌ ಮಕ್ಕಳಲ್ಲಿ‌ಶ್ವಾಸ ನಾಳ ಹಾಗೂ ಉಸಿರಾಟದ ಸಮಸ್ಯೆಗಳು ಕಂಡುಬರುತ್ತಿದ್ದು, ಹೊರಗಡೆ ಊಟವನ್ನ ಕಂಟ್ರೋಲ್ ಮಾಡಿ ಅಂತ ಡಾಕ್ಟರ್​ಗಳು ಸಲಹೆ ನೀಡ್ತಿದ್ದಾರೆ.

ಒಟ್ನಲ್ಲಿ, ಮಳೆಗಾಲದಲ್ಲಿಯೂ ಬಿಸಿಲಿನ ಫೀಲ್ ಆಗುತ್ತಿದ್ದು, ಸ್ಕಿನ್ ಮೇಲೂ ಸಾಕಷ್ಟು ಪರಿಣಾಮ ಬೀರುತ್ತಿದೆ. ಜನರು ಆರೋಗ್ಯದ ಮೇಲೆ ನಿಗಾ ವಹಿಸಬೇಕಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು