AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ಬಿಸಿಲಿನ ಝಳ ಹೆಚ್ಚಾದಂತೆ ಹೆಚ್ಚುತ್ತಿದೆ ಕಾಲೋಚಿತ ಹಣ್ಣು ಮತ್ತು ತರಕಾರಿಗಳ ಬೆಲೆ

ಬೆಂಗಳೂರಲ್ಲಿ ಬಿಸಿಲಿನ ತಾಪಮಾನ 30 ಡಿಗ್ರಿ ಸೆಲ್ಸಿಯಸ್​​ಗೆ ಮುಟ್ಟಿದ್ದು ಕೆಆರ್​ ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆ, ಯಶವಂತಪುರ, ಮಡಿವಾಳ ಮತ್ತು ಹಾಪ್​ಕಾಮ್ಸ್​​ಗಳಲ್ಲಿ ಈಗಾಗಲೆ ಕಾಲೋಚಿತವಾಗಿ ಸಿಗುವ ಕಲ್ಲಂಗಡಿ, ಕರಬೂಜ ಹಣ್ಣು ಮತ್ತು ಟೊಮೇಟೊ ಹಣ್ಣುಗಳ ಬೆಲೆ ಜಾಸ್ತಿಯಾಗಿವೆ.

ಬೇಸಿಗೆ ಬಿಸಿಲಿನ ಝಳ ಹೆಚ್ಚಾದಂತೆ ಹೆಚ್ಚುತ್ತಿದೆ ಕಾಲೋಚಿತ ಹಣ್ಣು ಮತ್ತು ತರಕಾರಿಗಳ ಬೆಲೆ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
|

Updated on: Mar 07, 2023 | 8:10 AM

Share

ಬೆಂಗಳೂರು: ಚಳಿಗಾಲ ಮುಗಿದು ಬೇಸಿಗೆ ಶುರುವಾಗಿದೆ. ಶಿವರಾತ್ರಿ (Shivaratri) ಮುಗಿಯುತ್ತಿದ್ದಂತೆ ಶಿವ ಶಿವ ಎನ್ನುವಷ್ಟು ಬಿಸಿಲಿನ ತಾಪಮಾನ ಏರುತ್ತಾ ಹೋಗುತ್ತದೆ. ಈ ಸಮಯದಲ್ಲಿ ತಂಪಾದ ಪಾನಿಯಾ, ಹಣ್ಣು ಮತ್ತು ತರಕಾರಿಗಳಿಗೆ ಭಾರೀ ಬೇಡಿಕೆ ಬರುತ್ತದೆ. ಇನ್ನು ಸಿಲಿಕಾನ್​ ಸಿಟಿಯಲ್ಲಿ (Silicon city) ಬಿಸಿಲಿನ ತಾಪಮಾನ 30 ಡಿಗ್ರಿ ಸೆಲ್ಸಿಯಸ್​​ಗೆ ಮುಟ್ಟಿದ್ದು, ಜನರು ಬಿಸಿಲಿನ ಬೇಗೆಗೆ ಹೈರಾಣಾಗುತ್ತಿದ್ದಾರೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳಲು ಜನರು ತಂಪಾದ ಹಣ್ಣು ಮತ್ತು ತರಕಾರಿಗಳ ಮೊರೆ ಹೋಗಿದ್ದು, ಆದರೆ ಇವುಗಳ ಬೆಲೆ ಕೂಡ ಗಗನಕ್ಕೇರಿವೆ.

ನಗರದ ಹಣ್ಣಿನ ಮಾರುಕಟ್ಟೆಗಳಾದ ಕೆಆರ್​ ಮಾರುಕಟ್ಟೆ (KR Market), ಕಲಾಸಿಪಾಳ್ಯ ಮಾರುಕಟ್ಟೆ (Kalasipalya Market), ಯಶವಂತಪುರ (Yeshwantpur), ಮಡಿವಾಳ (Madiwala) ಮತ್ತು ಹಾಪ್​ಕಾಮ್ಸ್​​ಗಳಲ್ಲಿ (Hopcoms) ಈಗಾಗಲೆ ಕಾಲೋಚಿತವಾಗಿ ಸಿಗುವ ಕಲ್ಲಂಗಡಿ, ಕರಬೂಜ ಹಣ್ಣು ಮತ್ತು ಟೊಮೇಟೊ ಹಣ್ಣುಗಳ ಬೆಲೆ ಜಾಸ್ತಿಯಾಗಿವೆ. ಕಲ್ಲಂಗಡಿ ಹಣ್ಣಿನ ಬೆಲೆ ಕಳೆದ ಕೆಲವು ದಿನಗಳಲ್ಲಿ ಶೇ 50 ರಷ್ಟು ಏರಿಕೆಯಾಗಿದೆ. ಕಳೆದ ವಾರ ಕಲ್ಲಂಗಡಿ ಹಣ್ಣು ಕೆಜಿಗೆ 15 ರಿಂದ 20 ರೂ. ಮಾರಾಟವಾಗುತ್ತಿತ್ತು. ಆದರೆ ಈಗ ಪ್ರತಿ ಕೆಜಿಗೆ 20-30 ರೂ. ಮಾರಾಟ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚಾದರೆ ಬೆಲೆ ಇನ್ನೂ ಜಾಸ್ತಿಯಾಗುವ ಸಾಧ್ಯತೆ ಇದೆ.

ಕೆ ಆರ್​ ಮಾರುಕಟ್ಟೆಯಲ್ಲಿ ಓರ್ವ ವ್ಯಾಪಾರಸ್ತ ಹೇಳುವ ಪ್ರಕಾರ ಈಗಾಗಲೆ ಕಲ್ಲಂಡಿ ಹಣ್ಣಿನ ಬೆಲೆ ಏರಿಕೆಯಾಗಿದೆ. ನಾವು ಪ್ರತಿ ದಿನ 50 ರಿಂದ 250 ಟನ್​ ಕಲ್ಲಂಗಡಿ ಹಣ್ಣು ಮಾರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕಲ್ಲಂಗಡಿ ಹಣ್ಣಿನ ಬೇಡಿಕೆ ಜಾಸ್ತಿಯಾದರೇ ಬೆಲೆ ಕೂಡ ಜಾಸ್ತಿಯಾಗುತ್ತದೆ ಮತ್ತು ಮಾರಾಟ ಕೂಡ ಜಾಸ್ತಿಯಾಗುತ್ತದೆ ಎಂದು ಹೇಳಿದ್ದಾರೆ.

ಕೆ.ಆರ್.ಮಾರುಕಟ್ಟೆಯಲ್ಲಿ ಸುಮಾರು ಹತ್ತಾರು ಸಗಟು ಕಲ್ಲಂಗಡಿ ವ್ಯಾಪಾರಿಗಳಿದ್ದಾರೆ. ಪ್ರತಿ ಕಲ್ಲಂಗಡಿ 4 ಕೆಜಿಯಿಂದ 12 ಕೆಜಿ ತೂಗುತ್ತದೆ. ಸದ್ಯದ ಮಟ್ಟಿಗೆ ಕೆ.ಆರ್.ಮಾರುಕಟ್ಟೆಯಲ್ಲಿ ಪ್ರತಿ ಸಗಟು ಮಾರಾಟಗಾರರು 1ಕೆಜಿ ಮಾರಾಟ ಮಾಡುತ್ತಿದ್ದಾರೆ. ಬೇಸಿಗೆ ಹೆಚ್ಚಾದಂತೆ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಲಿದ್ದು, ಬೆಲೆ ಏರಿಕೆಯಾಗಲಿದೆ ಎಂದು ಕೆ.ಆರ್.ಮಾರುಕಟ್ಟೆಯ ಸಗಟು ಹಣ್ಣು ಮಾರಾಟಗಾರ ಮಂಜುನಾಥ್ ತಿಳಿಸಿದ್ದಾರೆ.

ಹಣ್ಣಿನ ಅಂಗಡಿಗಳ ಹೊರತಾಗಿ, ಬೇಸಿಗೆಯಲ್ಲಿ, ಬೆಂಗಳೂರಿನ ಹಲವಾರು ಬೀದಿ ಬದಿ ವ್ಯಾಪಾರಿಗಳು ಸಹ ಸಣ್ಣ ಪ್ರಮಾಣದಲ್ಲಿ ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಲು ಪ್ರಾರಂಭಿಸುತ್ತಾರೆ. ಈಗ ಕತ್ತರಿಸಿದ ಕಲ್ಲಂಗಡಿ ಹಣ್ಣನ್ನು 10 ರೂ.ಗೆ ಮಾರುತ್ತಿದ್ದಾರೆ. ಅನೇಕ ಮಾರಾಟಗಾರರು ಸಂಪೂರ್ಣ ಹಣ್ಣನ್ನು ಮಾರಾಟ ಮಾಡುವುದಕ್ಕಿಂತ ಹೆಚ್ಚು ತುಂಡುಗಳನ್ನು ಮಾರಾಟ ಮಾಡುತ್ತಾರೆ.

ಇನ್ನು ಪ್ರತಿಕೂಲ ಹವಾಮಾನದ ಕಾರಣದಿಂದ ಈ ವರ್ಷ ಹಣ್ಣುಗಳ ಉತ್ಪಾದನೆಯು ಕುಸಿಯುವ ಸಾಧ್ಯತೆಯಿದೆ. ಇತ್ತೀಚಿನ ವರದಿಯ ಪ್ರಕಾರ, ದೇಶದಲ್ಲಿ ಹಣ್ಣುಗಳು ಮತ್ತು ತರಕಾರಿಗಳ ಉತ್ಪಾದನೆಯು ಈ ಋತುವಿನಲ್ಲಿ 30 ಪ್ರತಿಶತದವರೆಗೆ ಕುಸಿಯಬಹುದು, ಮುಖ್ಯವಾಗಿ ಹೂಬಿಡುವ ಮತ್ತು ಫ್ರುಟಿಂಗ್ ಪ್ರಕ್ರಿಯೆಯ ಸಮಯದಲ್ಲಿ ಹೆಚ್ಚಿನ ತಾಪಮಾನದಿಂದಾಗಿ ಉತ್ಪಾದನೆ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ