AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಆರೋಪ: ಡಿ.ಕೆ. ಶಿವಕುಮಾರ್​, ಈಶ್ವರ್ ಖಂಡ್ರೆ ಸೇರಿ 6 ಮಂದಿಗೆ ಸಮನ್ಸ್ ಜಾರಿ

ಡಿಸೆಂಬರ್​ 22ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಉಲ್ಲಂಘನೆ ಹಿನ್ನೆಲೆ, ಉಪ್ಪಾರಪೇಟೆ ಠಾಣೆ ಪೊಲೀಸರು ದೂರು ನೀಡಿದ್ದರು. ಅದರಂತೆ ಸಮನ್ಸ್ ಜಾರಿ ಆಗಿದೆ.

ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಆರೋಪ: ಡಿ.ಕೆ. ಶಿವಕುಮಾರ್​, ಈಶ್ವರ್ ಖಂಡ್ರೆ ಸೇರಿ 6 ಮಂದಿಗೆ ಸಮನ್ಸ್ ಜಾರಿ
ಡಿ.ಕೆ.ಶಿವಕುಮಾರ್
TV9 Web
| Edited By: |

Updated on: Nov 27, 2021 | 4:08 PM

Share

ಬೆಂಗಳೂರು: ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಕಾಂಗ್ರೆಸ್​ ನಾಯಕರಾದ ಡಿ.ಕೆ. ಶಿವಕುಮಾರ್, ಈಶ್ವರ ಖಂಡ್ರೆ ಸೇರಿ 6 ಜನರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್​ನಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಡಿಸೆಂಬರ್​ 22ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಉಲ್ಲಂಘನೆ ಹಿನ್ನೆಲೆ, ಉಪ್ಪಾರಪೇಟೆ ಠಾಣೆ ಪೊಲೀಸರು ದೂರು ನೀಡಿದ್ದರು. ಅದರಂತೆ ಸಮನ್ಸ್ ಜಾರಿ ಆಗಿದೆ.

10 ಕ್ಷೇತ್ರಗಳಲ್ಲಿ ಸೋಲು ಎಂದು ಬಿಜೆಪಿ ಏಕೆ ಹೇಳುತ್ತಿಲ್ಲ: ಡಿಕೆ ಶಿವಕುಮಾರ್ ವಿಧಾನ ಪರಿಷತ್ ಚುನಾವಣೆಯ 25 ಸ್ಥಾನಗಳ ಪೈಕಿ 15 ಸ್ಥಾನ ಗೆಲ್ತೇವೆಂದು ಬಿಜೆಪಿ ಹೇಳುತ್ತಿದೆ. ಹಾಗಾದ್ರೆ 10 ಕ್ಷೇತ್ರಗಳಲ್ಲಿ ಸೋಲು ಎಂದು ಏಕೆ ಹೇಳುತ್ತಿಲ್ಲ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಶನಿವಾರ​ ತಿರುಗೇಟು ನೀಡಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಒಂದು ಹೇಳ್ತಾರೆ, ಬಿಜೆಪಿಯ ಇತರೆ ನಾಯಕರು ಮತ್ತೊಂದು ಹೇಳುತ್ತಾರೆ. ಪಂಚಾಯತ್ ​ರಾಜ್​ ವ್ಯವಸ್ಥೆಗೆ ಶಕ್ತಿ ಕೊಟ್ಟವರೇ ನಾವು ಎಂದು ಅವರು ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ವಿಚಾರವಾಗಿ ಶಿವಕುಮಾರ್ ತಿಳಿಸಿದ್ದಾರೆ. 2022ರ ಜನವರಿಯಲ್ಲಿ ನಾವು ಪಾದಯಾತ್ರೆ ಮಾಡುತ್ತೇವೆ. ಸದ್ಯದಲ್ಲೇ ಪಾದಯಾತ್ರೆಗೆ ದಿನಾಂಕ ಪ್ರಕಟಿಸುತ್ತೇವೆ. ಮೇಕೆದಾಟು ವಿಚಾರದಲ್ಲಿ ಜೆಡಿಎಸ್ ಜತೆಯಾದ್ರೆ ಅಭ್ಯಂತರವಿಲ್ಲ. ಯಾವ ಪಕ್ಷದವರು ಬೇಕಾದ್ರೂ ಹೋರಾಟ ಮಾಡಬಹುದು. ಮೇಕೆದಾಟು ಯೋಜನೆ ಜಾರಿಗೆ ತೊಡಕಿಲ್ಲ ಅಂತಾರೆ ಸಿಎಂ. ಈ ಡಬಲ್​ ಗೇಮ್ ಸರ್ಕಾರ ಯೋಜನೆ ಜಾರಿಮಾಡ್ತಿಲ್ಲ ಎಂದು ರಾಮನಗರ ಜಿಲ್ಲೆ ಕನಕಪುರದಲ್ಲಿ ಡಿ.ಕೆ.ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜಕೀಯಕ್ಕಾಗಿ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆರೋಪ

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​ ನಮಗೆ 2 ಕಣ್ಣುಗಳಿದ್ದಂತೆ: ಜಿ ಪರಮೇಶ್ವರ್ ಹೇಳಿಕೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್