ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರನ‌ ಸನ್ನಿಧಿ, ಲಿಂಗ ಸ್ಪರ್ಶಿಸಲಿದ್ದಾನೆ ಸೂರ್ಯ

ಬೆಂಗಳೂರು: ಉತ್ತರಾಯಣ ಕಾಲ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇವತ್ತು ಸೂರ್ಯ ತನ್ನ ಪಥ ಬದಲಿಸುವ ಹಿನ್ನೆಲೆ ಬೆಂಗಳೂರಿನ ಗುಟ್ಟಳ್ಳಿಯ ಗವಿಗಂಗಾಧರನನ್ನ ಸೂರ್ಯರಶ್ಮಿ ಸ್ಪರ್ಶಿಸಲಿದೆ. ಪ್ರತಿವರ್ಷದಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ‌ ಸೂರ್ಯ ರಶ್ಮಿ ‌ಶಿವನನ್ನ ಸ್ಪರ್ಶಿಸಲಿದೆ. ಸಂಜೆ 5.20 ರಿಂದ 5.37 ರ ನಡುವೆ ಸೂರ್ಯನು ದೇವರನ್ನ ಸ್ಪರ್ಶಿಸಲಿದ್ದಾನೆ. ಈ‌ ಹಿನ್ನೆಲೆ ಗವಿಗಂಗಾಧರ ಸನ್ನಿಧಿಯಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಶಿವನಿಗೆ ರುದ್ರಾಭಿಷೇಕ ಸೇರಿ‌ ವಿಶೇಷ ಪೂಜಾ ಕೈಂಕರ್ಯ ಜರುಗಲಿದೆ. […]

ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರನ‌ ಸನ್ನಿಧಿ, ಲಿಂಗ ಸ್ಪರ್ಶಿಸಲಿದ್ದಾನೆ ಸೂರ್ಯ
ಸಾಧು ಶ್ರೀನಾಥ್​

Updated on: Jan 16, 2020 | 9:51 AM

ಬೆಂಗಳೂರು: ಉತ್ತರಾಯಣ ಕಾಲ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇವತ್ತು ಸೂರ್ಯ ತನ್ನ ಪಥ ಬದಲಿಸುವ ಹಿನ್ನೆಲೆ ಬೆಂಗಳೂರಿನ ಗುಟ್ಟಳ್ಳಿಯ ಗವಿಗಂಗಾಧರನನ್ನ ಸೂರ್ಯರಶ್ಮಿ ಸ್ಪರ್ಶಿಸಲಿದೆ. ಪ್ರತಿವರ್ಷದಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ‌ ಸೂರ್ಯ ರಶ್ಮಿ ‌ಶಿವನನ್ನ ಸ್ಪರ್ಶಿಸಲಿದೆ. ಸಂಜೆ 5.20 ರಿಂದ 5.37 ರ ನಡುವೆ ಸೂರ್ಯನು ದೇವರನ್ನ ಸ್ಪರ್ಶಿಸಲಿದ್ದಾನೆ. ಈ‌ ಹಿನ್ನೆಲೆ ಗವಿಗಂಗಾಧರ ಸನ್ನಿಧಿಯಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಶಿವನಿಗೆ ರುದ್ರಾಭಿಷೇಕ ಸೇರಿ‌ ವಿಶೇಷ ಪೂಜಾ ಕೈಂಕರ್ಯ ಜರುಗಲಿದೆ.

ಸೂರ್ಯ ರಶ್ಮಿ ಬೀಳುವ ಸಮಯದಲ್ಲಿ ದೇವರಿಗೆ ಕ್ಷೀರಾಭಿಷೇಕ ನಡೆಯಲಿದೆ. ನಂತ್ರ ಶಿವನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗುತ್ತೆ. ಅದೇರೀತಿ ದೇವರ ಮೇಲೆ ಹೆಚ್ಚು ಕಾಲ ಸೂರ್ಯ ರಶ್ಮಿ ಉಳಿಯಬಾರದು ಅನ್ನೋ ನಂಬಿಕೆ ಇದೆ. ಕಳೆದ ವರ್ಷ 1 ನಿಮಿಷ 3 ಸೆಕೆಂಡುಗಳವರೆಗೆ ಸೂರ್ಯ ರಶ್ಮಿ ದೇವರ ಮೇಲೆ ಇತ್ತು. ಅಲ್ಲದೆ ನಿನ್ನೆಯೇ ಸೂರ್ಯ ರಶ್ಮಿ ಸ್ಪರ್ಶಿಸಬೇಕಿತ್ತು. ಆದ್ರೆ ಒಂದು ದಿನ ತಡವಾಗಿ ಸ್ಪರ್ಶಿಸುತ್ತಿದೆ. ಹೀಗಾಗಿ ಈ ಬಾರಿಯೂ ದೇವರ ಮೇಲೆ ಸೂರ್ಯ ರಶ್ಮಿ ಹೆಚ್ಚು ಕಾಲ ಉಳಿಯೋ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಒಟ್ನಲ್ಲಿ, ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನಲ್ಲಿ ಇಂದು ವಿಸ್ಮಯವೇ ನಡೆಯಲಿದೆ.‌ ಸೂರ್ಯನ ಕಿರಣ ಶಿವಲಿಂಗವನ್ನ ಚುಂಬಿಸೋ ಕ್ಷಣವನ್ನ ನೋಡಲು ಭಕ್ತರು ಕಾರದಿಂದ ಕಾಯುತ್ತಿದ್ದಾರೆ.

Published On - 6:54 am, Wed, 15 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us