AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶಿವಾಜಿನಗರದ ರಸೆಲ್​ ಮಾರ್ಕೆಟ್ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ

Bengaluru Traffic Advisory: ಬೆಂಗಳೂರಿನ ಶಿವಾಜಿನಗರ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ (ಸೆ.08) ರಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮವಿದೆ. ಹೀಗಾಗಿ ರವಿವಾರ ಮಧ್ಯಾಹ್ನ 12.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್​ ಮಾಡಲಾಗಿದೆ.

ಬೆಂಗಳೂರು: ಶಿವಾಜಿನಗರದ ರಸೆಲ್​ ಮಾರ್ಕೆಟ್ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Sep 07, 2024 | 7:31 AM

Share

ಬೆಂಗಳೂರು, ಆಗಸ್ಟ್​ 28: ಬೆಂಗಳೂರಿನ (Bengaluru) ಶಿವಾಜಿನಗರದ ರಸೆಲ್​ ಮಾರ್ಕೆಟ್​ ರಸ್ತೆ ಸೇರಿಂದತೆ ಇನ್ನೀತರೆ ರಸ್ತೆಗಳಲ್ಲಿ ರವಿವಾರ (ಸೆ.08) ರಂದು ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಸೂಚನೆ ಹೊರಡಿಸಿದ್ದಾರೆ. ಹಾಗಿದ್ದರೆ ಯಾವ್ಯಾವ ರಸ್ತೆಯಲ್ಲಿ, ಯಾವ್ಯಾವ ದಿನಾಂಕದಂದು ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ? ಇಲ್ಲಿದೆ ಮಾಹಿತಿ.

ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ (ಸೆ.08) ರಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮವಿದೆ. ಹೀಗಾಗಿ ರವಿವಾರ ಮಧ್ಯಾಹ್ನ 12.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್​ ಮಾಡಲಾಗಿದೆ.

ಸಂಚಾರ ನಿರ್ಬಂಧಿಸಿರುವ ರಸ್ತೆಗಳು:

  • ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ಬ್ರಾಡ್ ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್ ಕಡೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರ ಬಂದ್​ ಆಗಲಿದೆ.
  • ಧರ್ಮರಾಜ ಕೋಯಿಲ್ ಸ್ಟ್ರೀಟ್ – ಓ.ಪಿ.ಹೆಚ್.ರಸ್ತೆ ವರೆಗೆ ರಸಲ್ ಮಾರ್ಕೆಟ್ ಕಡೆಗೆ ಬರುವ ವಾಹನ ಸಂಚಾರವನ್ನು ತಾಜ್ ವೃತ್ತದಲ್ಲಿ ನಿರ್ಬಂಧಿಸಲಾಗುತ್ತದೆ.
  • ಬಿ.ಆರ್.ವಿ ಜಂಕ್ಷನ್ ನಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ಬಾಳೇ ಕುಂಡಿ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗುತ್ತದೆ.

ಪರ್ಯಾಯ ಮಾರ್ಗಗಳು:

  • ಅನಿಲ್ ಕುಂಬ್ಳೆ ಜಂಕ್ಷನ್ ಕಡೆಯಿಂದ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಬಿ.ಆರ್.ವಿ ಜಂಕ್ಷನ್‌ನಲ್ಲಿ ಎಡತಿರುವು ಪಡೆದು- ಸಿ.ಟಿ.ಓ- ಕ್ಲೀನ್ ಸರ್ಕಲ್- ಎಂ.ಜಿ ರಸ್ತೆ ಮೂಲಕ ಸಂಚರಿಸಬಹು.
  • ದ್ವಿ ಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ ಸೆಂಟ್ರಲ್ ಸ್ಟ್ರೀಟ್ – ಬಲ ತಿರುವು ಸಫೀನಾ ಪ್ಲಾಸಿ ಕಮರ್ಷಿಯಲ್ ಸ್ಟ್ರೀಟ್-ಕಾಮರಾಜ ರಸ್ತೆ ಮೂಲಕ ಸಂಚರಿಸಬಹುದು.
  • ದ್ವಿ ಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ-ಸೆಂಟ್ರಲ್ ಸ್ಪೀಟ್ – ಸೆಲೆಕ್ಟ್ ಜಂಕ್ಷನ್ ಎಡ ತಿರುವು ಪಡೆದು ರಮಡಾ ಹೋಟೆಲ್-ವಿ.ಎಸ್.ಎನ್ ರಸ್ತೆ ಮೂಲಕ ಸಂಚರಿಸಬಹುದು.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 30 ದಿನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ

ವಾಹನಗಳ ನಿಲುಗಡೆ ನಿಷೇಧ

ರಸಲ್ ಮಾರ್ಕೆಟ್ ಸುತ್ತ-ಮುತ್ತ – ಬ್ರಾಡ್ ವೇರಸ್ತೆ – ಮೀನಾಕ್ಷಿಕೋಯಿಲ್ ಸ್ಟ್ರೀಟ್ – ಸೆಂಟ್ರಲ್ ಸ್ಟ್ರೀಟ್ – ಶಿವಾಜಿ ರಸ್ತೆ ಬಾಳೇ ಕುಂದ್ರಿ ವೃತ್ತದಿಂದ ಚಂದ್ರಿಕಾ ಹೋಟೆಲ್ ವರೆಗೂ (ಕನ್ನಿಂಗ್ ಹ್ಯಾಮ್ ರಸ್ತೆ) – ಯೂನಿಯನ್ ಸ್ಟ್ರೀಟ್ ಇನ್ ಫೆಂಟ್ರಿರಸ್ತೆ – ಕಬ್ಬನ್‌ರಸ್ತೆ ಲೇಡಿಕರ್ಜನ್‌ ರಸ್ತೆ ವಿ.ಎಸ್.ಎನ್‌ರಸ್ತೆ ಪ್ಲೇನ್ ಸ್ಪೀಟ್ – ಎಂ.ಜರಸ್ತೆ.

ವಾಹನ ನಿಲುಗಡೆ ಸ್ಥಳಗಳು

ಕಾಮರಾಜರಸ್ತೆ ಪಾರ್ಕಿಂಗ್ ಸ್ಥಳದಲ್ಲಿ (ಸರ್ವೀಸ್ ರಸ್ತೆ ಆರ್ಮಿ ಸ್ಕೂಲ್ ಮುಂಭಾಗ) ಸಫೀನಾ ಪ್ರಾಜಾ ಮುಂಭಾಗ (ಮೈನ್ ಗಾರ್ಡನ್ ರಸ್ತೆ) ಜೆಸ್ಮಾ ಭವನ ರಸ್ತೆ – ಆರ್.ಬಿ.ಎ.ಎನ್.ಎಮ್.ಎಸ್ ಮೈದಾನ (ಗಂಗಾಧರ ಚೆಟ್ಟಿ ರಸ್ತೆ ) ಮುಸ್ಲಿಂ ಆರ್‌ಫೆನೇಜ್ ಡಿಕನ್ಸನ್ ರಸ್ತೆ (ಹಸನತ್ ಕಾಲೇಜ್ ಹತ್ತಿರ), ರಮಡಾ ಹೊಟೇಲ್ (ಓಲ್ಡ್ ಕಾಂಗ್ರೇಸ್ ಕಛೇರಿ) ಪ್ಲೇನ್ ಸ್ಟ್ರೀಟ್.

Published On - 7:30 am, Sat, 7 September 24

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?