AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಥ ಬದಲಿಸಿ ಗವಿಗಂಗಾಧರೇಶ್ವರನಿಗೆ ನಮಿಸಿದ ಸೂರ್ಯ, ಇದೇ ಮೊದಲ ಬಾರಿಗೆ 3 ನಿಮಿಷ 12 ಸೆಕೆಂಡ್‌ ಸ್ಪರ್ಶ!

ಬೆಂಗಳೂರಿನ ಶ್ರೀ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯರಶ್ಮಿಯು ಗವಿಗಂಗಾಧರೇಶ್ವರನನ್ನು ಸ್ಪರ್ಶಿಸುವ ಘಳಿಗೆ ಭಾನುವಾರ ಸಂಜೆ ನಡೆಯಿತು.

ಪಥ ಬದಲಿಸಿ ಗವಿಗಂಗಾಧರೇಶ್ವರನಿಗೆ ನಮಿಸಿದ ಸೂರ್ಯ, ಇದೇ ಮೊದಲ ಬಾರಿಗೆ 3 ನಿಮಿಷ 12 ಸೆಕೆಂಡ್‌ ಸ್ಪರ್ಶ!
ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಶ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 15, 2023 | 7:09 PM

ಬೆಂಗಳೂರು: ಇಂದು ನಾಡಿಗೆ ಸಂಕ್ರಾಂತಿ ಸಂಭ್ರಮ. ಜೊತೆಗೆ ಸೂರ್ಯನು ದಕ್ಷಿಣಾಯನದಿಂದ ಪಥ ಬದಲಿಸಿ ಉತ್ತರಾಯಣ ಚಲನೆಗೆ ತೊಡಗುವ ದಿನ. 2023 ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು (Sankranti Festival) ದಕ್ಷಿಣದಿಂದ ಉತ್ತರಕ್ಕೆ ಸೂರ್ಯ ತನ್ನ ಪಥ ಬದಲಿಸುವಾಗ ಸೂರ್ಯನ ಕಿರಣಗಳು ಬೆಂಗಳೂರಿನ ಬಸವನಗುಡಿಯ ಗವಿಗಂಗಾಧರೇಶ್ವರನ(Gavi Gangadhareshwara) ಲಿಂಗವನ್ನು ಸ್ಪರ್ಶಿಸಿದವು. ಈ ವಿಸ್ಮಯವನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.

ಇದನ್ನೂ ಓದಿ: Sabarimala Makarjyoti: ಶಬರಿಮಲೆ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮೂಡಿದ ಮಕರಜ್ಯೋತಿ, ಕಣ್ತುಂಬಿಕೊಂಡ ಭಕ್ತಕೋಟಿ

ಸಂಜೆ 5.20ರಿಂದ 5.23ರ ಸಮಯದಲ್ಲಿ ಒಟ್ಟು 3 ನಿಮಿಷ 12 ಸೆಕೆಂಡ್‌ಗಳ ಕಾಲ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ಬಳಿಕ ಮಂಗಳಾರತಿ ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕರಿಂದ ಮಂತ್ರಘೋಷ, ಡೊಳ್ಳು, ನಗಾರಿ, ಗಂಟೆಗಳ ನಾದ ಮೊಳಗಿದ್ದು, ನೆರೆದಿರುವ ಸಹಸ್ರಾರು ಭಕ್ತರು ಎಲ್ಇಡಿ ಸ್ಕ್ರೀನ್‌ಗಳ ಮೂಲಕ ವಿಸ್ಮಯ ಕಣ್ತುಂಬಿಕೊಂಡರು.

ನಂದಿಯ ಪಾದದಿಂದ ಕೊಂಬಿನ ವರೆಗೆ

Gavi Gangadeshwara Temple

ಇಂದು(ಜ.15) ಸಂಜೆ 5.20ರ ಸುಮಾರಿಗೆ ಗವಿಗಂಗಾಧರೇಶ್ವರ ದೇಗುಲದ ಗರ್ಭಗೃಹದ ದ್ವಾರ ಪ್ರವೇಶಿಸಿದ ಸೂರ್ಯ ರಶ್ಮಿ, ಮೊದಲು ನಂದಿ ವಿಗ್ರಹದ ಪಾದವನ್ನು ಸ್ಪರ್ಶಿಸಿತು. ಬಳಿಕ ನಂದಿಯ ಬೆನ್ನಿನ ಭಾಗಕ್ಕೆ ಆಗಮಿಸಿತ್ತು. ಬಳಿಕ ನಂದಿಯ ಕೊಂಬಿನ ಮೂಲಕ ಹಾದುಹೋಗಿ ಈಶ್ವರ ಲಿಂಗವನ್ನು ಸ್ಪರ್ಶಿಸಿತು.

ಸೂರ್ಯನ ಕೌತುಕವನ್ನು ಕುಣ್ತುಂಬಿಕೊಂಡ ಭಕ್ತರು

Gavi Gangadeshwara

ಕಳೆದ ಬಾರಿ ಕೋವಿಡ್‌ ಹಿನ್ನೆಲೆಯಲ್ಲಿ ಭಕ್ತರು ಈ ವಿಸ್ಮಯವನ್ನು ನೋಡುವುದಕ್ಕೆ ಆಗಿರಲಿಲ್ಲ. ಆದ್ರೆ, ಈ ಬಾರಿ ಸೂರ್ಯ ರಶ್ಮಿ ಸ್ಪರ್ಶವನ್ನು ಕಣ್ತುಂಬಿಕೊಳ್ಳಲು ಭಕ್ತರು ಬೆಳಗ್ಗೆಯಿಂದಲೇ  ಗವಿಗಂಗಾಧರೇಶ್ವರ ದೇಗುಲ ಬಳಿ ಕಿಕ್ಕಿರಿದು ಸೇರಿದ್ದರು. ಇದರಿಂದ ಸೂರ್ಯನ ಕಿರಣಗಳು ಗವಿಗಂಗಾಧರೇಶ್ವರನ ಲಿಂಗವನ್ನು ಸ್ಪರ್ಶಿಸುವ ದೃಶ್ಯವನ್ನು ಭಕ್ತರಿಗೆ ಎಲ್ಇಡಿ ಸ್ಕ್ರೀನ್​ ಮೂಲಕ ತೋರಿಸಲಾಯ್ತು.

 3 ನಿಮಿಷ 12 ಸೆಕೆಂಡ್‌ಗಳ ಕಾಲ ಸೂರ್ಯ ರಶ್ಮಿ ಸ್ಪರ್ಶ

Gavi Gangadeshwara

ಇನ್ನು ಈ ಬಗ್ಗೆ ಗವಿಗಂಗಾಧರೇಶ್ವರ ದೇಗುಲದ ಪ್ರಧಾನ ಅರ್ಚಕ ಡಾ.ಸೋಮಸುಂದರ್ ದೀಕ್ಷಿತ್ ಪ್ರತಿಕ್ರಿಯಿಸಿದ್ದು, ಸಂಜೆ 5.20ರಿಂದ 5.23ರ ಸಮಯದಲ್ಲಿ ಒಟ್ಟು 3 ನಿಮಿಷ 12 ಸೆಕೆಂಡ್‌ಗಳ ಕಾಲ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ಕಳೆದ ವರ್ಷ ಸೂರ್ಯ ನಮಸ್ಕಾರ ಸಾಕಾರವಾಗಿರಲಿಲ್ಲ. ಆದ್ರೆ ಈ ವರ್ಷ ಪೂಜೆ ಸಾಕಾರಗೊಂಡಿದೆ. ನಾಲ್ಕು ವರ್ಷಗಳ ಕಾಲ 18 ಸೆಕೆಂಡ್‌ ಸೂರ್ಯರಶ್ಮಿ ಸ್ಪರ್ಶ ಮಾಡಿತ್ತು. ಈ ವರ್ಷ 3 ನಿಮಿಷ 12 ಸೆಕೆಂಡ್‌ಗಳ ಕಾಲ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ಪ್ರಸಕ್ತ ವರ್ಷ ಯಾವುದೇ ಅನಾಹುತ ಹಾಗೂ ಅನಾನುಕೂಲವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Published On - 6:38 pm, Sun, 15 January 23

VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್