AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ

ಜಮೀರ್ ನಿವಾಸದ ಮುಂದೆ ಕಣ್ಣೀರು ಹಾಕುತ್ತಿರುವ ಬೆಂಬಲಿಗರು, ಪ್ರಾರ್ಥನೆ ಮಾಡುತ್ತಿದ್ದರು. ಮನೆ ಮುಂದೆ ಜಮಾಯಿಸಿದ್ದ ಬೆಂಬಲಿಗರನ್ನು ಪೊಲೀಸರು ವಾಪಸ್ಸು ಕಳುಹಿಸುತ್ತಿದ್ದಾರೆ.

ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ
ಶಿವಮೊಗ್ಗದಲ್ಲಿ ಪ್ರತಿಭಟನೆ ನಡಸುತ್ತಿರುವ ಬೆಂಬಲಿಗರು
TV9 Web
| Edited By: sandhya thejappa|

Updated on:Aug 05, 2021 | 4:45 PM

Share

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಒಂಬತ್ತು ಗಂಟೆಯಿಂದ ನಿರಂತರವಾಗಿ ಶೋಧ ಮುಂದುವರಿದಿದೆ. ಕಾರ್ಯಕರ್ತರು ಶಾಸಕರ ಮನೆ ಮುಂದೆ ಜಮಾಯಿಸಿ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಕಾಂಗ್ರೆಸ್ನವರ ಮೇಲೆ ಮಾತ್ರ ದಾಳಿ ಆಗುತ್ತಿದೆ. ಬಿಜೆಪಿ ಅವರ ಮೇಲೆ ಯಾಕೆ ಇಡಿ ದಾಳಿ ಆಗಲ್ಲ ಅಂತ ಮಹಿಳಾ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

ಜಮೀರ್ ನಿವಾಸದ ಮುಂದೆ ಕಣ್ಣೀರು ಹಾಕುತ್ತಿರುವ ಬೆಂಬಲಿಗರು, ಪ್ರಾರ್ಥನೆ ಮಾಡುತ್ತಿದ್ದರು. ಮನೆ ಮುಂದೆ ಜಮಾಯಿಸಿದ್ದ ಬೆಂಬಲಿಗರನ್ನು ಪೊಲೀಸರು ವಾಪಸ್ಸು ಕಳುಹಿಸುತ್ತಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಶಾಸಕ ಜಮೀರ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿಯನ್ನು ಖಂಡಿಸಿ ಅಭಿಮಾನಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಎಸ್.ಎನ್ ವೃತ್ತದಲ್ಲಿ ಧರಣಿ ಮಾಡುತ್ತಿದ್ದಾರೆ.

ಅಪರಾಧಿಗಳನ್ನ ರಕ್ಷಿಸುವುದರಲ್ಲಿ ಕಾಂಗ್ರೆಸ್ ಮುಂದೆ ಇರುತ್ತೆ ಅಂತ  ದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಜಮೀರ್ ವ್ಯವಹಾರಗಳ ಮೇಲೆ ಅನುಮಾನ ಹಿನ್ನೆಲೆ ಇಡಿ ಎಲ್ಲ ಮಾಹಿತಿಯನ್ನು ಸಂಗ್ರಹಿಸಿ ದಾಳಿ ಮಾಡುತ್ತೆ. ಜಮೀರ್ ಅಹ್ಮದ್​ ತಪ್ಪು ಮಾಡದಿದ್ದರೆ ಶಿಕ್ಷೆ ಆಗುವುದಿಲ್ಲ. ಇಡಿ ದಾಳಿ ಬಗ್ಗೆ ಕಾಂಗ್ರೆಸ್ ಆರೋಪಿಸುವುದು ಸರಿಯಲ್ಲ. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡಂತೆ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಇದನ್ನೂ ಓದಿ

ಶಾಸಕ ಜಮೀರ್ ಮನೆ ಮೇಲೆ ಇಡಿ ದಾಳಿ ಖಂಡನೀಯ: ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ

ED Raids: ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ನಡೆದಿರುವುದು ಐಟಿ ದಾಳಿ ಅಲ್ಲ; ಅದು ಇಡಿ ದಾಳಿ

(Supporters shed tears in front of Zamirs residence and  Supporters have staged protests in Shimoga)

Published On - 4:44 pm, Thu, 5 August 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ