AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಾಮೂರ್ತಿ ಹೆಸರು ಶಿಫಾರಸು: ಯಾರು ಗೊತ್ತಾ?

Karnataka High Court: Chief Justice: ಸುಪ್ರೀಂಕೋರ್ಟ್ ಕೊಲಿಜಿಯಂ ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ಹೆಸರು ಶಿಫಾರಸು ಮಾಡಿದೆ. ಸಿಜೆ ಪಿ.ಎಸ್.ದಿನೇಶ್ ಕುಮಾರ್ ನಿವೃತ್ತಿ‌ ನಂತರ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಾಮೂರ್ತಿ ಹೆಸರು ಶಿಫಾರಸು: ಯಾರು ಗೊತ್ತಾ?
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Feb 07, 2024 | 8:22 PM

Share

ಬೆಂಗಳೂರು, (ಫೆಬ್ರವರಿ 07): ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಾಮೂರ್ತಿ (Karnataka High Court: Chief Justice) ಪಿಎಸ್ ದಿನೇಶ್ ಕುಮಾರ್ (PS Dinesh Kumar) ಅವರು ಇದೇ ಫೆಬ್ರವರಿ ಫೆ.24ರಂದು ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (Supreme Court) ಕೊಲಿಜಿಯಂ, ಎನ್.ವಿ.ಅಂಜಾರಿಯಾ (NV Anjaria )ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ದಿನೇಶ್ ಕುಮಾರ್ ಅವರು ನಿವೃತ್ತಿ‌ ನಂತರ ನೇಮಿಸುವಂತೆ ಗುಜರಾತ್ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿರುವ ಎನ್​ವಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್​ ಸಿಜೆಯಾಗಿ ನೇಮಿಸುವಂತೆ ಶಿಫಾರಸು ಮಾಡಲಾಗಿದೆ.

ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ಅವರಿಗೆ ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ನೀಡಿದ ನಂತರ ತೆರವಾದ ಕರ್ನಾಟಕ ಹೈಕೋರ್ಟ್​ ಸಿಜೆ ಸ್ಥಾನಕ್ಕೆ ದಿನೇಶ್ ಕುಮಾರ್ ಅವರನ್ನು ಶಿಫಾರಸು ಮಾಡಲಾಗಿತ್ತು. ಅದರಂತೆ ನ್ಯಾಯಮೂರ್ತಿ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ತಿಳಿಸಿದ್ದರು.

ಇದನ್ನೂ ಓದಿ:  Karnataka High Court: ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಪಿಎಸ್ ದಿನೇಶ್ ಕುಮಾರ್ ನೇಮಕ

ಬಳಿಕ ದಿನೇಶ್ ಕುಮಾರ್ ಅವರು ಫೆಬ್ರವರಿ 04ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ  ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ದಿನೇಶ್ ಕುಮಾರ್ ಅವರು ಫೆ.24ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ಸದ್ಯ ಗುಜರಾತ್ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿರುವ ಎನ್​ವಿ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಪಿ.ಎಸ್ ದಿನೇಶ್ ಕುಮಾರ್ ಅವರ ಬಗ್ಗೆ

ಪಿ.ಎಸ್ ದಿನೇಶ್ ಕುಮಾರ್ ಅವರು ಫೆಬ್ರವರಿ 25, 1962 ರಂದು ಜನಿಸಿದ್ದು, ಬೆಂಗಳೂರಿನ ನ್ಯಾಷನಲ್ ಕಾಲೇಜು ಮತ್ತು ಬಿಎಂಎಸ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿದ್ದಾರೆ. ಇನ್ನು 2015, ಜನವರಿ 2ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು. ಬಳಿಕ 2016 ಡಿಸೆಂಬರ್ 30ರಂದು ಕಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

ದಿನೇಶ್ ಕುಮಾರ್ ಅವರು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ), ಬಿಎಸ್‌ಎನ್‌ಎಲ್, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ), ಯುನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ (ಯುಜಿಸಿ), ಅಖಿಲ ಭಾರತ ತಾಂತ್ರಿಕ ಶಿಕ್ಷಣ (ಎಐಸಿಟಿಇ), ರಾಷ್ಟ್ರೀಯ ವಕೀಲರ ಹಿರಿಯ ಸ್ಥಾಯಿ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಸಿಬಿಐ ನಿರ್ದೇಶಕರ ನೇಮಕ, ಐಟಿಡಿಸಿ ಹೋಟೆಲ್‌ಗಳ ಹೂಡಿಕೆ, ಕೇಂದ್ರ ಹಣಕಾಸು ಸಚಿವರ ವಿರುದ್ಧ ಮಾನನಷ್ಟ ಮೊಕದ್ದಮೆ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಹಲವಾರು ಪ್ರಮುಖ ಪ್ರಕರಣಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು