AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​​ಗೆ ಜಡ್ಜ್​​ಗಳಾಗಿ 6 ವಕೀಲರ ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಆರು ಜನ ಹಿರಿಯ ವಕೀಲರನ್ನು ನೇಮಿಸಲು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ಕೇಂದ್ರದ ಅನುಮೋದನೆ ಸಿಕ್ಕರೆ ಹೈಕೋರ್ಟ್‌ನ ಒಟ್ಟು ಕಾರ್ಯನಿರ್ವಹಣಾ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಲಿದೆ. ಇತ್ತೀಚೆಗೆಷ್ಟೇ ಕೇಂದ್ರ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಅನುಮೋದನೆ ನೀಡಿತ್ತು.

ಕರ್ನಾಟಕ ಹೈಕೋರ್ಟ್​​ಗೆ ಜಡ್ಜ್​​ಗಳಾಗಿ 6 ವಕೀಲರ ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು
ಕರ್ನಾಟಕ ಹೈಕೋರ್ಟ್​​Image Credit source: dinamalar.com
ಪ್ರಸನ್ನ ಹೆಗಡೆ
|

Updated on:Jun 03, 2026 | 2:32 PM

Share

ನವದೆಹಲಿ/ ಬೆಂಗಳೂರು, ಜೂನ್​​ 03: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಆರು ವಕೀಲರನ್ನು ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ಜೂನ್ 2ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು,  ಶಿಫಾರಸ್ಸು ಮಾಡಿದ ಆರು ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ, ಕರ್ನಾಟಕ ಹೈಕೋರ್ಟ್‌ನ ಕಾರ್ಯನಿರ್ವಹಣಾ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಲಿದೆ.

ಶಿಫಾರಸ್ಸಿನಲ್ಲಿ ಇರುವ ಹೆಸರುಗಳು ಯಾವವು?

  1. ರಾಘವೇಂದ್ರ ಸೀತಾರಾಂ ಶ್ರೀವತ್ಸ: ಭಾರತದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ ದೇಶಾದ್ಯಂತ ಖ್ಯಾತಿ ಪಡೆದಿದ್ದಾರೆ.
  2. ಹೇಮಾ ಕುಲಕರ್ಣಿ: ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದಲ್ಲಿ ದೀರ್ಘಕಾಲ ವಕಾಲತ್ತು ನಡೆಸಿರುವ ಇವರು, ಕಾನೂನು ಕ್ಷೇತ್ರದಲ್ಲಿ ವ್ಯಾಪಕ ಅನುಭವ ಹೊಂದಿದ್ದಾರೆ.
  3. ಸುಬ್ರಮಣ್ಯ ರಂಗರಾವ್: ಹಿರಿಯ ವಕೀಲರು
  4. ತಡಗವಾಡಿ ಪ್ರಕಾಶ್ ವಿವೇಕಾನಂದ: ಕರ್ನಾಟಕ ಹೈಕೋರ್ಟ್​​ನ ವಕೀಲರಾಗಿ ಖ್ಯಾತಿ.
  5. ಬಕ್ಕೇಶ್ವರ ಪ್ರಮೋದ್: ಬೆಂಗಳೂರಿನ ಖ್ಯಾತ ಕಾನೂನು ತಜ್ಞ ಹಾಗೂ ಹಿರಿಯ ವಕೀಲರು.
  6. ಹೊಂಬೆಗೌಡ ಶಾಂತಿ ಭೂಷಣ್: ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಕಾನೂನು ತಜ್ಞರಾಗಿದ್ದು, ಈ ಹಿಂದೆ ಕರ್ನಾಟಕ ಹೈಕೋರ್ಟ್‌ಗೆ ಭಾರತ ಸರ್ಕಾರದ ಸಹಾಯಕ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: “ಕೈ-ಕಾಲು ಕತ್ತರಿಸಿದಾಗಷ್ಟೇ ಜನಕ್ಕೆ ಕಾನೂನಿನ ಭಯ ಬರತ್ತೆ”; ಲೈಂಗಿಕ ದೌರ್ಜನ್ಯ ಆರೋಪಿ ಜಾಮೀನು ಅರ್ಜಿ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಆಕ್ರೋಶ!

ಇತ್ತೀಚೆಗೆ ಕೇಂದ್ರ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಅನುಮೋದನೆ ನೀಡಿತ್ತು. ಇದರೊಂದಿಗೆ ಹೈಕೋರ್ಟ್‌ನ ಕಾರ್ಯನಿರ್ವಹಣಾ ನ್ಯಾಯಮೂರ್ತಿಗಳ ಸಂಖ್ಯೆ 48ಕ್ಕೆ ಏರಿಕೆಯಾಗಿದ್ದು, ಮಂಜೂರಾದ ಒಟ್ಟು 62 ಹುದ್ದೆಗಳ ಪೈಕಿ ಇನ್ನೂ ಹಲವು ಹುದ್ದೆಗಳು ಖಾಲಿಯಾಗಿವೆ ಎಂದು ಬಾರ್​​ ಆ್ಯಂಡ್​​ ಬೆಂಚ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:29 pm, Wed, 3 June 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More