Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು
ಕರ್ನಾಟಕ ನ್ಯಾಯಮೂರ್ತಿ ನೆರೆಯ ಹೈಕೋರ್ಟ್​​ಗೆ ವರ್ಗಾಯಿಸಲು ಶಿಫಾರಸು
Follow us
Ramesha M
| Updated By: ಸಾಧು ಶ್ರೀನಾಥ್​

Updated on:Aug 11, 2023 | 1:04 PM

ಬೆಂಗಳೂರು, ಆಗಸ್ಟ್​ 11: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ (Karnataka Justice) ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್​ (supreme court collegium) ಶಿಫಾರಸು ಮಾಡಿದೆ.

ಈ ಹಿಂದೆ ಒಡಿಶಾ ಹೈಕೋರ್ಟ್​ಗೆ ವರ್ಗಾಯಿಸಲು ಪ್ರಸ್ತಾಪಿಸಲಾಗಿತ್ತು. ನೆರೆ ರಾಜ್ಯಗಳ ಹೈಕೋರ್ಟ್​ಗೆ ವರ್ಗಾಯಿಸಲು ನ್ಯಾ. ಜಿ. ನರೇಂದರ್ ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್​ಗೆ (Andhra High Court) ವರ್ಗಾಯಿಸುವ ನಿರ್ಧಾರವನ್ನು ಕೊಲಿಜಿಯಮ್ ತೆಗೆದುಕೊಂಡಿದೆ.

ಇದನ್ನೂ ಓದಿ: ಸೈಟು ಒಂದೇ- ಹಕ್ಕುಪತ್ರ ವಿತರಣೆ ಇಬ್ಬರಿಗೆ! ಸಾಲ‌ದಲ್ಲಿ ಕಟ್ಟಿದ್ದ ಮನೆ ಕಂಡವರ ಪಾಲು, ಮಾಲೀಕರ ಪಡಿಪಾಟಲು

ನ್ಯಾಯಮೂರ್ತಿ ನರೇಂದರ್ ಅವರು ತಮ್ಮನ್ನು ಇನ್ನೂ 3 ರಿಂದ 4 ತಿಂಗಳ ಅವಧಿಗೆ ಬೆಂಗಳೂರಿನಲ್ಲಿ ಇರಿಸುವಂತೆ ಮನವಿ ಮಾಡಿದ್ದರು ಮತ್ತು ಆನಂತರ ತಮ್ಮನ್ನು ನೆರೆಯ ರಾಜ್ಯಗಳಿಗೆ ಅಂದರೆ ತೆಲಂಗಾಣ, ತಮಿಳುನಾಡು ಅಥವಾ ಆಂಧ್ರಪ್ರದೇಶಕ್ಕೆ ವರ್ಗಾಯಿಸಲು ಮನವಿ ಮಾಡಿದ್ದರು. ಸುಪ್ರೀಂ ಕೋರ್ಟ್ ಕೊಲಿಜಿಯಂ 3 ರಿಂದ 4 ತಿಂಗಳ ಕಾಲ ವರ್ಗಾವಣೆಯನ್ನು ಹಿಡಿದಿಟ್ಟುಕೊಳ್ಳಲು ನಿರಾಕರಿಸಿದರೂ, ನೆರೆಯ ರಾಜ್ಯಗಳಿಗೆ ವರ್ಗಾವಣೆಯ ಕೋರಿಕೆಗೆ ಅದು ಸಮ್ಮತಿಸಿತು.

ಆದ್ದರಿಂದ, ಅದು ತನ್ನ ಆಗಸ್ಟ್ 3 ರ ಶಿಫಾರಸನ್ನು ಮಾರ್ಪಡಿಸಿದ್ದು, ನ್ಯಾಯಮೂರ್ತಿ ನರೇಂದರ್ ಅವರನ್ನು ಒರಿಸ್ಸಾ ಹೈಕೋರ್ಟ್‌ಗೆ ಬದಲಾಗಿ ಆಂಧ್ರ ಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:52 pm, Fri, 11 August 23

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು