AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ.

ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು
ಕರ್ನಾಟಕ ನ್ಯಾಯಮೂರ್ತಿ ನೆರೆಯ ಹೈಕೋರ್ಟ್​​ಗೆ ವರ್ಗಾಯಿಸಲು ಶಿಫಾರಸು
Ramesha M
| Edited By: |

Updated on:Aug 11, 2023 | 1:04 PM

Share

ಬೆಂಗಳೂರು, ಆಗಸ್ಟ್​ 11: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ (Karnataka Justice) ವರ್ಗಾವಣೆಗೆ ಸುಪ್ರೀಂಕೋರ್ಟ್ ಕೊಲಿಜಿಯಮ್ ಶಿಫಾರಸು ಮಾಡಿದೆ. ಆಂಧ್ರ ಹೈಕೋರ್ಟ್​ಗೆ ನ್ಯಾ. ಜಿ. ನರೇಂದರ್​ರನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಕೊಲಿಜಿಯಮ್​ (supreme court collegium) ಶಿಫಾರಸು ಮಾಡಿದೆ.

ಈ ಹಿಂದೆ ಒಡಿಶಾ ಹೈಕೋರ್ಟ್​ಗೆ ವರ್ಗಾಯಿಸಲು ಪ್ರಸ್ತಾಪಿಸಲಾಗಿತ್ತು. ನೆರೆ ರಾಜ್ಯಗಳ ಹೈಕೋರ್ಟ್​ಗೆ ವರ್ಗಾಯಿಸಲು ನ್ಯಾ. ಜಿ. ನರೇಂದರ್ ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್​ಗೆ (Andhra High Court) ವರ್ಗಾಯಿಸುವ ನಿರ್ಧಾರವನ್ನು ಕೊಲಿಜಿಯಮ್ ತೆಗೆದುಕೊಂಡಿದೆ.

ಇದನ್ನೂ ಓದಿ: ಸೈಟು ಒಂದೇ- ಹಕ್ಕುಪತ್ರ ವಿತರಣೆ ಇಬ್ಬರಿಗೆ! ಸಾಲ‌ದಲ್ಲಿ ಕಟ್ಟಿದ್ದ ಮನೆ ಕಂಡವರ ಪಾಲು, ಮಾಲೀಕರ ಪಡಿಪಾಟಲು

ನ್ಯಾಯಮೂರ್ತಿ ನರೇಂದರ್ ಅವರು ತಮ್ಮನ್ನು ಇನ್ನೂ 3 ರಿಂದ 4 ತಿಂಗಳ ಅವಧಿಗೆ ಬೆಂಗಳೂರಿನಲ್ಲಿ ಇರಿಸುವಂತೆ ಮನವಿ ಮಾಡಿದ್ದರು ಮತ್ತು ಆನಂತರ ತಮ್ಮನ್ನು ನೆರೆಯ ರಾಜ್ಯಗಳಿಗೆ ಅಂದರೆ ತೆಲಂಗಾಣ, ತಮಿಳುನಾಡು ಅಥವಾ ಆಂಧ್ರಪ್ರದೇಶಕ್ಕೆ ವರ್ಗಾಯಿಸಲು ಮನವಿ ಮಾಡಿದ್ದರು. ಸುಪ್ರೀಂ ಕೋರ್ಟ್ ಕೊಲಿಜಿಯಂ 3 ರಿಂದ 4 ತಿಂಗಳ ಕಾಲ ವರ್ಗಾವಣೆಯನ್ನು ಹಿಡಿದಿಟ್ಟುಕೊಳ್ಳಲು ನಿರಾಕರಿಸಿದರೂ, ನೆರೆಯ ರಾಜ್ಯಗಳಿಗೆ ವರ್ಗಾವಣೆಯ ಕೋರಿಕೆಗೆ ಅದು ಸಮ್ಮತಿಸಿತು.

ಆದ್ದರಿಂದ, ಅದು ತನ್ನ ಆಗಸ್ಟ್ 3 ರ ಶಿಫಾರಸನ್ನು ಮಾರ್ಪಡಿಸಿದ್ದು, ನ್ಯಾಯಮೂರ್ತಿ ನರೇಂದರ್ ಅವರನ್ನು ಒರಿಸ್ಸಾ ಹೈಕೋರ್ಟ್‌ಗೆ ಬದಲಾಗಿ ಆಂಧ್ರ ಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:52 pm, Fri, 11 August 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ