AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​ಗೆ ಐವರು ಜಡ್ಜ್​ಗಳ ನೇಮಕಕ್ಕೆ ಶಿಫಾರಸು ಮಾಡಿದ ಸುಪ್ರೀಂ ಕೋರ್ಟ್ ಕೊಲಿಜಿಯಂ

ಕರ್ನಾಟಕದ ಹೈಕೋರ್ಟ್ ಗೆ 62 ಜಡ್ಜ್ ಹುದ್ದೆಗಳು ಮಂಜೂರಾಗಿದ್ದವು. ಸದ್ಯ 45 ಜಡ್ಜ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಈಗ ಐದು ಮಂದಿ ಬಡ್ತಿ ಪಡೆದು ನೇಮಕವಾದರೇ, ಜಡ್ಜ್ ಗಳ ಸಂಖ್ಯೆ 50ಕ್ಕೆ ಏರಿಕೆಯಾಗಲಿದೆ.

ಕರ್ನಾಟಕ ಹೈಕೋರ್ಟ್​ಗೆ ಐವರು ಜಡ್ಜ್​ಗಳ ನೇಮಕಕ್ಕೆ ಶಿಫಾರಸು ಮಾಡಿದ ಸುಪ್ರೀಂ ಕೋರ್ಟ್ ಕೊಲಿಜಿಯಂ
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Jul 20, 2022 | 8:05 PM

Share

ಕರ್ನಾಟಕ ಹೈಕೋರ್ಟ್ಗೆ(Karnataka High Court) ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ(Supreme Court Collegium) ಶಿಫಾರಸು ಮಾಡಿದೆ. ಜಿಲ್ಲಾ ಕೋರ್ಟ್ ಜಡ್ಜ್ಗಳಿಗೆ ಹೈಕೋರ್ಟ್ ಜಡ್ಜ್ ಹುದ್ದೆಗೆ ಬಡ್ತಿ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಅನಿಲ್ ಭೀಮಸೇನ ಕತ್ತಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಷಿ, ಉಮೇಶ್ ಮಂಜುನಾಥ ಭಟ್ ಅಡಿಗ, ತಲಕಾಡು ಗಿರಿಗೌಡ ಶಿವಶಂಕರೇಗೌಡ‌ ಅವರಿಗೆ ಹೈಕೋರ್ಟ್ ಜಡ್ಜ್ ಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಕರ್ನಾಟಕದ ಹೈಕೋರ್ಟ್ ಗೆ 62 ಜಡ್ಜ್ ಹುದ್ದೆಗಳು ಮಂಜೂರಾಗಿದ್ದವು. ಸದ್ಯ 45 ಜಡ್ಜ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಈಗ ಐದು ಮಂದಿ ಬಡ್ತಿ ಪಡೆದು ನೇಮಕವಾದರೇ, ಜಡ್ಜ್ ಗಳ ಸಂಖ್ಯೆ 50ಕ್ಕೆ ಏರಿಕೆಯಾಗಲಿದೆ.

ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ‌ಕೇಂದ್ರ ಸರ್ಕಾರ ಈಗ ಕೊಲಿಜಿಯಂ ಶಿಫಾರಸು ಒಪ್ಪಿಕೊಂಡು ನ್ಯಾಯಾಧೀಶರ ‌ನೇಮಕಕ್ಕೆ ಅಧಿಸೂಚನೆ ಹೊರಡಿಸಬೇಕು.‌ ಕೊಲಿಜಿಯಂ ಮೊದಲ ಬಾರಿ ಮಾಡಿದ ಶಿಫಾರಸನ್ನು ಒಪ್ಪದೇ ಮರುಪರಿಶೀಲನೆ ಮಾಡುವಂತೆ ವಾಪಸು ಕೇಂದ್ರ ಸರ್ಕಾರಕ್ಕೆ ಕಳಿಸಬಹುದು. ಆದರೆ ಎರಡನೇ ಬಾರಿಯೂ ಕೊಲಿಜಿಯಂ‌ ಅದೇ ಹೆಸರುಗಳನ್ನು‌ ನೇಮಕಕ್ಕೆ ಶಿಫಾರಸು ಮಾಡಿದರೇ, ಆಗ ಕೇಂದ್ರ ಸರ್ಕಾರ ಕೊಲಿಜಿಯಂ ಶಿಫಾರಸುಗಳನ್ನು ಒಪ್ಪಿಕೊಳ್ಳಲೇಬೇಕು.

Published On - 6:46 pm, Wed, 20 July 22

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?