AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎ ಅಧ್ಯಕ್ಷರಾಗಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ: ಸರ್ಕಾರದ ಆದೇಶಕ್ಕೆ ಸುಪ್ರಿಂ ನೋಟಿಸ್​

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಯಲಹಂಕದ ಶಾಸಕ ಎಸ್.ಆರ್.ವಿಶ್ವನಾಥ್​ನನ್ನು ನೇಮಕ ಮಾಡಿರವ ರಾಜ್ಯ ಸರ್ಕಾರದ ಆದೇಶ ರದ್ದು ಮಾಡುವಂತೆ ಬೆಂಗಳೂರಿನ ವಕೀಲ ಎ.ಎಸ್.ಹರೀಶ್ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಬಿಡಿಎ ಅಧ್ಯಕ್ಷರಾಗಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ: ಸರ್ಕಾರದ ಆದೇಶಕ್ಕೆ ಸುಪ್ರಿಂ ನೋಟಿಸ್​
ಸುಪ್ರೀಂ ಕೋರ್ಟ್
TV9 Web
| Updated By: ವಿವೇಕ ಬಿರಾದಾರ|

Updated on: Jan 09, 2023 | 10:27 PM

Share

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧ್ಯಕ್ಷರಾಗಿ ಯಲಹಂಕದ ಶಾಸಕ ಎಸ್.ಆರ್.ವಿಶ್ವನಾಥ್​ನನ್ನು (S R Vishwanath) ನೇಮಕ ಮಾಡಿರವ ರಾಜ್ಯ ಸರ್ಕಾರದ ಆದೇಶ ರದ್ದು ಮಾಡುವಂತೆ ಬೆಂಗಳೂರಿನ ವಕೀಲ ಎ.ಎಸ್.ಹರೀಶ್ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಸ್‌ಕೆ ಕೌಲ್ ಮತ್ತು ಎಎಸ್ ಓಕಾ ಅವರು ಇದ್ದ ದ್ವಿಸದಸ್ಯ ಪೀಠ ಇಂದು (ಜ.9) ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹಾಗೂ ಸರ್ಕಾರಕ್ಕೆ ನೋಟಿಸ್ ನೀಡಿದೆ. ಹಾಗೇ 6 ಆರು ವಾರದ ಒಳಗೆ ನೋಟಿಸ್​​ಗೆ ಉತ್ತರ ನೀಡುವಂತೆ ಆದೇಶಿಸಿ, ವಿಚಾರಣೆ ಮುಂದೂಡಿದೆ.

ಅರ್ಜಿದಾರರ ಪರ ವಾದ ಅರ್ಜಿದಾರರ ಪರ ವಾದಿಸಿದ ಎ.ಎಸ್.ಹರೀಶ್, ಬಿಡಿಎ ಅಧ್ಯಕ್ಷರು ಪೂರ್ಣಾವಧಿಗೆ ನೇಮಕವಾಗಬೇಕೆಂಬ ನಿಯಮವಿದೆ. ಶಾಸಕರಾದವರು ಬಿಡಿಎ ಪೂರ್ಣಾವಧಿ ಅಧ್ಯಕ್ಷರಾಗಲು ಸಾಧ್ಯವಿಲ್ಲ. ಹೀಗಾಗಿ ಎಸ್.ಆರ್.ವಿಶ್ವನಾಥ್ ನೇಮಕ ರದ್ದುಪಡಿಸಬೇಕು. ಹಾಗೆಯೇ, ಅವರುಶೈಕ್ಷಣಿಕ ಅರ್ಹತೆಯೂ ಹೊಂದಿಲ್ಲ. ಅವರು ಶಾಸಕರಾಗಿಯೂ, ಹಾಗೂ ಬಡಿಎ ಅಧ್ಯಕ್ಷರಾಗಿಯೂ ವೇತನ ಮತ್ತು ಭತ್ಯ ಪಡೆಯುತ್ತಿದ್ದಾರೆ. ಒಬ್ಬ ವ್ಯಕ್ತಿಯು ಸಾರ್ವಜನಿಕ ಹಣದಿಂದ ಎರಡು ಹುದ್ದೆಗಳಿಗೆ ಪ್ರತ್ಯೇಕ ವೇತನ ಹಾಗೂ ಭತ್ಯೆ ಪಡೆಯುವಂತಿಲ್ಲ. ಹಾಗಾಗಿ ಎಸ್‌.ಆರ್‌. ವಿಶ್ವನಾಥ್‌ ನೇಮಕ ಆದೇಶವನ್ನು ರದ್ದುಪಡಿಸಬೇಕು ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರ: ಕೊಂಕು ಮಾತನಾಡಿದ ಹೆಚ್​​.ಡಿ.ಕುಮಾರಸ್ವಾಮಿ

ಬಿಡಿಎ ನೇಮಕ ರದ್ದುಪಡಿಸಲು ಹೈಕೋರ್ಟ್​​ ನಿರಾಕರಣೆ

ಈ ಹಿಂದೆ ಎ.ಎಸ್.ಹರೀಶ್ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸಂವಿಧಾನದ ಪರಿಚ್ಛೇದ 191(1) (ಎ) ಪ್ರಕಾರ ಸಂಸದರು ಹಾಗೂ ಶಾಸಕರಾಗಿರುವವರು ಕೇಂದ್ರ ಅಥವಾ ರಾಜ್ಯ ಸರ್ಕಾರದಲ್ಲಿ ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಒಂದು ವೇಳೆ ಲಾಭದಾಯಕ ಹುದ್ದೆ ಹೊಂದಿದ್ದರೆ ಶಾಸಕ ಅಥವಾ ಸಂಸದ ಸ್ಥಾನದಿಂದ ಅನರ್ಹರಾಗುತ್ತಾರೆ ಎಂದು ಹೇಳುತ್ತದೆ. ಆದರೆ ಎಸ್.ಆರ್.ವಿಶ್ವನಾಥ್ ಶಾಸಕರಾಗಿ ಆಯ್ಕೆಯಾದ ಬಳಿಕ ಬಿಡಿಎ ಅಧ್ಯಕ್ಷರೂ ಆಗಿ ನೇಮಕವಾಗಿದ್ದಾರೆ ಹೀಗಾಗಿ ಅವರ ನೇಮಕವನ್ನು ರದ್ದು ಮಾಡುವಂತೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:  ಕೋಲಾರದಿಂದ ಕಣಕ್ಕಿಳಿಯಲು ಸಜ್ಜಾದ ಸಿದ್ಧರಾಮಯ್ಯ, ಬಾದಾಮಿ ಮುಖಂಡರಿಗೆ ಬಿಗ್ ಶಾಕ್​: ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದ ಕಾರ್ಯಕರ್ತರು

ಅರ್ಜಿ ವಿಚಾರಣೆಯನ್ನು ನಡೆಸಿದ್ದ ಹೈಕೋರ್ಟ್ ಸೆಪ್ಟೆಂಬರ್​ 3 2022 ರಂದು ನೇಮಕ ರದ್ದುಪಡಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು. ಮತ್ತು ಅಧ್ಯಕ್ಷರು ಸದಸ್ಯರ ನೇಮಕಕ್ಕೆ ಪ್ರತ್ಯೇಕ ನಿಯಮಾವಳಿ ರೂಪಿಸಬೇಕೆಂದು ವಿಭಾಗೀಯಪೀಠ ಸರ್ಕಾರಕ್ಕೆ ಸೂಚಿಸಿತ್ತು. ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಎ.ಎಸ್.ಹರೀಶ್ ಸುಪ್ರಿಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್