AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಜತೆ ಸುರ್ಜೇವಾಲ ಸಭೆ: ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಬಿಬಿಎಂಪಿ ಚುನಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿರುವ ಬಗ್ಗೆ ಬಿಜೆಪಿ, ಜೆಡಿಎಸ್​ ವಾಗ್ದಾಳಿ ನಡೆಸುತ್ತಿವೆ.

ಅಧಿಕಾರಿಗಳ ಜತೆ ಸುರ್ಜೇವಾಲ ಸಭೆ: ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
ಸಿಎಂ ಸಿದ್ದರಾಮಯ್ಯ
ಕಿರಣ್ ಹನುಮಂತ್​ ಮಾದಾರ್
|

Updated on:Jun 14, 2023 | 12:56 PM

Share

ಬೆಂಗಳೂರು: 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆ ಮುನ್ನವೇ ಬಿಬಿಎಂಪಿ ಚುನಾವಣೆಯನ್ನ(BBMP Elections) ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಈ ಸಂಬಂಧ ನಿನ್ನೆ(ಜೂ.13) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾಂಗ್ರೆಸ್(Congress) ಉಸ್ತುವಾರಿ ಸುರ್ಜೇವಾಲಾ (Surjewala)  ನೇತೃತ್ವದಲ್ಲಿ ಚುನಾವಣಾ ಪೂರ್ವ ಸಿದ್ದತೆಗಳ ಕುರಿತಾಗಿ ಚರ್ಚೆ ನಡೆದಿತ್ತು. ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಸಹ ಪಾಲ್ಗೊಂಡಿರುವುದಕ್ಕೆ ಬಿಜೆಪಿ(BJP), ಜೆಡಿಎಸ್​ ಕೆಂಡಾಮಂಡಲವಾಗಿದೆ. ಆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ‘ಸುರ್ಜೇವಾಲ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ನಿನ್ನೆ ಅಧಿಕೃತವಾಗಿ ಸಭೆ ನಡೆಸಿಲ್ಲ ಎಂದಿದ್ದಾರೆ.

ರಣದೀಪ್​​ ಸುರ್ಜೇವಾಲ ಶಾಂಗ್ರಿಲಾ ಹೋಟೆಲ್​​ನಲ್ಲಿ ಇದ್ದರು. ಈ ವೇಳೆ ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚಿಸಲು ಶಾಸಕರನ್ನು ಕರೆದಿದ್ದರು. ಇದೇ ಕಾರಣಕ್ಕೆ ಸುರ್ಜೇವಾಲ ಭೇಟಿಯಾಗಲು ಡಿ.ಕೆ.ಶಿವಕುಮಾರ್​ ಸೇರಿದಂತೆ ಅನೇಕ ಸಚಿವರು ಹೋಗಿದ್ದರು. ಜೊತೆಗೆ ಸಿಟಿರೌಂಡ್ಸ್​​ ಬಗ್ಗೆ ಡಿಕೆಶಿಯವರನ್ನ ಭೇಟಿಯಾಗಲು ಅಧಿಕಾರಿಗಳು ಬಂದಿದ್ದರು. ಈ ಕುರಿತು ಬಿಜೆಪಿಯವರು ರಾಜ್ಯಪಾಲರಿಗೆ ದೂರು ಕೊಡುವುದಾದ್ರೆ ಕೊಡಲಿ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:BBMP Election: ಬಿಬಿಎಂಪಿ ವಾರ್ಡ್​ ಮರು ವಿಂಗಡಣೆ, ರಾಮಲಿಂಗಾ ರೆಡ್ಡಿ ನೇತೃತ್ವದ ಸಮಿತಿಯ ವರದಿಯಲ್ಲಿ ಏನಿದೆ? ಚುನಾವಣೆ ಯಾವಾಗ? ಇಲ್ಲಿದೆ ವಿವರ

ಸಭೆ ವಿಚಾರವಾಗಿ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ

ಇನ್ನು ಅಧಿಕಾರಿಗಳ ಜತೆ ರಾಜ್ಯ ‘ಕೈ’​ ಉಸ್ತುವಾರಿ ಸುರ್ಜೇವಾಲ ಸಭೆ ವಿಚಾರ ‘ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹೌದು ‘ಅಧಿಕಾರಿಗಳಿಗೆ ಸುರ್ಜೇವಾಲ ಏನು ಸೂಚನೆ ಕೊಟ್ಟಿದ್ದಾರೆ ಗೊತ್ತಿದೆ. ಎಷ್ಟು ದಿನ ಈ ರೀತಿಯ ಸುಳ್ಳುಗಳನ್ನು ಹೇಳಿಕೊಂಡು ಬದುಕುತ್ತೀರಾ?, ಜನ ಮತ ಹಾಕಿದ್ದು ನಿಮಗೋ, ದಶಪಥ ಕಾಂಗ್ರೆಸ್ ಹೈಕಮಾಂಡ್ಗೋ?. ಎಂತಹ ದುರ್ಗತಿ ಬಂದಿದೆ ಎಂದು ಜನ ಅರ್ಥ ಮಾಡಿಕೊಳ್ಳಬೇಕು. ಹೈಕಮಾಂಡ್​ ಹಂಗಿನಾ ಸರ್ಕಾರ ಆಗಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಮೀಟಿಂಗ್​: ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ರಾಜ್ಯ ಲೂಟಿ ಮಾಡಲು ದೆಹಲಿಯಿಂದ ಬಂದಿರುವ ಪ್ರತಿನಿಧಿ ಎಂದ ಕುಮಾರಸ್ವಾಮಿ

ಸಭೆಯಲ್ಲಿದ್ದ ನಿಮ್ಮ ಮಂತ್ರಿಯೇ ಆ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯ ಲೂಟಿ ಮಾಡಲು ದೆಹಲಿಯಿಂದ ಬಂದಿರುವ ಪ್ರತಿನಿಧಿ ಇವರು, ‘ಕೈ’ ನಾಯಕರಿಗೆ ಡೈರಕ್ಷನ್ ಕೊಟ್ಟು ಲೂಟಿ ಮಾಡಲು ಬಂದಿದ್ದಾರೆ. 2 ರಾಷ್ಟ್ರೀಯ ಪಕ್ಷಗಳು ಇರುವುದೇ ರಾಜ್ಯವನ್ನು ಲೂಟಿ ಹೊಡೆಯೋಕೆ ಎನ್ನುವ ಮೂಲಕ ಕಾಂಗ್ರೆಸ್​ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರತಾಪ್​ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್​, ಬಿಜೆಪಿಯಿಂದ ಹೊಂದಾಣಿಕೆ ರಾಜಕಾರಣ ಆರೋಪ ಮಾಡಿದ ವಿಚಾರವಾಗಿ‘ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದು ಯಾರು?, ನಾನು ವಿರೋಧ ಪಕ್ಷದವರ ಜತೆ ರಾಜಕೀಯವಾಗಿ ಮಾತನಾಡಲ್ಲ. ಸಂಸದ ಪ್ರತಾಪ್ ಸಿಂಹ ಎಳಸು ಮನುಷ್ಯ, ಆತನಿಗೆ ರಾಜಕೀಯ ಪ್ರಬುದ್ಧತೆ ಇಲ್ಲ. ಮೈಸೂರು-ಬೆಂಗಳೂರು ಹೈವೇ ಮಾಡಿಸಿದ್ದು ನಾನೇ ಅಂತಾರೆ ಎಂದು ಪ್ರತಾಪ್​ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Wed, 14 June 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?